<p><strong>ಭಾಲ್ಕಿ:</strong> ‘ಯಾವುದೇ ಕ್ಷೇತ್ರದಲ್ಲಿ ಯಶಸ್ಸು ಗಳಿಸುವಲ್ಲಿ ನಿರಂತರ ಪ್ರಯತ್ನ, ವಿಷಯದ ಆಳವಾದ ಜ್ಞಾನ, ಸಮಯದ ಸದ್ಬಳಕೆ ತುಂಬಾ ಮಹತ್ವಪೂರ್ಣ ಪಾತ್ರ ವಹಿಸುತ್ತವೆ’ ಎಂದು ಕೆಎಎಸ್ ಪರೀಕ್ಷೆ ಉತ್ತೀರ್ಣರಾದ ಪ್ರಕಾಶ ಸೂರ್ಯವಂಶಿ ಹೇಳಿದರು.</p>.<p>ಪಟ್ಟಣದ ಚನ್ನಬಸವೇಶ್ವರ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಪದವಿ ಕಾಲೇಜಿನಲ್ಲಿ ಹೊಸದಾಗಿ ಆರಂಭಿಸಿದ ಜ್ಞಾನ ಸಾಗರ ಸ್ಪರ್ಧಾತ್ಮಕ ತರಬೇತಿ ಕೇಂದ್ರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪಾಸಾಗಲು ಸಾಮಾನ್ಯ ಜ್ಞಾನದ ಜೊತೆಗೆ ಪಠ್ಯ ಸಂಬಂಧಿತ ವಿಷಯಗಳ ಆಳ ಮತ್ತು ವಿಸ್ತೃತವಾದ ಜ್ಞಾನ ಪಡೆದುಕೊಳ್ಳುವುದು ಅತ್ಯಗತ್ಯ. ಜೊತೆಗೆ ಪರೀಕ್ಷಾ ಕೇಂದ್ರದಲ್ಲಿ ಸಮಯದ ನಿರ್ವಹಣೆ ತುಂಬಾ ಜಾಣ್ಮೆಯಿಂದ ನಿರ್ವಹಿಸಬೇಕು’ ಎಂದು ತಿಳಿಸಿದರು.</p>.<p>ಆಡಳಿತಾಧಿಕಾರಿ ಅಂಕುಶ ಢೋಲೆ ಮಾತನಾಡಿ, ‘ನಮ್ಮ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಓದಿಗೆ ಪೂರಕ ವಾತಾವರಣ ಮತ್ತು ಸಕಲ ಸೌಲಭ್ಯಗಳು ಲಭ್ಯ ಇವೆ. ವಿದ್ಯಾರ್ಥಿಗಳು ಇವುಗಳ ಸದುಪಯೋಗಪಡಿಸಿಕೊಂಡು ಉತ್ತಮ ಸಾಧನೆ ಮಾಡಬೇಕು’ ಎಂದರು.</p>.<p>ಪ್ರಾಚಾರ್ಯ ಸಂತೋಷಕುಮಾರ ಎಸ್. ತೀರ್ಥೆ, ಮೀನಾಕುಮಾರಿ ಪಾಟೀಲ ಮಾತನಾಡಿದರು. ವಿವಿಧ ವಿಭಾಗಗಳ ಪ್ರಮುಖರಾದ ಮಲ್ಲಿಕಾರ್ಜುನ, ಆಕಾಶ ಸಿರ್ಸೆ, ನಾಗನಾಥ ಕೋಟೆ, ಕಮಲಾ ಸಿರ್ಸೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಾಲ್ಕಿ:</strong> ‘ಯಾವುದೇ ಕ್ಷೇತ್ರದಲ್ಲಿ ಯಶಸ್ಸು ಗಳಿಸುವಲ್ಲಿ ನಿರಂತರ ಪ್ರಯತ್ನ, ವಿಷಯದ ಆಳವಾದ ಜ್ಞಾನ, ಸಮಯದ ಸದ್ಬಳಕೆ ತುಂಬಾ ಮಹತ್ವಪೂರ್ಣ ಪಾತ್ರ ವಹಿಸುತ್ತವೆ’ ಎಂದು ಕೆಎಎಸ್ ಪರೀಕ್ಷೆ ಉತ್ತೀರ್ಣರಾದ ಪ್ರಕಾಶ ಸೂರ್ಯವಂಶಿ ಹೇಳಿದರು.</p>.<p>ಪಟ್ಟಣದ ಚನ್ನಬಸವೇಶ್ವರ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಪದವಿ ಕಾಲೇಜಿನಲ್ಲಿ ಹೊಸದಾಗಿ ಆರಂಭಿಸಿದ ಜ್ಞಾನ ಸಾಗರ ಸ್ಪರ್ಧಾತ್ಮಕ ತರಬೇತಿ ಕೇಂದ್ರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪಾಸಾಗಲು ಸಾಮಾನ್ಯ ಜ್ಞಾನದ ಜೊತೆಗೆ ಪಠ್ಯ ಸಂಬಂಧಿತ ವಿಷಯಗಳ ಆಳ ಮತ್ತು ವಿಸ್ತೃತವಾದ ಜ್ಞಾನ ಪಡೆದುಕೊಳ್ಳುವುದು ಅತ್ಯಗತ್ಯ. ಜೊತೆಗೆ ಪರೀಕ್ಷಾ ಕೇಂದ್ರದಲ್ಲಿ ಸಮಯದ ನಿರ್ವಹಣೆ ತುಂಬಾ ಜಾಣ್ಮೆಯಿಂದ ನಿರ್ವಹಿಸಬೇಕು’ ಎಂದು ತಿಳಿಸಿದರು.</p>.<p>ಆಡಳಿತಾಧಿಕಾರಿ ಅಂಕುಶ ಢೋಲೆ ಮಾತನಾಡಿ, ‘ನಮ್ಮ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಓದಿಗೆ ಪೂರಕ ವಾತಾವರಣ ಮತ್ತು ಸಕಲ ಸೌಲಭ್ಯಗಳು ಲಭ್ಯ ಇವೆ. ವಿದ್ಯಾರ್ಥಿಗಳು ಇವುಗಳ ಸದುಪಯೋಗಪಡಿಸಿಕೊಂಡು ಉತ್ತಮ ಸಾಧನೆ ಮಾಡಬೇಕು’ ಎಂದರು.</p>.<p>ಪ್ರಾಚಾರ್ಯ ಸಂತೋಷಕುಮಾರ ಎಸ್. ತೀರ್ಥೆ, ಮೀನಾಕುಮಾರಿ ಪಾಟೀಲ ಮಾತನಾಡಿದರು. ವಿವಿಧ ವಿಭಾಗಗಳ ಪ್ರಮುಖರಾದ ಮಲ್ಲಿಕಾರ್ಜುನ, ಆಕಾಶ ಸಿರ್ಸೆ, ನಾಗನಾಥ ಕೋಟೆ, ಕಮಲಾ ಸಿರ್ಸೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>