ಬೀದರ್: ‘ಪ್ರಾದೇಶಿಕ ಅಸಮಾನತೆಯನ್ನು ಹೋಗಲಾಡಿಸದಿದ್ದರೆ ಪ್ರತ್ಯೇಕ ರಾಜ್ಯದ ಕೂಗು ಹೆಚ್ಚಾಗುವ ಸಾಧ್ಯತೆಗಳಿವೆ. ರಾಜ್ಯ ಸರ್ಕಾರ ಈ ಅಸಮಾಧಾನ ನಿವಾರಿಸಿ, ವಿಶೇಷ ಪ್ಯಾಕೇಜ್ ನೀಡುವ ಮೂಲಕ ಇಲ್ಲಿಯ ಜನರ ಜೀವನ ಮಟ್ಟ ಸುಧಾರಿಸಲು ಕ್ರಮ ಕೈಗೊಳ್ಳಬೇಕು. ಈ ಮೂಲಕ, ಅಖಂಡ ಕರ್ನಾಟಕದ ಉಳಿವಿಗೆ ಪ್ರಯತ್ನಿಸಬೇಕು’ ಎಂದು ಜಿಲ್ಲಾ 17ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷೆ ಅಕ್ಕ ಅನ್ನಪೂರ್ಣ ಮನವಿ ಮಾಡಿದರು.