<p><strong>ಬೀದರ್:</strong> ‘ಪ್ರತಿಯೊಬ್ಬರಿಗೂ ಸಮಾನ ಹಕ್ಕು ಕಲ್ಪಿಸಿರುವ ಕಾರಣ ಭಾರತದ ಸಂವಿಧಾನ ವಿಶ್ವದಲ್ಲೇ ಶ್ರೇಷ್ಠವಾಗಿದೆ’ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಕಾಡ್ಲೂರ ಸತ್ಯ ನಾರಾಯಣಾಚಾರ್ಯ ಬಣ್ಣಿಸಿದರು.</p>.<p>ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ವಕೀಲರ ಸಂಘದ ವತಿಯಿಂದ ಜಿಲ್ಲಾ ವಕೀಲರ ಸಭಾಂಗಣದಲ್ಲಿ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /><br />’ವಿವಿಧೆತೆಯಲ್ಲಿ ಏಕತೆ ಇರುವುದು ಭಾರತ ದೇಶದ ವಿಶೇಷತೆಯಾಗಿದೆ. ಅಂತೆಯೇ ಭಾರತದ ಎಲ್ಲ ನಾಗರಿಕರಿಗೆ ಸಮಾನವಾದ ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯ ಹಾಗೂ ಹಕ್ಕು ಒದಗಿಸಲಾಗಿದೆ’ ಎಂದು ತಿಳಿಸಿದರು.</p>.<p>ಗುಲ್ಬರ್ಗಾ ವಿಶ್ವವಿದ್ಯಾಲಯದ ಕಾನೂನು ವಿಭಾಗದ ಡೀನ್ ಡಾ.ದೇವಿದಾಸ ಮಾಲೆ ಅವರು ಮಾತನಾಡಿ, ‘ಜನೋಪರಕ್ಕಾಗಿ ಒಳ್ಳೆಯ ಅಂಶಗಳನ್ನು ಅಳವಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಭಾರತ ಸಂವಿಧಾನವನ್ನು ಜೀವಂತ ಗ್ರಂಥ ಎಂದೇ ಭಾವಿಸಬಹುದಾಗಿದೆ’ ಎಂದರು.</p>.<p>ಹಿರಿಯ ಸಿವಿಲ್ ನ್ಯಾಯಾಧೀಶ ಸಿದ್ರಾಮ ಟಿ.ಪಿ. ಮಾತನಾಡಿ, ‘ಸಮಾಜದಲ್ಲಿನ ಕಟ್ಟಕಡೆಯ ವ್ಯಕ್ತಿಗೂ ಸಮಾನ ಅವಕಾಶಗಳು ಸಿಗಬೇಕು ಎಂದು ತಿಳಿಸುವುದು ಭಾರತ ಸಂವಿಧಾನದ ವಿಶೇಷತೆಯಾಗಿದೆ’ ಎಂದರು.</p>.<p>ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಅಶೋಕ ಮಾನೂರೆ ಅವರು ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಝರಿನಾ, 1ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಆರ್.ಪಿ.ಗೌಡ ಇದ್ದರು. ವಕೀಲರ ಸಂಘದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.</p>.<p class="Subhead"><strong>ಅಕ್ಕಮಹಾದೇವಿ ಮಹಿಳಾ ಕಾಲೇಜು:</strong></p>.<p>‘ಭಾರತದ ಸಂವಿಧಾನ ರಚಿಸಿ ಎಲ್ಲ ಮಹಾಪುರುಷರ ಕನಸನ್ನು ನನಸು ಮಾಡಿದ ಕೀರ್ತಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ’ ಎಂದು ಪ್ರಾಚಾರ್ಯ ಪ್ರೊ.ಶಿವಶರಣಪ್ಪ ಹುಗ್ಗೆಪಾಟೀಲ ಹೇಳಿದರು.</p>.<p>ನಗರದ ಅಕ್ಕಮಹಾದೇವಿ ಮಹಿಳಾ ಕಾಲೇಜಿನ ಆವರಣದಲ್ಲಿ ಆಯೋಜಿಸಿದ್ದ ಸಂವಿಧಾನ ದಿವಸ್ ಆಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>’ಡಾ.ಅಂಬೇಡ್ಕರ್ ಅವರು ಅರವತ್ತು ದೇಶಗಳ ಸಂವಿಧಾನ ಓದಿ, ಭಾರತದ ಸಂವಿಧಾನ ರಚನೆ ಮಾಡಿದ್ದಾರೆ. ಇಂದು ಪ್ರತಿಯೊಬ್ಬರೂ ಸಂವಿಧಾನದ ಪೀಠಿಕೆ ಹಾಗೂ ಅದರಲ್ಲಿರುವ ಕಲಂಗಳನ್ನು ತಪ್ಪದೇ ಓದಬೇಕು’ ಎಂದರು.</p>.<p>ಮುಖ್ಯ ಅತಿಥಿಗಳಾದ ಪ್ರೊ. ವಿಜಯಕುಮಾರ ಬಿರಾದಾರ, ಮೀನಾ ಗಾಯಕವಾಡ ಪಾಲ್ಗೊಂಡಿದ್ದರು. ಮಂಜುನಾಥ ಎಂ. ನಿರೂಪಿಸಿದರು. ಧನಲಕ್ಷ್ಮೀ ಪಾಟೀಲ ಸ್ವಾಗತಿಸಿದರು. ಸಂವಿಧಾನ ಪೀಠಿಕೆಯನ್ನು ವಿದ್ಯಾರ್ಥಿಗಳಿಂದ ಓದಿಸಿ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ‘ಪ್ರತಿಯೊಬ್ಬರಿಗೂ ಸಮಾನ ಹಕ್ಕು ಕಲ್ಪಿಸಿರುವ ಕಾರಣ ಭಾರತದ ಸಂವಿಧಾನ ವಿಶ್ವದಲ್ಲೇ ಶ್ರೇಷ್ಠವಾಗಿದೆ’ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಕಾಡ್ಲೂರ ಸತ್ಯ ನಾರಾಯಣಾಚಾರ್ಯ ಬಣ್ಣಿಸಿದರು.</p>.<p>ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ವಕೀಲರ ಸಂಘದ ವತಿಯಿಂದ ಜಿಲ್ಲಾ ವಕೀಲರ ಸಭಾಂಗಣದಲ್ಲಿ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /><br />’ವಿವಿಧೆತೆಯಲ್ಲಿ ಏಕತೆ ಇರುವುದು ಭಾರತ ದೇಶದ ವಿಶೇಷತೆಯಾಗಿದೆ. ಅಂತೆಯೇ ಭಾರತದ ಎಲ್ಲ ನಾಗರಿಕರಿಗೆ ಸಮಾನವಾದ ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯ ಹಾಗೂ ಹಕ್ಕು ಒದಗಿಸಲಾಗಿದೆ’ ಎಂದು ತಿಳಿಸಿದರು.</p>.<p>ಗುಲ್ಬರ್ಗಾ ವಿಶ್ವವಿದ್ಯಾಲಯದ ಕಾನೂನು ವಿಭಾಗದ ಡೀನ್ ಡಾ.ದೇವಿದಾಸ ಮಾಲೆ ಅವರು ಮಾತನಾಡಿ, ‘ಜನೋಪರಕ್ಕಾಗಿ ಒಳ್ಳೆಯ ಅಂಶಗಳನ್ನು ಅಳವಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಭಾರತ ಸಂವಿಧಾನವನ್ನು ಜೀವಂತ ಗ್ರಂಥ ಎಂದೇ ಭಾವಿಸಬಹುದಾಗಿದೆ’ ಎಂದರು.</p>.<p>ಹಿರಿಯ ಸಿವಿಲ್ ನ್ಯಾಯಾಧೀಶ ಸಿದ್ರಾಮ ಟಿ.ಪಿ. ಮಾತನಾಡಿ, ‘ಸಮಾಜದಲ್ಲಿನ ಕಟ್ಟಕಡೆಯ ವ್ಯಕ್ತಿಗೂ ಸಮಾನ ಅವಕಾಶಗಳು ಸಿಗಬೇಕು ಎಂದು ತಿಳಿಸುವುದು ಭಾರತ ಸಂವಿಧಾನದ ವಿಶೇಷತೆಯಾಗಿದೆ’ ಎಂದರು.</p>.<p>ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಅಶೋಕ ಮಾನೂರೆ ಅವರು ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಝರಿನಾ, 1ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಆರ್.ಪಿ.ಗೌಡ ಇದ್ದರು. ವಕೀಲರ ಸಂಘದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.</p>.<p class="Subhead"><strong>ಅಕ್ಕಮಹಾದೇವಿ ಮಹಿಳಾ ಕಾಲೇಜು:</strong></p>.<p>‘ಭಾರತದ ಸಂವಿಧಾನ ರಚಿಸಿ ಎಲ್ಲ ಮಹಾಪುರುಷರ ಕನಸನ್ನು ನನಸು ಮಾಡಿದ ಕೀರ್ತಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ’ ಎಂದು ಪ್ರಾಚಾರ್ಯ ಪ್ರೊ.ಶಿವಶರಣಪ್ಪ ಹುಗ್ಗೆಪಾಟೀಲ ಹೇಳಿದರು.</p>.<p>ನಗರದ ಅಕ್ಕಮಹಾದೇವಿ ಮಹಿಳಾ ಕಾಲೇಜಿನ ಆವರಣದಲ್ಲಿ ಆಯೋಜಿಸಿದ್ದ ಸಂವಿಧಾನ ದಿವಸ್ ಆಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>’ಡಾ.ಅಂಬೇಡ್ಕರ್ ಅವರು ಅರವತ್ತು ದೇಶಗಳ ಸಂವಿಧಾನ ಓದಿ, ಭಾರತದ ಸಂವಿಧಾನ ರಚನೆ ಮಾಡಿದ್ದಾರೆ. ಇಂದು ಪ್ರತಿಯೊಬ್ಬರೂ ಸಂವಿಧಾನದ ಪೀಠಿಕೆ ಹಾಗೂ ಅದರಲ್ಲಿರುವ ಕಲಂಗಳನ್ನು ತಪ್ಪದೇ ಓದಬೇಕು’ ಎಂದರು.</p>.<p>ಮುಖ್ಯ ಅತಿಥಿಗಳಾದ ಪ್ರೊ. ವಿಜಯಕುಮಾರ ಬಿರಾದಾರ, ಮೀನಾ ಗಾಯಕವಾಡ ಪಾಲ್ಗೊಂಡಿದ್ದರು. ಮಂಜುನಾಥ ಎಂ. ನಿರೂಪಿಸಿದರು. ಧನಲಕ್ಷ್ಮೀ ಪಾಟೀಲ ಸ್ವಾಗತಿಸಿದರು. ಸಂವಿಧಾನ ಪೀಠಿಕೆಯನ್ನು ವಿದ್ಯಾರ್ಥಿಗಳಿಂದ ಓದಿಸಿ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>