ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು 2019-20ರ ಆಯವ್ಯಯದಲ್ಲಿ ನನ್ನ ಕನಸಿನ ಮಹತ್ವಕಾಂಕ್ಷಿ ಯೋಜನೆಗಳಲ್ಲೊಂದಾದ ಮೇಹಕರ ಏತ ನೀರಾವರಿ ಯೋಜನೆಯನ್ನು ಅಂದಿನ ಸರ್ಕಾರದಲ್ಲಿ ಘೋಷಣೆ ಮಾಡಿಸಿದ್ದೆ. ಈ ಯೋಜನೆ ಪೂರ್ಣಗೊಂಡರೇ ಗಡಿ ಭಾಗದ ಸುಮಾರು 30 ಸಾವಿರ ಎಕರೆ ರೈತರ ಜಮೀನಿಗೆ ನೀರು ಹರಿಯಲಿದೆ. ಇದರಿಂದ ಆ ಭಾಗದ ರೈತರು ಆರ್ಥಿಕವಾಗಿ ಪ್ರಗತಿ ಹೊಂದಿ ಸ್ವಾವಲಂಬಿ ಜೀವನ ನಡೆಸಲು ಸಹಕಾರಿ ಆಗಲಿದೆ ಎಂದು ತಿಳಿಸಿದರು.