ಇಂದಿನ ಯುವ ಪೀಳಿಗೆಗೆ ದೇಶಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಸ್ವಾತಂತ್ರ್ಯ ಸೇನಾನಿಗಳ ಮತ್ತು ಕಾಂಗ್ರೆಸ್ ನಾಯಕರ ಇತಿಹಾಸ ತಿಳಿಸುವ ಕೆಲಸ ಆಗಬೇಕಿದೆ ಎಂದರು.ಪಟ್ಟಣ ಸೇರಿ ಗ್ರಾಮೀಣ ಭಾಗದ ವಿವಿಧಡೆ ಸುಮಾರು 15 ಕಿ.ಮೀ ಪಾದಯಾತ್ರೆ ನಡೆಸಲಾಗುವುದು. 10 ಸಾವಿರ ತ್ರಿವರ್ಣ ಧ್ವಜ ತರಿಸಲಾಗುತ್ತಿದೆ ಎಂದುಹೇಳಿದರು. ನಡಿಗೆಯಲ್ಲಿ ಡಿಜೆ ಸೌಂಡ್ ಮೂಲಕ ದೇಶಭಕ್ತಿ ಗೀತೆಗಳು ಮೊಳಗಲಿವೆ. ಸ್ವಾತಂತ್ರ್ಯ ಸೇನಾನಿಗಳ, ಕಾಂಗ್ರೆಸ್ ನಾಯಕರ ಸ್ತಬ್ಧಚಿತ್ರಗಳ ಪ್ರದರ್ಶನ ನಡೆಯಲಿದೆ ಎಂದರು. ಕಾಂಗ್ರೆಸ್ ತಾಲ್ಲೂಕು ಸಮಿತಿ ಅಧ್ಯಕ್ಷ ಹಣಮಂತರಾವ ಚವ್ಹಾಣ, ಪ್ರಕಾಶ ಮಾಶೆಟ್ಟೆ, ಮಲ್ಲಿಕಾರ್ಜುನ ಪಾಟೀಲ, ಪುರಸಭೆ ಅಧ್ಯಕ್ಷ ಅನಿಲ್ ಸುಂಟೆ, ಉಪಾಧ್ಯಕ್ಷ ಅಶೋಕ ಗಾಯಕ್ಕವಾಡ್ ಹಾಗೂ ಮಾಜಿ ಅಧ್ಯಕ್ಷ ಬಸವರಾಜ ವಂಕೆ ಇದ್ದರು.