<p><strong>ಬೀದರ್: </strong>‘ರೇಷ್ಮೆ ಇಲಾಖೆಯಲ್ಲಿನ ಸಿಬ್ಬಂದಿ ಕೊರತೆ ನೀಗಿಸಲು ಗುತ್ತಿಗೆ ಆಧಾರದ ಮೇಲೆ ನೇಮಕಾತಿಗೆ ನಿರ್ಧರಿಸಲಾಗಿದೆ. ಈಗಾಗಲೇ ಸಲ್ಲಿಸಿರುವ ಪ್ರಸ್ತಾವಕ್ಕೆ ಹಣಕಾಸು ಇಲಾಖೆ ಒಪ್ಪಿಗೆ ನೀಡಿದ ತಕ್ಷಣ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು’ಎಂದು ರೇಷ್ಮೆ ಸಚಿವ ನಾರಾಯಣಗೌಡ ಹೇಳಿದರು.</p>.<p>‘ಇಲಾಖೆಯಲ್ಲಿ ಹಲವು ಹುದ್ದೆಗಳು ಖಾಲಿ ಇವೆ. ಎರಡು ವರ್ಷಗಳಲ್ಲಿ ಇನ್ನಷ್ಟು ಅಧಿಕಾರಿಗಳು ನಿವೃತ್ತರಾಗುವರು. ಹೀಗಾಗಿ ರೇಷ್ಮೆ ಇಲಾಖೆಗೆ ಪುನಶ್ಚೇತನ ನೀಡುವ ಕಾರ್ಯ ಆರಂಭಿಸಲಾಗಿದೆ’ ಎಂದು ಸೋಮವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ರೇಷ್ಮೆ ಬೆಳೆದವರು ನಷ್ಟಕ್ಕೆ ಒಳಗಾಗಿಲ್ಲ. ರೈತರು ಕಬ್ಬು ಬೆಳೆದು ಕಷ್ಟ ಅನುಭವಿಸುವುದಕ್ಕಿಂತ ರೇಷ್ಮೆ ಬೆಳೆದು ಆದಾಯ ಗಳಿಸುವಂತೆ ಜಾಗೃತಿ ಮೂಡಿಸಲಾಗುವುದು. ಕ್ಷೇತ್ರ ದರ್ಶನ ಕಾರ್ಯಕ್ರಮ ಆಯೋಜಿಸಲಾಗುವುದು. ಇದಕ್ಕೆ ಅಗತ್ಯವಿರುವ ಸಿಬ್ಬಂದಿಯನ್ನೂ ನೇಮಿಸಿಕೊಳ್ಳಲಾಗುವುದು’ ಎಂದರು.</p>.<p>‘ಉತ್ತಮ ಇಳುವರಿ ಪಡೆದಿರುವ ರೇಷ್ಮೆ ಬೆಳೆಗಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ ನೀಡಲಾಗುವುದು. ಅರ್ಹ ರೇಷ್ಮೆ ಬೆಳೆಗಾರರನ್ನು ಗುರುತಿಸಿ ಕೇಂದ್ರ ಕಚೇರಿಗೆ ಪಟ್ಟಿ ಕಳಿಸುವಂತೆ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: </strong>‘ರೇಷ್ಮೆ ಇಲಾಖೆಯಲ್ಲಿನ ಸಿಬ್ಬಂದಿ ಕೊರತೆ ನೀಗಿಸಲು ಗುತ್ತಿಗೆ ಆಧಾರದ ಮೇಲೆ ನೇಮಕಾತಿಗೆ ನಿರ್ಧರಿಸಲಾಗಿದೆ. ಈಗಾಗಲೇ ಸಲ್ಲಿಸಿರುವ ಪ್ರಸ್ತಾವಕ್ಕೆ ಹಣಕಾಸು ಇಲಾಖೆ ಒಪ್ಪಿಗೆ ನೀಡಿದ ತಕ್ಷಣ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು’ಎಂದು ರೇಷ್ಮೆ ಸಚಿವ ನಾರಾಯಣಗೌಡ ಹೇಳಿದರು.</p>.<p>‘ಇಲಾಖೆಯಲ್ಲಿ ಹಲವು ಹುದ್ದೆಗಳು ಖಾಲಿ ಇವೆ. ಎರಡು ವರ್ಷಗಳಲ್ಲಿ ಇನ್ನಷ್ಟು ಅಧಿಕಾರಿಗಳು ನಿವೃತ್ತರಾಗುವರು. ಹೀಗಾಗಿ ರೇಷ್ಮೆ ಇಲಾಖೆಗೆ ಪುನಶ್ಚೇತನ ನೀಡುವ ಕಾರ್ಯ ಆರಂಭಿಸಲಾಗಿದೆ’ ಎಂದು ಸೋಮವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ರೇಷ್ಮೆ ಬೆಳೆದವರು ನಷ್ಟಕ್ಕೆ ಒಳಗಾಗಿಲ್ಲ. ರೈತರು ಕಬ್ಬು ಬೆಳೆದು ಕಷ್ಟ ಅನುಭವಿಸುವುದಕ್ಕಿಂತ ರೇಷ್ಮೆ ಬೆಳೆದು ಆದಾಯ ಗಳಿಸುವಂತೆ ಜಾಗೃತಿ ಮೂಡಿಸಲಾಗುವುದು. ಕ್ಷೇತ್ರ ದರ್ಶನ ಕಾರ್ಯಕ್ರಮ ಆಯೋಜಿಸಲಾಗುವುದು. ಇದಕ್ಕೆ ಅಗತ್ಯವಿರುವ ಸಿಬ್ಬಂದಿಯನ್ನೂ ನೇಮಿಸಿಕೊಳ್ಳಲಾಗುವುದು’ ಎಂದರು.</p>.<p>‘ಉತ್ತಮ ಇಳುವರಿ ಪಡೆದಿರುವ ರೇಷ್ಮೆ ಬೆಳೆಗಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ ನೀಡಲಾಗುವುದು. ಅರ್ಹ ರೇಷ್ಮೆ ಬೆಳೆಗಾರರನ್ನು ಗುರುತಿಸಿ ಕೇಂದ್ರ ಕಚೇರಿಗೆ ಪಟ್ಟಿ ಕಳಿಸುವಂತೆ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>