<p><strong>ಬೀದರ್</strong>: ಜಿಲ್ಲೆಯಲ್ಲಿ ಬುಧವಾರ 43 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಕೋವಿಡ್ನಿಂದಾಗಿ ಒಬ್ಬ ಮಹಿಳೆ ಸೇರಿ ಮೂವರು ಮೃತಪಟ್ಟಿದ್ದಾರೆ.</p>.<p>ಬೀದರ್ನ ಪ್ರತಾಪನಗರದ 66 ವರ್ಷದ ಮಹಿಳೆ ಅಧಿಕ ರಕ್ತದೊತ್ತಡ ಹಾಗೂ ಉಸಿರಾಟ ತೊಂದರೆಯಿಂದ ಆಗಸ್ಟ್ 9 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಆಗಸ್ಟ್ 18ರಂದು ಮೃತಪಟ್ಟಿದ್ದರು.</p>.<p>ಬಸವಕಲ್ಯಾಣ ತಾಲ್ಲೂಕಿನ ಬೇಟಬಾಲಕುಂದಾದ 48 ವರ್ಷದ ಪುರುಷ ಆಗಸ್ಟ್ 17 ರಂದು ಆಸ್ಪತ್ರೆಗೆ ದಾಖಲಾಗಿ, ಆಗಸ್ಟ್ 19ರಂದು ಕೊನೆಯುಸಿರೆಳೆದಿದ್ದರು. ರಾಜೇಶ್ವರದ 65 ವರ್ಷದ ಪುರುಷ ಅಧಿಕ ರಕ್ತದೊತ್ತಡದಿಂದಾಗಿ ಆಗಸ್ಟ್ 17 ರಂದು ಆಸ್ಪತ್ರೆಗೆ ದಾಖಲಾಗಿ, ಅದೇ ದಿನ ಮೃತಪಟ್ಟಿದ್ದರು.<br /><br />ಮೃತ ಮೂವರ ಗಂಟಲು ಮಾದರಿ ಪಡೆದು ಪ್ರಯೋಗಾಲಯಕ್ಕೆ ಕಳಿಸಲಾಗಿತ್ತು. ಬುಧವಾರ ವರದಿ ಪಾಸಿಟಿವ್ ಬಂದಿದೆ.</p>.<p>ಬೀದರ್ ತಾಲ್ಲೂಕಿನಲ್ಲಿ 20 ಜನರಿಗೆ ಸೋಂಕು ದೃಢಪಟ್ಟಿದೆ. ಬಸವಕಲ್ಯಾಣ ಹಾಗೂ ಹುಮನಾಬಾದ್ ತಾಲ್ಲೂಕಿನಲ್ಲಿ ತಲಾ 6, ಭಾಲ್ಕಿ ತಾಲ್ಲೂಕಿನಲ್ಲಿ 7 ಹಾಗೂ ಔರಾದ್ ತಾಲ್ಲೂಕಿನಲ್ಲಿ 4 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.</p>.<p>ಜಿಲ್ಲೆಯಲ್ಲಿ 58,501 ಜನರ ಗಂಟಲು ದ್ರವ ಮಾದರಿ ಪರೀಕ್ಷೆ ನಡೆಸಲಾಗಿದೆ. ಇನ್ನೂ 552 ಮಂದಿಯ ವರದಿ ಬರಬೇಕಿದೆ. ಕೋವಿಡ್ ಸೋಂಕಿತರ ಸಂಖ್ಯೆ 3,791ಕ್ಕೆ ಹೆಚ್ಚಿದೆ. 54,158 ಜನರ ವರದಿ ನೆಗೆಟಿವ್ ಬಂದಿದೆ.</p>.<p>ಕೋವಿಡ್ ಕೇರ್ ಸೆಂಟರ್ ಹಾಗೂ ಕೋವಿಡ್ ಆಸ್ಪತ್ರೆಯಿಂದ ಬುಧವಾರ 131 ಮಂದಿ ಬಿಡುಗಡೆ ಹೊಂದಿದ್ದಾರೆ. ಈವರೆಗೆ ಒಟ್ಟು 2723 ಮಂದಿ ಗುಣಮುಖರಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ಜಿಲ್ಲೆಯಲ್ಲಿ ಬುಧವಾರ 43 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಕೋವಿಡ್ನಿಂದಾಗಿ ಒಬ್ಬ ಮಹಿಳೆ ಸೇರಿ ಮೂವರು ಮೃತಪಟ್ಟಿದ್ದಾರೆ.</p>.<p>ಬೀದರ್ನ ಪ್ರತಾಪನಗರದ 66 ವರ್ಷದ ಮಹಿಳೆ ಅಧಿಕ ರಕ್ತದೊತ್ತಡ ಹಾಗೂ ಉಸಿರಾಟ ತೊಂದರೆಯಿಂದ ಆಗಸ್ಟ್ 9 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಆಗಸ್ಟ್ 18ರಂದು ಮೃತಪಟ್ಟಿದ್ದರು.</p>.<p>ಬಸವಕಲ್ಯಾಣ ತಾಲ್ಲೂಕಿನ ಬೇಟಬಾಲಕುಂದಾದ 48 ವರ್ಷದ ಪುರುಷ ಆಗಸ್ಟ್ 17 ರಂದು ಆಸ್ಪತ್ರೆಗೆ ದಾಖಲಾಗಿ, ಆಗಸ್ಟ್ 19ರಂದು ಕೊನೆಯುಸಿರೆಳೆದಿದ್ದರು. ರಾಜೇಶ್ವರದ 65 ವರ್ಷದ ಪುರುಷ ಅಧಿಕ ರಕ್ತದೊತ್ತಡದಿಂದಾಗಿ ಆಗಸ್ಟ್ 17 ರಂದು ಆಸ್ಪತ್ರೆಗೆ ದಾಖಲಾಗಿ, ಅದೇ ದಿನ ಮೃತಪಟ್ಟಿದ್ದರು.<br /><br />ಮೃತ ಮೂವರ ಗಂಟಲು ಮಾದರಿ ಪಡೆದು ಪ್ರಯೋಗಾಲಯಕ್ಕೆ ಕಳಿಸಲಾಗಿತ್ತು. ಬುಧವಾರ ವರದಿ ಪಾಸಿಟಿವ್ ಬಂದಿದೆ.</p>.<p>ಬೀದರ್ ತಾಲ್ಲೂಕಿನಲ್ಲಿ 20 ಜನರಿಗೆ ಸೋಂಕು ದೃಢಪಟ್ಟಿದೆ. ಬಸವಕಲ್ಯಾಣ ಹಾಗೂ ಹುಮನಾಬಾದ್ ತಾಲ್ಲೂಕಿನಲ್ಲಿ ತಲಾ 6, ಭಾಲ್ಕಿ ತಾಲ್ಲೂಕಿನಲ್ಲಿ 7 ಹಾಗೂ ಔರಾದ್ ತಾಲ್ಲೂಕಿನಲ್ಲಿ 4 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.</p>.<p>ಜಿಲ್ಲೆಯಲ್ಲಿ 58,501 ಜನರ ಗಂಟಲು ದ್ರವ ಮಾದರಿ ಪರೀಕ್ಷೆ ನಡೆಸಲಾಗಿದೆ. ಇನ್ನೂ 552 ಮಂದಿಯ ವರದಿ ಬರಬೇಕಿದೆ. ಕೋವಿಡ್ ಸೋಂಕಿತರ ಸಂಖ್ಯೆ 3,791ಕ್ಕೆ ಹೆಚ್ಚಿದೆ. 54,158 ಜನರ ವರದಿ ನೆಗೆಟಿವ್ ಬಂದಿದೆ.</p>.<p>ಕೋವಿಡ್ ಕೇರ್ ಸೆಂಟರ್ ಹಾಗೂ ಕೋವಿಡ್ ಆಸ್ಪತ್ರೆಯಿಂದ ಬುಧವಾರ 131 ಮಂದಿ ಬಿಡುಗಡೆ ಹೊಂದಿದ್ದಾರೆ. ಈವರೆಗೆ ಒಟ್ಟು 2723 ಮಂದಿ ಗುಣಮುಖರಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>