<p><strong>ಬೀದರ್</strong>: ರೋಟರಿ ಕ್ಲಬ್ ಬೀದರ್ ಐದು ಜನ ಬಡ ಮಹಿಳೆಯರಿಗೆ ಹೊಲಿಗೆ ಯಂತ್ರ ಕೊಡುಗೆಯಾಗಿ ನೀಡಿದೆ.</p>.<p>ನಗರದ ಐ.ಎಂ.ಎ ಹಾಲ್ನಲ್ಲಿ ಆಯೋಜಿಸಿದ್ದ ವೈದ್ಯರ ಹಾಗೂ ಚಾರ್ಟರ್ಡ್ ಅಕೌಂಟೆಂಟ್ಸ್ ದಿನಾಚರಣೆ ಕಾರ್ಯಕ್ರಮದಲ್ಲಿ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು.</p>.<p>ಕೋವಿಡ್ ಸೋಂಕು ನಿಯಂತ್ರಿಸುವಲ್ಲಿ ವೈದ್ಯರ ಪಾತ್ರ ಮಹತ್ವದ್ದಾಗಿದೆ. ಸೋಂಕಿತರ ಜೀವ ಉಳಿಸಲು ವೈದ್ಯರು ಹಗಲಿರುಳು ಶ್ರಮಿಸಿದ್ದಾರೆ ಎಂದು ಈ ಸಂದರ್ಭದಲ್ಲಿ ಮಾತನಾಡಿದ ಪ್ರಮುಖರು ಹೇಳಿದರು.</p>.<p>ಅಂತರರಾಷ್ಟ್ರೀಯ ರೋಟರಿ ಜಿಲ್ಲೆ 3160 ಕಾರ್ಯದರ್ಶಿ ಶಿವಶಂಕರ ಕಾಮಶೆಟ್ಟಿ, ರೋಟರಿ ಕ್ಲಬ್ ಬೀದರ್ ಅಧ್ಯಕ್ಷ ಪ್ರಕಾಶ ಟೊಣ್ಣೆ, ನಿಕಟಪೂರ್ವ ಅಧ್ಯಕ್ಷ ಹಾವಶೆಟ್ಟಿ ಪಾಟೀಲ, ಉಪಾಧ್ಯಕ್ಷ ಸೋಮಶೇಖರ ಪಾಟೀಲ, ಕಾರ್ಯದರ್ಶಿ ಅನಿಲಕುಮಾರ ಔರಾದೆ, ಖಜಾಂಚಿ ಭಗವಂತಪ್ಪ, ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ, ವಕೀಲರಾದ ವಿಲಾಸರಾವ್ ಮೋರೆ, ದಾದಾರಾವ್ ಕೋಳೆಕರ್, ಎಂಜಿನಿಯರ್ ರವಿ ಮೂಲಗೆ, ಅನಿಲ್ ಖೇಣಿ, ರಂಜೀತ್ ಪಾಟೀಲ, ಶ್ರೀನಿವಾಸ ಸಾಳೆ, ವಸಂತ ಪಟೇಲ್, ಚಂದ್ರಕಾಂತ ಕಾಡಾದಿ, ಡಾ. ವಿದ್ಯಾಸಾಗರ ಕಾಮತಿಕರ್, ಡಾ. ವಿನೋದ ಸಾವಳಗಿ, ಡಾ. ವಸಂತ ಪಾಟೀಲ, ನಾಗೇಂದ್ರ ನಿಟ್ಟೂರೆ, ಚಾರ್ಟರ್ಡ್ ಅಕೌಂಟೆಂಟ್ ಕಮಲಕಿಶೋರ ಅಟ್ಟಲ್ ಇದ್ದರು.</p>.<p>ಇದೇ ವೇಳೆ ವೈದ್ಯರನ್ನು ಶಾಲು ಹೊದಿಸಿ ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ರೋಟರಿ ಕ್ಲಬ್ ಬೀದರ್ ಐದು ಜನ ಬಡ ಮಹಿಳೆಯರಿಗೆ ಹೊಲಿಗೆ ಯಂತ್ರ ಕೊಡುಗೆಯಾಗಿ ನೀಡಿದೆ.</p>.<p>ನಗರದ ಐ.ಎಂ.ಎ ಹಾಲ್ನಲ್ಲಿ ಆಯೋಜಿಸಿದ್ದ ವೈದ್ಯರ ಹಾಗೂ ಚಾರ್ಟರ್ಡ್ ಅಕೌಂಟೆಂಟ್ಸ್ ದಿನಾಚರಣೆ ಕಾರ್ಯಕ್ರಮದಲ್ಲಿ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು.</p>.<p>ಕೋವಿಡ್ ಸೋಂಕು ನಿಯಂತ್ರಿಸುವಲ್ಲಿ ವೈದ್ಯರ ಪಾತ್ರ ಮಹತ್ವದ್ದಾಗಿದೆ. ಸೋಂಕಿತರ ಜೀವ ಉಳಿಸಲು ವೈದ್ಯರು ಹಗಲಿರುಳು ಶ್ರಮಿಸಿದ್ದಾರೆ ಎಂದು ಈ ಸಂದರ್ಭದಲ್ಲಿ ಮಾತನಾಡಿದ ಪ್ರಮುಖರು ಹೇಳಿದರು.</p>.<p>ಅಂತರರಾಷ್ಟ್ರೀಯ ರೋಟರಿ ಜಿಲ್ಲೆ 3160 ಕಾರ್ಯದರ್ಶಿ ಶಿವಶಂಕರ ಕಾಮಶೆಟ್ಟಿ, ರೋಟರಿ ಕ್ಲಬ್ ಬೀದರ್ ಅಧ್ಯಕ್ಷ ಪ್ರಕಾಶ ಟೊಣ್ಣೆ, ನಿಕಟಪೂರ್ವ ಅಧ್ಯಕ್ಷ ಹಾವಶೆಟ್ಟಿ ಪಾಟೀಲ, ಉಪಾಧ್ಯಕ್ಷ ಸೋಮಶೇಖರ ಪಾಟೀಲ, ಕಾರ್ಯದರ್ಶಿ ಅನಿಲಕುಮಾರ ಔರಾದೆ, ಖಜಾಂಚಿ ಭಗವಂತಪ್ಪ, ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ, ವಕೀಲರಾದ ವಿಲಾಸರಾವ್ ಮೋರೆ, ದಾದಾರಾವ್ ಕೋಳೆಕರ್, ಎಂಜಿನಿಯರ್ ರವಿ ಮೂಲಗೆ, ಅನಿಲ್ ಖೇಣಿ, ರಂಜೀತ್ ಪಾಟೀಲ, ಶ್ರೀನಿವಾಸ ಸಾಳೆ, ವಸಂತ ಪಟೇಲ್, ಚಂದ್ರಕಾಂತ ಕಾಡಾದಿ, ಡಾ. ವಿದ್ಯಾಸಾಗರ ಕಾಮತಿಕರ್, ಡಾ. ವಿನೋದ ಸಾವಳಗಿ, ಡಾ. ವಸಂತ ಪಾಟೀಲ, ನಾಗೇಂದ್ರ ನಿಟ್ಟೂರೆ, ಚಾರ್ಟರ್ಡ್ ಅಕೌಂಟೆಂಟ್ ಕಮಲಕಿಶೋರ ಅಟ್ಟಲ್ ಇದ್ದರು.</p>.<p>ಇದೇ ವೇಳೆ ವೈದ್ಯರನ್ನು ಶಾಲು ಹೊದಿಸಿ ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>