<p><strong>ಬೀದರ್:</strong> ‘ಮುಂಬರುವ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ ಕಾರ್ಯಕರ್ತರಿಗೆ ಅವಕಾಶ ಕಲ್ಪಿಸಲಾಗುವುದು’ ಎಂದು ಮಾಜಿಶಾಸಕರೂ ಆದ ಕಾಂಗ್ರೆಸ್ ಮುಖಂಡ ಅಶೋಕ್ ಖೇಣಿ ಭರವಸೆ ನೀಡಿದರು.</p>.<p>ನಗರದ ರಾಂಪೂರೆ ಕಾಲೊನಿಯಲ್ಲಿ ಇತ್ತೀಚೆಗೆ ನಡೆದ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅವರ ಅಹವಾಲು ಆಲಿಸಿ ಮಾತನಾಡಿದರು.</p>.<p>ರಾಜ್ಯದಲ್ಲಿ ನಮ್ಮದೇ ಸರ್ಕಾರ ಅಧಿಕಾರದಲ್ಲಿದೆ. ಕಾರ್ಯಕರ್ತರು ಉತ್ಸಾಹದಿಂದ ಕೆಲಸ ಮಾಡಬೇಕು. ಯಾವುದೇ ಕುಂದು ಕೊರತೆಗಳಿದ್ದಲ್ಲಿ ಕಚೇರಿಯನ್ನು ಸಂಪರ್ಕಿಸಬೇಕು. ಅವುಗಳನ್ನು ಆದ್ಯತೆ ಮೇರೆಗೆ ಬಗೆಹರಿಸಲಾಗುವುದು ಎಂದರು.</p>.<p>ಲೋಕಸಭೆ ಚುನಾವಣೆ, ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿನಲ್ಲಿ ಕಾರ್ಯಕರ್ತರ ಪಾತ್ರ ಪ್ರಮುಖವಾದುದು. ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಡಿಮೆ ಮತಗಳ ಅಂತರದಿಂದ ಸೋಲಾಗಿದೆ. ಆದರೆ, ಅದಕ್ಕೆ ಎದೆಗುಂದಬಾರದು ಎಂದು ಹೇಳಿದರು.</p>.<p>ಬ್ಲಾಕ್ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಚಂದ್ರಶೇಖರ್ ಚನಶೆಟ್ಟಿ, ಕರೀಂ ಸಾಬ್, ಮೂಂಚೂಣಿ ಘಟಕದ ಅಧ್ಯಕ್ಷರು, ಸದಸ್ಯರು, ಕಾರ್ಯಕರ್ತರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ‘ಮುಂಬರುವ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ ಕಾರ್ಯಕರ್ತರಿಗೆ ಅವಕಾಶ ಕಲ್ಪಿಸಲಾಗುವುದು’ ಎಂದು ಮಾಜಿಶಾಸಕರೂ ಆದ ಕಾಂಗ್ರೆಸ್ ಮುಖಂಡ ಅಶೋಕ್ ಖೇಣಿ ಭರವಸೆ ನೀಡಿದರು.</p>.<p>ನಗರದ ರಾಂಪೂರೆ ಕಾಲೊನಿಯಲ್ಲಿ ಇತ್ತೀಚೆಗೆ ನಡೆದ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅವರ ಅಹವಾಲು ಆಲಿಸಿ ಮಾತನಾಡಿದರು.</p>.<p>ರಾಜ್ಯದಲ್ಲಿ ನಮ್ಮದೇ ಸರ್ಕಾರ ಅಧಿಕಾರದಲ್ಲಿದೆ. ಕಾರ್ಯಕರ್ತರು ಉತ್ಸಾಹದಿಂದ ಕೆಲಸ ಮಾಡಬೇಕು. ಯಾವುದೇ ಕುಂದು ಕೊರತೆಗಳಿದ್ದಲ್ಲಿ ಕಚೇರಿಯನ್ನು ಸಂಪರ್ಕಿಸಬೇಕು. ಅವುಗಳನ್ನು ಆದ್ಯತೆ ಮೇರೆಗೆ ಬಗೆಹರಿಸಲಾಗುವುದು ಎಂದರು.</p>.<p>ಲೋಕಸಭೆ ಚುನಾವಣೆ, ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿನಲ್ಲಿ ಕಾರ್ಯಕರ್ತರ ಪಾತ್ರ ಪ್ರಮುಖವಾದುದು. ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಡಿಮೆ ಮತಗಳ ಅಂತರದಿಂದ ಸೋಲಾಗಿದೆ. ಆದರೆ, ಅದಕ್ಕೆ ಎದೆಗುಂದಬಾರದು ಎಂದು ಹೇಳಿದರು.</p>.<p>ಬ್ಲಾಕ್ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಚಂದ್ರಶೇಖರ್ ಚನಶೆಟ್ಟಿ, ಕರೀಂ ಸಾಬ್, ಮೂಂಚೂಣಿ ಘಟಕದ ಅಧ್ಯಕ್ಷರು, ಸದಸ್ಯರು, ಕಾರ್ಯಕರ್ತರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>