ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ‘ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಅತಿವೃಷ್ಟಿ ಹಾಗೂ ಪ್ರವಾಹದಿಂದಾಗಿ ಅಪಾರ ಬೆಳೆ ಹಾನಿಯಾಗಿದೆ. ಒಂಬತ್ತು ಜನರು, 63 ಜಾನುವಾರುಗಳು ಮೃತಪಟ್ಟಿವೆ. ಬೀದರ್ ಜಿಲ್ಲೆಯೊಂದರಲ್ಲಿಯೇ 2.40 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿನ ಬೆಳೆ ಹಾನಿಯಾಗಿದೆ. ಬೀದರ್ನಲ್ಲಿ ಆಗಿರುವ ಬೆಳೆ ಹಾನಿಯನ್ನು ಮುಖ್ಯಮಂತ್ರಿ ಗಮನಕ್ಕೆ ತರಲಾಗುವುದು’ ಎಂದು ತಿಳಿಸಿದರು.