<p><strong>ಬೀದರ್: </strong>ಜಿಲ್ಲೆಯಲ್ಲಿ ಪ್ರತಿದಿನ ಸರಾಸರಿ ಶೇ .65ರಷ್ಟು ಕೋವಿಡ್ 19 ಪಾಸಿಟಿವ್ ಪ್ರಕರಣಗಳು ದೃಢಪಡುತ್ತಿರುವುದರಿಂದ ಸೋಂಕಿತರೊಂದಿಗಿನ ಇತರರ ಸಂಪರ್ಕ ಪತ್ತೆ ಹಚ್ಚುವುದು ಅತ್ಯಂತ ಮಹತ್ವದ ಕೆಲಸವಾಗಿದೆ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ತಿಳಿಸಿದರು.</p>.<p>ವಾರ್ಡ್ವಾರು ಮತ್ತು ಗ್ರಾಮ ಪಂಚಾಯಿತಿವಾರು ಕೋವಿಡ್ 19 ಸಂಪರ್ಕ ಪತ್ತೆ ಹಚ್ಚುವ ಸಿಬ್ಬಂದಿಗೆ ಶುಕ್ರವಾರ ನಗರದ ಡಾ. ಚನ್ನಬಸವ ಪಟ್ಟದ್ದೇವರು ಜಿಲ್ಲಾ ರಂಗಮಂದಿರದಲ್ಲಿ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಕೊರೊನಾ ವೈರಸ್ ಒಬ್ಬರಿಂದ ಇನ್ನೊಬ್ಬರಿಗೆ ಹರಡುವುದನ್ನು ತಡೆಯಲೆಂದೇ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ. ಸಂಪರ್ಕ ಪತ್ತೆ ಹಚ್ಚುವ ಕಾರ್ಯ ನಾಳೆ ಮಾಡಿದರಾಯಿತು ಎನ್ನುವಂತಿಲ್ಲ. ಅದನ್ನು ತಕ್ಷಣವೇ ಮಾಡಬೇಕು ಎಂದು ಹೇಳಿದರು.</p>.<p>ಮಾರ್ಚ್ನಿಂದ ಈವರೆಗೆ ಎಲ್ಲರೂ ಕೋವಿಡ್ ವಿರುದ್ಧದ ಹೋರಾಟದಲ್ಲಿ ಭಾಗಿಯಾಗಿದ್ದೇವೆ. ಸಂಪರ್ಕ ಪತ್ತೆ, ಗಂಟಲು ದ್ರವದ ಪರೀಕ್ಷೆ, ಹೋಮ್ ಕ್ವಾರಂಟೈನ್, ಹಲವು ಆ್ಯಪ್ಗಳ ನಿರ್ವಹಣೆ ಕಾರ್ಯವನ್ನು ಜಿಲ್ಲಾ ಆರೋಗ್ಯ ಇಲಾಖೆ ಮಾಡುತ್ತಿದೆ ಎಂದು ತಿಳಿಸಿದರು.</p>.<p>ಜಿಲ್ಲೆಯಲ್ಲಿ ಜೂನ್ ಮತ್ತು ಜುಲೈನಲ್ಲಿ ಕೋವಿಡ್ ಸೋಂಕಿತರ ಸಾವಿನ ಸಂಖ್ಯೆ ಏರುಗತಿಯಲ್ಲಿತ್ತು. ಸಂಪರ್ಕ ಪತ್ತೆ ಹಚ್ಚುವ ಕಾರ್ಯಕ್ಕೆ ಹೆಚ್ಚಿನ ಒತ್ತು ಕೊಟ್ಟಿದ್ದರಿಂದ ಬಳಿಕ ತುಸು ನಿಯಂತ್ರಣಕ್ಕೆ ಬಂದಿತು. ಆದ್ದರಿಂದ ಸಂಪರ್ಕ ಪತ್ತೆ ಕಾರ್ಯವನ್ನು ಸಾಮಾಜಿಕ ಕಾರ್ಯವೆಂದು ಭಾವಿಸಿ ನಿರ್ವಹಿಸಬೇಕು ಎಂದು ಹೇಳಿದರು.</p>.<p>ರ್ಯಾಟ್ ಮತ್ತು ಆರ್ಟಿಪಿಸಿಆರ್ ಪರೀಕ್ಷೆ ನಡೆಸುವ ಮೂಲಕ ಕೋವಿಡ್ ಹರಡುವುದನ್ನು ತಡೆಗಟ್ಟಲು ಒತ್ತು ಕೊಡಲಾಗುತ್ತಿದೆ ಎಂದರು.</p>.<p>ಕಾಂಟ್ಯಾಕ್ಟ್ ಟ್ರೇಸಿಂಗ್ ಆ್ಯಪ್ ಬಳಸಿ ಸಂಪರ್ಕ ಪತ್ತೆ ಹಚ್ಚುವ ಕ್ರಮದ ಬಗ್ಗೆ ಜಿಲ್ಲಾ ಮಾಸ್ಟರ್ ಟ್ರೇನರ್ ಡಾ.ಗೌತಮ ಅರಳಿ ಮಾಹಿತಿ ನೀಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: </strong>ಜಿಲ್ಲೆಯಲ್ಲಿ ಪ್ರತಿದಿನ ಸರಾಸರಿ ಶೇ .65ರಷ್ಟು ಕೋವಿಡ್ 19 ಪಾಸಿಟಿವ್ ಪ್ರಕರಣಗಳು ದೃಢಪಡುತ್ತಿರುವುದರಿಂದ ಸೋಂಕಿತರೊಂದಿಗಿನ ಇತರರ ಸಂಪರ್ಕ ಪತ್ತೆ ಹಚ್ಚುವುದು ಅತ್ಯಂತ ಮಹತ್ವದ ಕೆಲಸವಾಗಿದೆ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ತಿಳಿಸಿದರು.</p>.<p>ವಾರ್ಡ್ವಾರು ಮತ್ತು ಗ್ರಾಮ ಪಂಚಾಯಿತಿವಾರು ಕೋವಿಡ್ 19 ಸಂಪರ್ಕ ಪತ್ತೆ ಹಚ್ಚುವ ಸಿಬ್ಬಂದಿಗೆ ಶುಕ್ರವಾರ ನಗರದ ಡಾ. ಚನ್ನಬಸವ ಪಟ್ಟದ್ದೇವರು ಜಿಲ್ಲಾ ರಂಗಮಂದಿರದಲ್ಲಿ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಕೊರೊನಾ ವೈರಸ್ ಒಬ್ಬರಿಂದ ಇನ್ನೊಬ್ಬರಿಗೆ ಹರಡುವುದನ್ನು ತಡೆಯಲೆಂದೇ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ. ಸಂಪರ್ಕ ಪತ್ತೆ ಹಚ್ಚುವ ಕಾರ್ಯ ನಾಳೆ ಮಾಡಿದರಾಯಿತು ಎನ್ನುವಂತಿಲ್ಲ. ಅದನ್ನು ತಕ್ಷಣವೇ ಮಾಡಬೇಕು ಎಂದು ಹೇಳಿದರು.</p>.<p>ಮಾರ್ಚ್ನಿಂದ ಈವರೆಗೆ ಎಲ್ಲರೂ ಕೋವಿಡ್ ವಿರುದ್ಧದ ಹೋರಾಟದಲ್ಲಿ ಭಾಗಿಯಾಗಿದ್ದೇವೆ. ಸಂಪರ್ಕ ಪತ್ತೆ, ಗಂಟಲು ದ್ರವದ ಪರೀಕ್ಷೆ, ಹೋಮ್ ಕ್ವಾರಂಟೈನ್, ಹಲವು ಆ್ಯಪ್ಗಳ ನಿರ್ವಹಣೆ ಕಾರ್ಯವನ್ನು ಜಿಲ್ಲಾ ಆರೋಗ್ಯ ಇಲಾಖೆ ಮಾಡುತ್ತಿದೆ ಎಂದು ತಿಳಿಸಿದರು.</p>.<p>ಜಿಲ್ಲೆಯಲ್ಲಿ ಜೂನ್ ಮತ್ತು ಜುಲೈನಲ್ಲಿ ಕೋವಿಡ್ ಸೋಂಕಿತರ ಸಾವಿನ ಸಂಖ್ಯೆ ಏರುಗತಿಯಲ್ಲಿತ್ತು. ಸಂಪರ್ಕ ಪತ್ತೆ ಹಚ್ಚುವ ಕಾರ್ಯಕ್ಕೆ ಹೆಚ್ಚಿನ ಒತ್ತು ಕೊಟ್ಟಿದ್ದರಿಂದ ಬಳಿಕ ತುಸು ನಿಯಂತ್ರಣಕ್ಕೆ ಬಂದಿತು. ಆದ್ದರಿಂದ ಸಂಪರ್ಕ ಪತ್ತೆ ಕಾರ್ಯವನ್ನು ಸಾಮಾಜಿಕ ಕಾರ್ಯವೆಂದು ಭಾವಿಸಿ ನಿರ್ವಹಿಸಬೇಕು ಎಂದು ಹೇಳಿದರು.</p>.<p>ರ್ಯಾಟ್ ಮತ್ತು ಆರ್ಟಿಪಿಸಿಆರ್ ಪರೀಕ್ಷೆ ನಡೆಸುವ ಮೂಲಕ ಕೋವಿಡ್ ಹರಡುವುದನ್ನು ತಡೆಗಟ್ಟಲು ಒತ್ತು ಕೊಡಲಾಗುತ್ತಿದೆ ಎಂದರು.</p>.<p>ಕಾಂಟ್ಯಾಕ್ಟ್ ಟ್ರೇಸಿಂಗ್ ಆ್ಯಪ್ ಬಳಸಿ ಸಂಪರ್ಕ ಪತ್ತೆ ಹಚ್ಚುವ ಕ್ರಮದ ಬಗ್ಗೆ ಜಿಲ್ಲಾ ಮಾಸ್ಟರ್ ಟ್ರೇನರ್ ಡಾ.ಗೌತಮ ಅರಳಿ ಮಾಹಿತಿ ನೀಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>