ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಗಮ: ಮಾಂಜ್ರಾ ನದಿಯಲ್ಲಿ ಕಾಲು ಜಾರಿ ಬಿದ್ದು ದಂಪತಿ ಸಾವು

Last Updated 6 ಜುಲೈ 2021, 3:19 IST
ಅಕ್ಷರ ಗಾತ್ರ

ಕಮಲನಗರ: ತಾಲ್ಲೂಕಿನ ಸಂಗಮ ಗ್ರಾಮದ ಬಳಿಯ ಮಾಂಜ್ರಾ ನದಿಗೆ ಪೂಜೆ ಮಾಡಲು ಹೋಗಿದ್ದ ವೇಳೆ ಉದಗೀರ ಮೂಲದ ದಂಪತಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ.

ಚಂದ್ರಕಾಂತ ಅಮೃತಪ್ಪ ಮುಳೆ (55), ಅವರ ಪತ್ನಿ ರಾಜಶ್ರೀ ಚಂದ್ರಕಾಂತ ಮುಳೆ (50) ಮೃತರು.

ಅನಾರೋಗ್ಯದಿಂದ ಬಳಲುತ್ತಿದ್ದ ಚಂದ್ರಕಾಂತ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವುದಾಗಿ ಭಾನುವಾರ ರಾತ್ರಿ ರಾಜಶ್ರೀ ಅವರು ಮಗನಿಗೆ ತಿಳಿಸಿ ಹೋಗಿದ್ದರು. ಬೆಳಗಿನ ಜಾವ ಐದು ಗಂಟೆ ಸುಮಾರಿಗೆ ಸಂಗಮ ಗ್ರಾಮದ ಬಳಿ ಮಾಂಜ್ರಾ ನದಿ ಸೇತುವೆ ಬಳಿ ಕಾರು ನಿಲ್ಲಿಸುವಂತೆ ಚಾಲಕನಿಗೆ ಹೇಳಿದ್ದಾರೆ.

ಚಾಲಕ ವಿವೇಕಾನಂದ ಅವರು ಕಾರು ನಿಲ್ಲಿಸಿದಾಗ ಪೂಜೆ ಮಾಡಿಕೊಂಡು ಬರುತ್ತೇವೆ ಎಂದ ದಂಪತಿ ಸೇತುವೆ ಕೆಳಗೆ ಹೋಗಿದ್ದಾರೆ. ಒಂದು ಗಂಟೆಯಾದರೂ ಅವರು ವಾಪಸ್ ಬಾರದಿದ್ದಾಗ ವಿವೇಕಾನಂದ ಕೆಳಗೆ ಹೋಗಿ ನೋಡಿದ್ದಾರೆ. ಆಗ ಇಬ್ಬರ ಮೃತ ದೇಹಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ದಂಪತಿಯ ಪುತ್ರ ಚೇತನ್ ಅವರು ದೂರು ನೀಡಿದ್ದು, ಠಾಣಾಕುಶನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT