<p><strong>ಬೀದರ್:</strong> ‘ದೇಶದ್ರೋಹ ಪ್ರಕರಣದ ಆರೋಪಿಗಳನ್ನು ಭೇಟಿ ಮಾಡಿ ಬೆಂಬಲಿಸುವ ಮೂಲಕ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ’ ಎಂದು ಸಂಸದ ಭಗವಂತ ಖೂಬಾ ಆರೋಪಿಸಿದರು.</p>.<p>‘ಸಂಸತ್ತು ಅಂಗೀಕರಿಸಿದ ಸಿಎಎ ಕಾನೂನನ್ನು ವಿರೋಧಿಸುವ ಮೂಲಕ ಅಲ್ಪಸಂಖ್ಯಾತರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ’ ಎಂದು ನಗರದಲ್ಲಿ ಸೋಮವಾರ ಮಾಧ್ಯಮಗೋಷ್ಠಿಯಲ್ಲಿ ವಾಗ್ದಾಳಿ ನಡೆಸಿದರು.</p>.<p>‘ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಸಿಪಿಎಂ ಪಾಲಿಟ್ ಬ್ಯುರೊ ಸದಸ್ಯೆ ಬೃಂದಾ ಕಾರಟ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹಾಗೂ ಅಸಾದುದ್ದೀನ್ ಒವೈಸಿ ಅವರು ಜಿಲ್ಲಾ ಕಾರಾಗೃಹಕ್ಕೆ ತೆರಳಿ ದೇಶ ದ್ರೋಹ ಆರೋಪ ಎದುರಿಸುತ್ತಿರುವವರನ್ನು ಭೇಟಿಯಾಗಿರುವುದು ಖಂಡನೀಯ’ ಎಂದರು.</p>.<p>‘ಪೊಲೀಸರು ಸರಿಯಾದ ಕ್ರಮ ಕೈಗೊಂಡಿದ್ದು, ಸಮರ್ಥವಾಗಿ ತನ್ನ ಕಾರ್ಯವನ್ನು ಮಾಡುತ್ತಿದ್ದಾರೆ. ಆದರೆ, ಸಿದ್ದರಾಮಯ್ಯ ಅವರು ಪೊಲೀಸ್ ಇಲಾಖೆಯ ಮೇಲೆ ಒತ್ತಡ ತರುವ ಕೆಲಸ ಮಾಡುತ್ತಿದ್ದಾರೆ’ ಎಂದು ತಿಳಿಸಿದರು.</p>.<p>‘ಪ್ರಕರಣ ನಡೆದು 20 ದಿನಗಳು ಕಳೆದರೂ ಪೊಲೀಸರು ಶಾಹೀನ್ ಶಿಕ್ಷಣ ಸಂಸ್ಥೆಯ ಪದಾಧಿಕಾರಿಗಳನ್ನು ಬಂಧಿಸಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಫೆಬ್ರುವರಿ 19 ರಂದು ಬೆಳಿಗ್ಗೆ 11 ಗಂಟೆಗೆ ಬೀದರ್ನ ಝೀರಾ ಫಂಕ್ಷನ್ ಹಾಲ್ನಲ್ಲಿ ಬಿಜೆಪಿ ಜಿಲ್ಲಾ ಘಟಕದ ನೂತನ ಅಧ್ಯಕ್ಷ ಶಿವಾನಂದ ಮಂಠಾಳಕರ್ ಅವರ ಪದಗ್ರಹಣ ಸಮಾರಂಭ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ಕುಮಾರ ಕಟೀಲ್ ಪಾಲ್ಗೊಳ್ಳಲಿದ್ದಾರೆ’ ಎಂದು ತಿಳಿಸಿದರು.</p>.<p>ಈಶ್ವರಸಿಂಗ್ ಠಾಕೂರ್, ವಿಜಯಕುಮಾರ ಕಾಂಗೆ, ಹಣಮಂತ ಬುಳ್ಳಾ, ಬಸವರಾಜ ಜೋಜನಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ‘ದೇಶದ್ರೋಹ ಪ್ರಕರಣದ ಆರೋಪಿಗಳನ್ನು ಭೇಟಿ ಮಾಡಿ ಬೆಂಬಲಿಸುವ ಮೂಲಕ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ’ ಎಂದು ಸಂಸದ ಭಗವಂತ ಖೂಬಾ ಆರೋಪಿಸಿದರು.</p>.<p>‘ಸಂಸತ್ತು ಅಂಗೀಕರಿಸಿದ ಸಿಎಎ ಕಾನೂನನ್ನು ವಿರೋಧಿಸುವ ಮೂಲಕ ಅಲ್ಪಸಂಖ್ಯಾತರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ’ ಎಂದು ನಗರದಲ್ಲಿ ಸೋಮವಾರ ಮಾಧ್ಯಮಗೋಷ್ಠಿಯಲ್ಲಿ ವಾಗ್ದಾಳಿ ನಡೆಸಿದರು.</p>.<p>‘ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಸಿಪಿಎಂ ಪಾಲಿಟ್ ಬ್ಯುರೊ ಸದಸ್ಯೆ ಬೃಂದಾ ಕಾರಟ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹಾಗೂ ಅಸಾದುದ್ದೀನ್ ಒವೈಸಿ ಅವರು ಜಿಲ್ಲಾ ಕಾರಾಗೃಹಕ್ಕೆ ತೆರಳಿ ದೇಶ ದ್ರೋಹ ಆರೋಪ ಎದುರಿಸುತ್ತಿರುವವರನ್ನು ಭೇಟಿಯಾಗಿರುವುದು ಖಂಡನೀಯ’ ಎಂದರು.</p>.<p>‘ಪೊಲೀಸರು ಸರಿಯಾದ ಕ್ರಮ ಕೈಗೊಂಡಿದ್ದು, ಸಮರ್ಥವಾಗಿ ತನ್ನ ಕಾರ್ಯವನ್ನು ಮಾಡುತ್ತಿದ್ದಾರೆ. ಆದರೆ, ಸಿದ್ದರಾಮಯ್ಯ ಅವರು ಪೊಲೀಸ್ ಇಲಾಖೆಯ ಮೇಲೆ ಒತ್ತಡ ತರುವ ಕೆಲಸ ಮಾಡುತ್ತಿದ್ದಾರೆ’ ಎಂದು ತಿಳಿಸಿದರು.</p>.<p>‘ಪ್ರಕರಣ ನಡೆದು 20 ದಿನಗಳು ಕಳೆದರೂ ಪೊಲೀಸರು ಶಾಹೀನ್ ಶಿಕ್ಷಣ ಸಂಸ್ಥೆಯ ಪದಾಧಿಕಾರಿಗಳನ್ನು ಬಂಧಿಸಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಫೆಬ್ರುವರಿ 19 ರಂದು ಬೆಳಿಗ್ಗೆ 11 ಗಂಟೆಗೆ ಬೀದರ್ನ ಝೀರಾ ಫಂಕ್ಷನ್ ಹಾಲ್ನಲ್ಲಿ ಬಿಜೆಪಿ ಜಿಲ್ಲಾ ಘಟಕದ ನೂತನ ಅಧ್ಯಕ್ಷ ಶಿವಾನಂದ ಮಂಠಾಳಕರ್ ಅವರ ಪದಗ್ರಹಣ ಸಮಾರಂಭ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ಕುಮಾರ ಕಟೀಲ್ ಪಾಲ್ಗೊಳ್ಳಲಿದ್ದಾರೆ’ ಎಂದು ತಿಳಿಸಿದರು.</p>.<p>ಈಶ್ವರಸಿಂಗ್ ಠಾಕೂರ್, ವಿಜಯಕುಮಾರ ಕಾಂಗೆ, ಹಣಮಂತ ಬುಳ್ಳಾ, ಬಸವರಾಜ ಜೋಜನಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>