<p><strong>ಬೀದರ್</strong>: ಯುವ ಗುತ್ತಿಗೆದಾರ ಸಚಿನ್ ಮಾನಪ್ಪ ಪಾಂಚಾಳ್ ಅವರ ಆತ್ಮಹತ್ಯೆ ಘಟನೆಯನ್ನು ತನಿಖೆ ನಡೆಸಿ, ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಬೇಕೆಂದು ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಜಿಲ್ಲಾ ಘಟಕ ಆಗ್ರಹಿಸಿದೆ.</p>.<p>ಈ ಸಂಬಂಧ ಮಹಾಸಭಾ ಪದಾಧಿಕಾರಿಗಳು ನಗರದಲ್ಲಿ ಬೀದರ್ ರೈಲ್ವೆ ಪೊಲೀಸ್ ಎಸ್ಪಿ ಸೌಮ್ಯಲತಾ ಎಸ್.ಕೆ. ಅವರಿಗೆ ಮನವಿ ಪತ್ರ ಸಲ್ಲಿಸಿ ಒತ್ತಾಯಿಸಿದರು.</p>.<p>ಬಡ ಕುಟುಂಬದಲ್ಲಿ ಹುಟ್ಟಿ, ಉಪಜೀವನಕ್ಕಾಗಿ ವ್ಯವಹಾರ ಮಾಡುವಾಗ ಏನೋ ಏರುಪೇರಾಗಿದೆ. ಸಚಿನ್ ಅವಲಂಬಿತರು ಬೀದಿ ಪಾಲಾಗುವ ಸಂದರ್ಭ ಬಂದಿದೆ. ಇಡೀ ಘಟನೆಯ ಕೂಲಂಕಶ ತನಿಖೆ ನಡೆಸಿ, ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿದರು.</p>.<p>ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ದತ್ತಾತ್ರಿ ವಿಶ್ವಕರ್ಮ, ಯುವ ಘಟಕದ ಜಿಲ್ಲಾಧ್ಯಕ್ಷ ಪ್ರಶಾಂತ ವಿಶ್ವಕರ್ಮ, ಉಪಾಧ್ಯಕ್ಷರಾದ ಸೋಮನಾಥ ಪಾಂಚಾಳ್, ಪಾಂಡುನಾಗ್ ಪಾಂಚಾಳ್, ಮಹಾದೇವ ಪಾಂಚಾಳ್, ಸಂಜುಕುಮಾರ್ ಪಾಂಚಾಳ್, ಮಂಜುನಾಥ್ ಪಾಂಚಾಳ್, ಗಣಪತ್ ರಾವ್ ಪಾಂಚಾಲ್ ಉಪಸ್ಥಿತರಿದ್ದರು. </p>.<h2>ಮಾಹಿತಿ ಪಡೆದ ಎಸ್ಪಿ:</h2>.<p>ಬೀದರ್ ರೈಲ್ವೆ ಪೊಲೀಸ್ ಎಸ್ಪಿ ಸೌಮ್ಯಲತಾ ಎಸ್.ಕೆ. ಅವರು ಸಚಿನ್ ಪಾಂಚಾಳ್ ಅವರ ಆತ್ಮಹತ್ಯೆಗೆ ಸಂಬಂಧಿಸಿದಂತೆ ಸ್ಥಳೀಯ ರೈಲ್ವೆ ಪೊಲೀಸರಿಂದ ಮಾಹಿತಿ ಪಡೆದಿದ್ದಾರೆ. ತನಿಖೆ ಮುಂದುವರೆದಿದೆ ಎಂದು ಪೊಲೀಸ್ ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ಯುವ ಗುತ್ತಿಗೆದಾರ ಸಚಿನ್ ಮಾನಪ್ಪ ಪಾಂಚಾಳ್ ಅವರ ಆತ್ಮಹತ್ಯೆ ಘಟನೆಯನ್ನು ತನಿಖೆ ನಡೆಸಿ, ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಬೇಕೆಂದು ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಜಿಲ್ಲಾ ಘಟಕ ಆಗ್ರಹಿಸಿದೆ.</p>.<p>ಈ ಸಂಬಂಧ ಮಹಾಸಭಾ ಪದಾಧಿಕಾರಿಗಳು ನಗರದಲ್ಲಿ ಬೀದರ್ ರೈಲ್ವೆ ಪೊಲೀಸ್ ಎಸ್ಪಿ ಸೌಮ್ಯಲತಾ ಎಸ್.ಕೆ. ಅವರಿಗೆ ಮನವಿ ಪತ್ರ ಸಲ್ಲಿಸಿ ಒತ್ತಾಯಿಸಿದರು.</p>.<p>ಬಡ ಕುಟುಂಬದಲ್ಲಿ ಹುಟ್ಟಿ, ಉಪಜೀವನಕ್ಕಾಗಿ ವ್ಯವಹಾರ ಮಾಡುವಾಗ ಏನೋ ಏರುಪೇರಾಗಿದೆ. ಸಚಿನ್ ಅವಲಂಬಿತರು ಬೀದಿ ಪಾಲಾಗುವ ಸಂದರ್ಭ ಬಂದಿದೆ. ಇಡೀ ಘಟನೆಯ ಕೂಲಂಕಶ ತನಿಖೆ ನಡೆಸಿ, ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿದರು.</p>.<p>ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ದತ್ತಾತ್ರಿ ವಿಶ್ವಕರ್ಮ, ಯುವ ಘಟಕದ ಜಿಲ್ಲಾಧ್ಯಕ್ಷ ಪ್ರಶಾಂತ ವಿಶ್ವಕರ್ಮ, ಉಪಾಧ್ಯಕ್ಷರಾದ ಸೋಮನಾಥ ಪಾಂಚಾಳ್, ಪಾಂಡುನಾಗ್ ಪಾಂಚಾಳ್, ಮಹಾದೇವ ಪಾಂಚಾಳ್, ಸಂಜುಕುಮಾರ್ ಪಾಂಚಾಳ್, ಮಂಜುನಾಥ್ ಪಾಂಚಾಳ್, ಗಣಪತ್ ರಾವ್ ಪಾಂಚಾಲ್ ಉಪಸ್ಥಿತರಿದ್ದರು. </p>.<h2>ಮಾಹಿತಿ ಪಡೆದ ಎಸ್ಪಿ:</h2>.<p>ಬೀದರ್ ರೈಲ್ವೆ ಪೊಲೀಸ್ ಎಸ್ಪಿ ಸೌಮ್ಯಲತಾ ಎಸ್.ಕೆ. ಅವರು ಸಚಿನ್ ಪಾಂಚಾಳ್ ಅವರ ಆತ್ಮಹತ್ಯೆಗೆ ಸಂಬಂಧಿಸಿದಂತೆ ಸ್ಥಳೀಯ ರೈಲ್ವೆ ಪೊಲೀಸರಿಂದ ಮಾಹಿತಿ ಪಡೆದಿದ್ದಾರೆ. ತನಿಖೆ ಮುಂದುವರೆದಿದೆ ಎಂದು ಪೊಲೀಸ್ ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>