<p><strong>ಬಸವಕಲ್ಯಾಣ (ಬೀದರ್ ಜಿಲ್ಲೆ):</strong> ‘ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಪಂಚಾಯಿತಿ ಮಟ್ಟದಲ್ಲಿ ಕಾರ್ಯಕರ್ತರ ಅಭಿಪ್ರಾಯ ಪಡೆದು ಸರ್ವಸಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು. ಟಿಕೆಟ್ ದೊರೆಯದಿದ್ದಾಗ ಅಸಮಾಧಾನಗೊಳ್ಳುವವರು ಈಗಲೇ ಪಕ್ಷ ಬಿಟ್ಟು ಹೋಗಬಹುದು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಖಂಡತುಂಡವಾಗಿ ಹೇಳಿದರು.</p>.<p>ಇಲ್ಲಿಯ ಬೇಗ್ ಫಂಕ್ಷನ್ ಹಾಲ್ನಲ್ಲಿ ಮಂಗಳವಾರ ಬ್ಲಾಕ್ ಕಾಂಗ್ರೆಸ್ ಸಮಿತಿ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.<br />‘ಉಪ ಚುನಾವಣೆಯಲ್ಲಿ ಸ್ಪರ್ಧಿಸಲು 16 ಜನ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ಜಾತಿ, ಧರ್ಮದ ಆಧಾರದ ಮೇಲೆ ಟಿಕೆಟ್ ಕೊಡುವುದಿಲ್ಲ. ಪಕ್ಷದ ನಿಷ್ಠೆಯೇ ಟಿಕೆಟ್ಗೆ ಮಾನ ದಂಡವಾಗಲಿದೆ’ ಎಂದು ಹೇಳಿದರು.</p>.<p><br />‘ಒಬ್ಬರಿಗೆ ಪಕ್ಷದ ಟಿಕೆಟ್ ಕೊಟ್ಟರೆ ಉಳಿದವರು ಅವರನ್ನು ಸೋಲಿಸುವ ಕೆಲಸ ಮಾಡಬಾರದು. ವೈಯಕ್ತಿಕ ದ್ವೇಷದಿಂದ ಪಕ್ಷಕ್ಕೆ ಹಾನಿಯಾಗಬಾರದು. ಪಕ್ಷಕ್ಕಾಗಿ ನಿಷ್ಠೆಯಿಂದ ಕೆಲಸ ಮಾಡಬೇಕು’ ಎಂದು ಮನವಿ ಮಾಡಿದರು.</p>.<p><br />‘ಪ್ರಜಾಪ್ರಭುತ್ವದಲ್ಲಿ ಪೈಪೋಟಿ ಇರುತ್ತದೆ. ರಾಜ್ಯದ ಜನತೆ ಬಸವಕಲ್ಯಾಣವನ್ನು ಎದುರು ನೋಡುತ್ತಿದ್ದಾರೆ. ಮಾನವ ಧರ್ಮ, ಕಾಂಗ್ರೆಸ್ ಜಾತಿ, ಬಸವ ತತ್ವ ನೀತಿಯಿಂದಾಗಿ ಇಲ್ಲಿಯ ಜನ ಕಾಂಗ್ರೆಸ್ನ ಸಾಮಾನ್ಯ ಕಾರ್ಯಕರ್ತ ಬಿ. ನಾರಾಯಣರಾವ್ ಅವರನ್ನು ವಿಧಾನಸಭೆಗೆ ಆಯ್ಕೆ ಮಾಡಿದ್ದರು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಸವಕಲ್ಯಾಣ (ಬೀದರ್ ಜಿಲ್ಲೆ):</strong> ‘ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಪಂಚಾಯಿತಿ ಮಟ್ಟದಲ್ಲಿ ಕಾರ್ಯಕರ್ತರ ಅಭಿಪ್ರಾಯ ಪಡೆದು ಸರ್ವಸಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು. ಟಿಕೆಟ್ ದೊರೆಯದಿದ್ದಾಗ ಅಸಮಾಧಾನಗೊಳ್ಳುವವರು ಈಗಲೇ ಪಕ್ಷ ಬಿಟ್ಟು ಹೋಗಬಹುದು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಖಂಡತುಂಡವಾಗಿ ಹೇಳಿದರು.</p>.<p>ಇಲ್ಲಿಯ ಬೇಗ್ ಫಂಕ್ಷನ್ ಹಾಲ್ನಲ್ಲಿ ಮಂಗಳವಾರ ಬ್ಲಾಕ್ ಕಾಂಗ್ರೆಸ್ ಸಮಿತಿ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.<br />‘ಉಪ ಚುನಾವಣೆಯಲ್ಲಿ ಸ್ಪರ್ಧಿಸಲು 16 ಜನ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ಜಾತಿ, ಧರ್ಮದ ಆಧಾರದ ಮೇಲೆ ಟಿಕೆಟ್ ಕೊಡುವುದಿಲ್ಲ. ಪಕ್ಷದ ನಿಷ್ಠೆಯೇ ಟಿಕೆಟ್ಗೆ ಮಾನ ದಂಡವಾಗಲಿದೆ’ ಎಂದು ಹೇಳಿದರು.</p>.<p><br />‘ಒಬ್ಬರಿಗೆ ಪಕ್ಷದ ಟಿಕೆಟ್ ಕೊಟ್ಟರೆ ಉಳಿದವರು ಅವರನ್ನು ಸೋಲಿಸುವ ಕೆಲಸ ಮಾಡಬಾರದು. ವೈಯಕ್ತಿಕ ದ್ವೇಷದಿಂದ ಪಕ್ಷಕ್ಕೆ ಹಾನಿಯಾಗಬಾರದು. ಪಕ್ಷಕ್ಕಾಗಿ ನಿಷ್ಠೆಯಿಂದ ಕೆಲಸ ಮಾಡಬೇಕು’ ಎಂದು ಮನವಿ ಮಾಡಿದರು.</p>.<p><br />‘ಪ್ರಜಾಪ್ರಭುತ್ವದಲ್ಲಿ ಪೈಪೋಟಿ ಇರುತ್ತದೆ. ರಾಜ್ಯದ ಜನತೆ ಬಸವಕಲ್ಯಾಣವನ್ನು ಎದುರು ನೋಡುತ್ತಿದ್ದಾರೆ. ಮಾನವ ಧರ್ಮ, ಕಾಂಗ್ರೆಸ್ ಜಾತಿ, ಬಸವ ತತ್ವ ನೀತಿಯಿಂದಾಗಿ ಇಲ್ಲಿಯ ಜನ ಕಾಂಗ್ರೆಸ್ನ ಸಾಮಾನ್ಯ ಕಾರ್ಯಕರ್ತ ಬಿ. ನಾರಾಯಣರಾವ್ ಅವರನ್ನು ವಿಧಾನಸಭೆಗೆ ಆಯ್ಕೆ ಮಾಡಿದ್ದರು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>