ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ’

Last Updated 28 ಡಿಸೆಂಬರ್ 2019, 10:34 IST
ಅಕ್ಷರ ಗಾತ್ರ

ಹುಮನಾಬಾದ್: ‘ಕ್ಷೇತ್ರದಲ್ಲಿ ನಡೆಯಲಿರುವ ಪ್ರತಿಯೊಂದು ಅಭಿವೃದ್ದಿ ಕಾಮಗಾರಿಯೂ ಗುಣಮಟ್ಟದಿಂದ ಕೂಡಿರಬೇಕು’ ಎಂದು ಶಾಸಕ ರಾಜಶೇಖರ ಪಾಟೀಲ ಹೇಳಿದರು.

ಪಟ್ಟಣದಲ್ಲಿ ಲೋಕಪಯೋಗಿ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆಯಿಂದ ಕೈಗೊಳ್ಳಲಿರುವ ಸಿಸಿ ರಸ್ತೆ ಕಾಮಗಾರಿಗೆ ಶುಕ್ರವಾರ ಚಾಲನೆ ನೀಡಿ ಅವರು ಮಾತನಾಡಿದರು.

ಪಟ್ಟಣದ ಎನ್‍ಎಚ್–65 ರಿಂದ ತೋಟಗಾರಿಕೆ ಇಲಾಖೆವರೆಗೆ ₹40 ಲಕ್ಷದ ಸಿಸಿ ರಸ್ತೆ, ರಾಷ್ಟ್ರೀಯ ಹೆದ್ದಾರಿ 50 ರಿಂದ ಹಳೆ ತಹಶೀಲ್ದಾರ್ ಕಚೇರಿಯವರೆಗೆ ₹55 ಲಕ್ಷದ ಸಿಸಿ ರಸ್ತೆ, ಹಾಗೂ ಕಲ್ಲೂರ ರಸ್ತೆಯಿಂದ ಪುರಸಭೆವರೆಗೆ ₹25 ಲಕ್ಷದ ಸಿಸಿ ರಸ್ತೆ, ಮತ್ತು ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ₹40 ಲಕ್ಷ ಸಿಸಿ ಕಾಮಗಾರಿಗ ಳಿಗೆ ಇಂದು ಚಾಲನೆ ನೀಡಲಾಗಿದೆ ಎಂದರು.

ಪಟ್ಟಣದಲ್ಲಿ ನಡೆಯಲಿರುವ ಕಾಮಗಾರಿಗಳನ್ನು ಪುರಸಭೆ ಸದಸ್ಯರು ಸಾರ್ವಜನಿಕರು ವೀಕ್ಷಿಸಿ ಉತ್ತಮ ಗುಣಮಟ್ಟದಿಂದ ಆಗುವಂತೆ ನೋಡಿಕೊಂಡು ಆಗಿರುವ ಅಭಿವೃದ್ದಿ ಕಾಮಗಾರಿಗಳು ಹಾಳಾಗದಂತೆ 5 ವರ್ಷಗಳ ಕಾಲಬಾಳುವ ಹಾಗೆ ನೋಡಿಕೊಂಡು ಬರಬೇಕು ಎಂದರು.

ಪಟ್ಟಣದ ಡಾ. ಅಂಬೇಡ್ಕರ್ ವೃತ್ತದಿಂದ ವಾಂಜರಿ ಬಡಾವಣೆವರೆಗೆ ₹1.6 ಕೋಟಿಯ ರಸ್ತೆ ನಿರ್ಮಾಣಕ್ಕೆ ಮಂಜೂರಾತಿ ನೀಡಲಾಗಿದೆ. ಹಾಗೂ 14ನೇ ಹಣಕಾಸು ಯೋಜನೆ ಅಡಿಯಲ್ಲಿ ₹3 ಕೋಟಿ ಮತ್ತು ಎಸ್‍ಎಫ್‍ಸಿ ಯೋಜನೆ ಅಡಿಯಲ್ಲಿ ₹2 ಕೋಟಿ ಅನುದಾನ ನೀಡಲಾಗಿದೆ ಎಂದರು.

ತಹಶೀಲ್ದಾರ್ ನಾಗಯ್ಯ ಹಿರೇಮಠ, ತಾಲ್ಲೂಕು ಪಂಚಾಯತಿ ಅಧ್ಯಕ್ಷ ರಮೇಶ ಡಾಕುಳಗಿ, ತಾ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷ ಕಂಟೆಪ್ಪ ದಾನಾ, ತಾ.ಪಂ. ಇಒ ವೈಜಿನಾಥ ಫುಲೆ, ಪುರಸಭೆ ಮುಖ್ಯಾಧಿಕಾರಿ ಶಂಭುಲಿಂಗ ದೇಸಾಯಿ, ಬಿಇಒ ಶಿವರಾಚಪ್ಪ ವಾಲಿ, ಸಹಾಯಕ ಅಭಿಯಂತರ ರಾಜಕುಮಾರ ಕಲಬುರ್ಗಿ, ಪುರಸಭೆ ಸದಸ್ಯರಾದ ಅಫ್ಸರ ಮಿಯ್ಯ, ಸುನೀಲ ಪಾಟೀಲ, ವಿಜಯಕುಮಾತ ಭಾಸಪಳ್ಳಿ, ವಿಜಯಕುಮಾರ ದುರ್ಗದ, ರಮೇಶ ಕಲ್ಲೂರು, ಮಲ್ಲಿಕಾರ್ಜುನ ಶರ್ಮಾ, ಅನಿಲ್ ಪಲ್ಲೆರಿ, ಅಶೋಕ ಸೊಂಡೆ, ಗುಂಡಪ್ಪಾ ಹೊನ್ನಿಕೇರಿ, ಮಹೇಶ ಪಾಟೀಲ, ಬಸವರಾಜ ಶೇರಿಕಾರ, ವಿನಾಯ ಯಾಧವ, ರಾಜಪ್ಪ ಇಟಗಿ, ಮಲ್ಲಿಕಾರ್ಜುನ ಮಾಶಟ್ಟಿ ಹಾಗೂ ಬಾಬುರಾವ ಪರಮಶೆಟ್ಟಿಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT