ಭಾನುವಾರ ಸಹ ಬೀದರ್, ಉದಗಿರ, ಜಹೀರಾಬಾದ್ ಹಾಗೂ ಹೈದ್ರಾಬಾದ್ ಮಧ್ಯೆ ತೆಲಂಗಾಣದ ಸಾರಿಗೆ ಬಸ್ಗಳೇ ಅಧಿಕ ಸಂಖ್ಯೆಯಲ್ಲಿ ಸಂಚರಿಸಿದವು. ಮಹಾರಾಷ್ಟ್ರ ಸಾರಿಗೆ ಬಸ್ಗಳು ಜಿಲ್ಲೆಯ ತಾಲ್ಲೂಕು ಕೇಂದ್ರಗಳಿಗೆ ಬಂದು ಹೋಗಿವೆ.
ಬಳ್ಳಾರಿ, ದಾವಣಗೆರೆ, ಬೆಳಗಾವಿ, ವಿಜಯಪುರ, ಬಾಗಲಕೋಟೆ ಹಾಗೂ ಮಿರಜ್ಗೆ ಹೋಗುವ ಪ್ರಯಾಣಿಕರು ನಾಲ್ಕು ದಿನಗಳಿಂದ ಪರದಾಡುತ್ತಿದ್ದಾರೆ. ಈ ಊರುಗಳಿಗೆ ನೇರವಾಗಿ ಹೊರಡುವ ಬಸ್ಗಳ ಸೇವೆ ಇನ್ನೂ ಆರಂಭವಾಗಿಲ್ಲ. ಖಾಸಗಿ ಬಸ್ಗಳು ನೆರೆಯ ಜಿಲ್ಲೆಗಳಿಗೆ ಮಾತ್ರ ಹೋಗಿ ಬರುತ್ತಿವೆ.