ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

13ರಂದು ಕಾಂಗ್ರೆಸ್ ಪಾದಯಾತ್ರೆ: ಶಾಸಕ ಈಶ್ವರ ಖಂಡ್ರೆ

ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಶಾಸಕ ಖಂಡ್ರೆ ಹೇಳಿಕೆ
Last Updated 11 ಆಗಸ್ಟ್ 2022, 4:18 IST
ಅಕ್ಷರ ಗಾತ್ರ

ಭಾಲ್ಕಿ: ‘ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ತಾಲ್ಲೂಕು ಕಾಂಗ್ರೆಸ್ ಸಮಿತಿ ವತಿಯಿಂದ 13 ರಂದು ಪಾದಯಾತ್ರೆ ನಡೆಸಲಾಗುವುದು’ ಎಂದು ಶಾಸಕ ಈಶ್ವರ ಖಂಡ್ರೆ ಹೇಳಿದರು.

ಪಟ್ಟಣದ ತಾಲ್ಲೂಕು ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.

ಇಂದಿನ ಯುವ ಪೀಳಿಗೆಗೆ ದೇಶಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಸ್ವಾತಂತ್ರ್ಯ ಸೇನಾನಿಗಳ ಮತ್ತು ಕಾಂಗ್ರೆಸ್ ನಾಯಕರ ಇತಿಹಾಸ ತಿಳಿಸುವ ಕೆಲಸ ಆಗಬೇಕಿದೆ ಎಂದರು.ಪಟ್ಟಣ ಸೇರಿ ಗ್ರಾಮೀಣ ಭಾಗದ ವಿವಿಧಡೆ ಸುಮಾರು 15 ಕಿ.ಮೀ ಪಾದಯಾತ್ರೆ ನಡೆಸಲಾಗುವುದು. 10 ಸಾವಿರ ತ್ರಿವರ್ಣ ಧ್ವಜ ತರಿಸಲಾಗುತ್ತಿದೆ ಎಂದುಹೇಳಿದರು. ನಡಿಗೆಯಲ್ಲಿ ಡಿಜೆ ಸೌಂಡ್ ಮೂಲಕ ದೇಶಭಕ್ತಿ ಗೀತೆಗಳು ಮೊಳಗಲಿವೆ. ಸ್ವಾತಂತ್ರ್ಯ ಸೇನಾನಿಗಳ, ಕಾಂಗ್ರೆಸ್ ನಾಯಕರ ಸ್ತಬ್ಧಚಿತ್ರಗಳ ಪ್ರದರ್ಶನ ನಡೆಯಲಿದೆ ಎಂದರು. ಕಾಂಗ್ರೆಸ್ ತಾಲ್ಲೂಕು ಸಮಿತಿ ಅಧ್ಯಕ್ಷ ಹಣಮಂತರಾವ ಚವ್ಹಾಣ, ಪ್ರಕಾಶ ಮಾಶೆಟ್ಟೆ, ಮಲ್ಲಿಕಾರ್ಜುನ ಪಾಟೀಲ, ಪುರಸಭೆ ಅಧ್ಯಕ್ಷ ಅನಿಲ್‌ ಸುಂಟೆ, ಉಪಾಧ್ಯಕ್ಷ ಅಶೋಕ ಗಾಯಕ್ಕವಾಡ್ ಹಾಗೂ ಮಾಜಿ ಅಧ್ಯಕ್ಷ ಬಸವರಾಜ ವಂಕೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT