ಶುಕ್ರವಾರ, 19 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಕಾಂಗ್ರೆಸ್‌ ಸಂಘಟನೆಗೆ ಪ್ರತಿ ಬೂತ್‌ಗೆ ಡಿಜಿಟಲ್‌ ಯುತ್‌ ನೇಮಕ: ವಿನಯಕುಮಾರ ಸೊರಕೆ

Published : 19 ಸೆಪ್ಟೆಂಬರ್ 2025, 6:15 IST
Last Updated : 19 ಸೆಪ್ಟೆಂಬರ್ 2025, 6:15 IST
ಫಾಲೋ ಮಾಡಿ
Comments
‘ಶಾಡೋ ಪಿಎಂಗೆ ಧಮ್ಕಿ ಸರಿಯಲ್ಲ’
‘ರಾಹುಲ್‌ ಗಾಂಧಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕರು. ಅವರು ಶಾಡೋ ಪಿಎಂ. ಚುನಾವಣಾ ಆಯೋಗ ಅವರಿಗೆ ಧಮ್ಕಿ ಹಾಕುವ ಕೆಲಸ ಮಾಡುತ್ತಿರುವುದು ಸರಿಯಲ್ಲ’ ಎಂದು ವಿನಯಕುಮಾರ ಸೊರಕೆ ಹೇಳಿದರು. ‘ಮತ ಕಳ್ಳತನದ ಬಗ್ಗೆ ರಾಹುಲ್‌ ಗಾಂಧಿ ಅವರು ಬೆಳಕು ಚೆಲ್ಲಿದ್ದಾರೆ. ಅದರ ಬಗ್ಗೆ ತನಿಖೆ ನಡೆಸಿ ಪರಿಶೀಲಿಸಬೇಕು. ಅದು ಬಿಟ್ಟು ಚುನಾವಣಾ ಆಯೋಗ ರಾಹುಲ್‌ ಗಾಂಧಿ ಅವರಿಗೆ ಧಮ್ಕಿ ಹಾಕುತ್ತಿರುವುದು ಸರಿಯಲ್ಲ. ಈಗ ಮತ ಕಳ್ಳತನದ ಪ್ರಕರಣ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದೆ. ಅಲ್ಲಿ ಇತ್ಯರ್ಥವಾಗುತ್ತದೆ’ ಎಂದು ತಿಳಿಸಿದರು.
‘ಜಿಲ್ಲಾ ಕಾಂಗ್ರೆಸ್‌ ಸರಿಪಡಿಸಲು ಕೆಲಸ’
‘ಬೀದರ್‌ ಜಿಲ್ಲಾ ಕಾಂಗ್ರೆಸ್‌ ಸಮಿತಿ ಸರಿಪಡಿಸುವ ಕೆಲಸ ಮಾಡಲಾಗುವುದು. ಆದಷ್ಟು ಶೀಘ್ರದಲ್ಲಿಯೇ ಆ ಕೆಲಸ ಶುರುವಾಗುತ್ತದೆ’ ಎಂದು ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ವಿನಯಕುಮಾರ ಸೊರಕೆ ತಿಳಿಸಿದರು. ‘ಬಿಜೆಪಿ ಕೇಡರ್‌ ಹೊಂದಿರುವ ಪಕ್ಷ. ತಳಮಟ್ಟದಲ್ಲಿ ಪಕ್ಷದ ಸಂಘಟನೆ ಉತ್ತಮವಾಗಿದೆ. ಕಾಂಗ್ರೆಸ್‌ ಚುನಾವಣೆಗೆ ಸ್ಪರ್ಧಿಸುವ ಪಕ್ಷ ಎಂಬಂತಾಗಿದೆ. ಸಂಘಟನೆಯಲ್ಲಿ ಬದಲಾವಣೆ ತರುವುದಕ್ಕಾಗಿ ಕೆಲಸ ಮಾಡಲಾಗುತ್ತಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT