<p><strong>ಬೀದರ್: </strong>ಕೋವಿಡ್ ನಿಯಂತ್ರಣ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಜಿಲ್ಲೆಯ ಪೊಲೀಸ್ ಸಿಬ್ಬಂದಿಗೆ ಚೆನ್ನೈ ಮೂಲದ ಬಯೊ ಮೈಕ್ರಾನ್ ಔಷಧ ಕಂಪನಿಯು ರೋಗ ನಿರೋಧಕ ಶಕ್ತಿ ವೃದ್ಧಿಸುವ ಗುಳಿಗೆಗಳನ್ನು ಕೊಡುಗೆಯಾಗಿ ನೀಡಿದೆ.</p>.<p>ಕಂಪನಿಯ ಬೀದರ್-ಕಲಬುರ್ಗಿ ಮಾರುಕಟ್ಟೆ ವ್ಯವಸ್ಥಾಪಕ ಜಗನ್ನಾಥಯ್ಯ ಸ್ವಾಮಿ ಅವರು ನಗರದಲ್ಲಿ ಗುರುವಾರ ಪೊಲೀಸ್ ಸಿಬ್ಬಂದಿಗೆ ವಿತರಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್ ಅವರಿಗೆ ತಲಾ ಒಂದು ಸಾವಿರ ಒರೊವಿಟ್(Orovit) ಹಾಗೂ ವಿಂಡೋಸ್ (windose) ಗುಳಿಗೆಗಳನ್ನು ಹಸ್ತಾಂತರಿಸಿದರು.</p>.<p>ಪೊಲೀಸ್ ಸಿಬ್ಬಂದಿ ಕೋವಿಡ್ನಿಂದ ಜನರ ರಕ್ಷಣೆಗೆ ಹಗಲಿರುಳು ಶ್ರಮಿಸುತ್ತಿದ್ದಾರೆ. ಸಾಮಾಜಿಕ ಚಟುವಟಿಕೆಯ ಭಾಗವಾಗಿ ಕಂಪನಿಯು ಅವರಿಗೆ ಗುಳಿಗೆಳನ್ನು ದೇಣಿಗೆ ರೂಪದಲ್ಲಿ ಕೊಟ್ಟಿದೆ ಎಂದು ಅವರು ಹೇಳಿದರು.</p>.<p>ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಪ್ರತಿ ಸಿಬ್ಬಂದಿಗೂ ತಲಾ 10 ಗುಳಿಗೆಗಳನ್ನು ವಿತರಿಸಲಿದ್ದಾರೆ ಎಂದು ತಿಳಿಸಿದರು.</p>.<p>ಕಂಪನಿಯ ಬೀದರ್ ಪ್ರತಿನಿಧಿ ಪ್ರಭು ರತನಗೊಂಡ, ಪೊಲೀಸ್ ಇಲಾಖೆಯ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: </strong>ಕೋವಿಡ್ ನಿಯಂತ್ರಣ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಜಿಲ್ಲೆಯ ಪೊಲೀಸ್ ಸಿಬ್ಬಂದಿಗೆ ಚೆನ್ನೈ ಮೂಲದ ಬಯೊ ಮೈಕ್ರಾನ್ ಔಷಧ ಕಂಪನಿಯು ರೋಗ ನಿರೋಧಕ ಶಕ್ತಿ ವೃದ್ಧಿಸುವ ಗುಳಿಗೆಗಳನ್ನು ಕೊಡುಗೆಯಾಗಿ ನೀಡಿದೆ.</p>.<p>ಕಂಪನಿಯ ಬೀದರ್-ಕಲಬುರ್ಗಿ ಮಾರುಕಟ್ಟೆ ವ್ಯವಸ್ಥಾಪಕ ಜಗನ್ನಾಥಯ್ಯ ಸ್ವಾಮಿ ಅವರು ನಗರದಲ್ಲಿ ಗುರುವಾರ ಪೊಲೀಸ್ ಸಿಬ್ಬಂದಿಗೆ ವಿತರಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್ ಅವರಿಗೆ ತಲಾ ಒಂದು ಸಾವಿರ ಒರೊವಿಟ್(Orovit) ಹಾಗೂ ವಿಂಡೋಸ್ (windose) ಗುಳಿಗೆಗಳನ್ನು ಹಸ್ತಾಂತರಿಸಿದರು.</p>.<p>ಪೊಲೀಸ್ ಸಿಬ್ಬಂದಿ ಕೋವಿಡ್ನಿಂದ ಜನರ ರಕ್ಷಣೆಗೆ ಹಗಲಿರುಳು ಶ್ರಮಿಸುತ್ತಿದ್ದಾರೆ. ಸಾಮಾಜಿಕ ಚಟುವಟಿಕೆಯ ಭಾಗವಾಗಿ ಕಂಪನಿಯು ಅವರಿಗೆ ಗುಳಿಗೆಳನ್ನು ದೇಣಿಗೆ ರೂಪದಲ್ಲಿ ಕೊಟ್ಟಿದೆ ಎಂದು ಅವರು ಹೇಳಿದರು.</p>.<p>ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಪ್ರತಿ ಸಿಬ್ಬಂದಿಗೂ ತಲಾ 10 ಗುಳಿಗೆಗಳನ್ನು ವಿತರಿಸಲಿದ್ದಾರೆ ಎಂದು ತಿಳಿಸಿದರು.</p>.<p>ಕಂಪನಿಯ ಬೀದರ್ ಪ್ರತಿನಿಧಿ ಪ್ರಭು ರತನಗೊಂಡ, ಪೊಲೀಸ್ ಇಲಾಖೆಯ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>