<p><strong>ಬಸವಕಲ್ಯಾಣ:</strong> ‘ಕೊರೊನಾ ಸೋಂಕಿತರಿಗೆ ಆಮ್ಲಜನಕದ ಕೊರತೆ ಇಲ್ಲ. ಹಾಸಿಗೆಗಳ ವ್ಯವಸ್ಥೆಯೂ ಸಮರ್ಪ ಕವಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಹೇಳಿದರು.</p>.<p>ನಗರದ ತಾಲ್ಲೂಕು ಆಸ್ಪತ್ರೆಯಲ್ಲಿ ಶನಿವಾರ ಪರಿಶೀಲನೆ ನಡೆಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>‘ಸೋಂಕಿತರಿಗೆ ರೆಮಿಡೆಸಿವಿರ್ ಹಾಗೂ ಇತರೆ ಔಷಧಗಳು ಕೂಡ ಲಭ್ಯಯಿದೆ. ಅವರನ್ನು ಉತ್ತಮ ರೀತಿಯಲ್ಲಿ ಆರೈಕೆ ಮಾಡುವುದಕ್ಕೆ ವೈದ್ಯರಿಗೆ ಸೂಚಿಸಲಾಗಿದೆ. ಕೋವ್ಯಾಕ್ಸಿನ್ ಕೊರತೆ ಆಗಿರುವುದು ನಿಜ. ಅದನ್ನು ತರಿಸುವುದಕ್ಕೆ ಪ್ರಯತ್ನಿಸಲಾಗುತ್ತಿದೆ’ ಎಂದರು.</p>.<p>ಶಾಸಕ ಶರಣು ಸಲಗರ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ವಿ.ಜಿ.ರೆಡ್ಡಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಜಹೀರಾ ನಸೀಮ್, ತಹಶೀಲ್ದಾರ್ ಸಾವಿತ್ರಿ ಸಲಗರ, ಮುಖ್ಯ ವೈದ್ಯಾಧಿಕಾರಿ ಡಾ.ಅಪರ್ಣಾ ಮಹಾನಂದ, ಸಿಪಿಐ ಜೆ.ಎಸ್.ನ್ಯಾಮಗೌಡ, ಸಬ್ ಇನ್ಸ್ಪೆಕ್ಟರ್ ಗುರು ಪಾಟೀಲ ಉಪಸ್ಥಿತರಿದ್ದರು.</p>.<p class="Subhead">ಬಂದೋಬಸ್ತ್ ಮಾಡಿ: ಇದಕ್ಕೂ ಮೊದಲು ಆಸ್ಪತ್ರೆಯಲ್ಲಿ ಆರೋಗ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆಯವರೊಂದಿಗೆ ಸಭೆ ನಡೆಸಿದ ಸಚಿವ ಪ್ರಭು ಚವಾಣ್ ಅವರು ‘ತಾಲ್ಲೂಕಿನ ಗಡಿಯಲ್ಲಿನ ಚೆಕ್ಪೋಸ್ಟ್ಗಳಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಬೇಕು. ಪ್ರವಾಸಿಗಳ ತಪಾಸಣೆ ನಡೆಸಬೇಕು’ ಎಂದು ಸಲಹೆ ನೀಡಿದರು.</p>.<p class="Briefhead">ಲಸಿಕೆ ಜಾಗೃತಿ ಮಾಡಿ ಏನು ಲಾಭ?</p>.<p>ಹುಲಸೂರ: ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರಕ್ಕೆ ಶನಿವಾರ ಸಚಿವ ಪ್ರಭು ಚವಾಣ್ ಭೇಟಿ ನೀಡಿ ಆಸ್ಪತ್ರೆಯಲ್ಲಿನ ಸೌಕರ್ಯ ಪರಿಶೀಲಿಸಿ, ಸಮಸ್ಯೆಗಳನ್ನು ಆಲಿಸಿದರು.</p>.<p>‘ಆಸ್ಪತ್ರೆಯ ಮುಂಭಾಗ ಲಸಿಕೆ ನೋ ಸ್ಟಾಕ್ ಎಂಬ ಫಲಕ ಹಾಕಿದ್ದಾರೆ. ಲಸಿಕೆ ಕುರಿತು ಜನಜಾಗೃತಿ ಮಾಡಿ ಏನು ಲಾಭ’ ಎಂಬ ಸಾರ್ವಜನಿಕರ ಪ್ರಶ್ನೆಗೆ, ‘ರಾಜ್ಯದಾದ್ಯಂತ ಲಸಿಕೆ ಸಮಸ್ಯೆ ಇದೆ. ಶೀಘ್ರ ಬಗೆಹರಿಸುತ್ತೇವೆ’ ಎಂಬುದಾಗಿ ಸಚಿವರು ಪ್ರತಿಕ್ರಿಯಿಸಿದರು.</p>.<p>‘ಬೇರೆ ಕಡೆ ನಿಯೋಜಿತ ಸಿಬ್ಬಂದಿ ಯನ್ನು ಮೂಲ ಸ್ಥಳಕ್ಕೆ ಬಂದು ಸೇವೆ ಮಾಡುವಂತೆ ಕ್ರಮ ಕೈಗೊಳ್ಳಿ’ ಎಂದು ಡಿಎಚ್ಒ ಗೆ ಸೂಚಿಸಿದರು. ಆಂಬುಲೆನ್ಸ್ ಹಾಗೂ ಕೋವಿಡ್ ಕೇಂದ್ರದ ಸಮಸ್ಯೆಯನ್ನು ಒಂದು ವಾರದಲ್ಲಿ ಬಗೆಹರಿಸುವುದಾಗಿ ತಿಳಿಸಿದರು.</p>.<p>ಶಾಸಕ ಶರಣು ಸಲಗರ, ತಹಶೀಲ್ದಾರ್ ಶಿವಾನಂದ ಮೇತ್ರೆ, ಆಸ್ಪತ್ರೆಯ ವೈದ್ಯಾಧಿಕಾರಿ ಅರಿಫೋದ್ದೀನ್, ಶಶಿಕಾಂತ ಕನ್ನಡೆ, ಅಮರ, ಕಂದಾಯ ನಿರೀಕ್ಷಕ ಮೌನೇಶ್ವರ ಸ್ವಾಮಿ, ಜಿ.ಪಂ ಮಾಜಿ ಅಧ್ಯಕ್ಷ ಅನೀಲ ಬೂಸಾರೆ, ಲತಾ ಹಾರಕುಡೆ, ಸುಧೀರ ಕಾಡಾದಿ, ಅಶೋಕ ವಕಾರೆ, ಸೂರ್ಯಕಾಂತ ಚಿಲ್ಲಾಬಟ್ಟೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಸವಕಲ್ಯಾಣ:</strong> ‘ಕೊರೊನಾ ಸೋಂಕಿತರಿಗೆ ಆಮ್ಲಜನಕದ ಕೊರತೆ ಇಲ್ಲ. ಹಾಸಿಗೆಗಳ ವ್ಯವಸ್ಥೆಯೂ ಸಮರ್ಪ ಕವಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಹೇಳಿದರು.</p>.<p>ನಗರದ ತಾಲ್ಲೂಕು ಆಸ್ಪತ್ರೆಯಲ್ಲಿ ಶನಿವಾರ ಪರಿಶೀಲನೆ ನಡೆಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>‘ಸೋಂಕಿತರಿಗೆ ರೆಮಿಡೆಸಿವಿರ್ ಹಾಗೂ ಇತರೆ ಔಷಧಗಳು ಕೂಡ ಲಭ್ಯಯಿದೆ. ಅವರನ್ನು ಉತ್ತಮ ರೀತಿಯಲ್ಲಿ ಆರೈಕೆ ಮಾಡುವುದಕ್ಕೆ ವೈದ್ಯರಿಗೆ ಸೂಚಿಸಲಾಗಿದೆ. ಕೋವ್ಯಾಕ್ಸಿನ್ ಕೊರತೆ ಆಗಿರುವುದು ನಿಜ. ಅದನ್ನು ತರಿಸುವುದಕ್ಕೆ ಪ್ರಯತ್ನಿಸಲಾಗುತ್ತಿದೆ’ ಎಂದರು.</p>.<p>ಶಾಸಕ ಶರಣು ಸಲಗರ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ವಿ.ಜಿ.ರೆಡ್ಡಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಜಹೀರಾ ನಸೀಮ್, ತಹಶೀಲ್ದಾರ್ ಸಾವಿತ್ರಿ ಸಲಗರ, ಮುಖ್ಯ ವೈದ್ಯಾಧಿಕಾರಿ ಡಾ.ಅಪರ್ಣಾ ಮಹಾನಂದ, ಸಿಪಿಐ ಜೆ.ಎಸ್.ನ್ಯಾಮಗೌಡ, ಸಬ್ ಇನ್ಸ್ಪೆಕ್ಟರ್ ಗುರು ಪಾಟೀಲ ಉಪಸ್ಥಿತರಿದ್ದರು.</p>.<p class="Subhead">ಬಂದೋಬಸ್ತ್ ಮಾಡಿ: ಇದಕ್ಕೂ ಮೊದಲು ಆಸ್ಪತ್ರೆಯಲ್ಲಿ ಆರೋಗ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆಯವರೊಂದಿಗೆ ಸಭೆ ನಡೆಸಿದ ಸಚಿವ ಪ್ರಭು ಚವಾಣ್ ಅವರು ‘ತಾಲ್ಲೂಕಿನ ಗಡಿಯಲ್ಲಿನ ಚೆಕ್ಪೋಸ್ಟ್ಗಳಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಬೇಕು. ಪ್ರವಾಸಿಗಳ ತಪಾಸಣೆ ನಡೆಸಬೇಕು’ ಎಂದು ಸಲಹೆ ನೀಡಿದರು.</p>.<p class="Briefhead">ಲಸಿಕೆ ಜಾಗೃತಿ ಮಾಡಿ ಏನು ಲಾಭ?</p>.<p>ಹುಲಸೂರ: ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರಕ್ಕೆ ಶನಿವಾರ ಸಚಿವ ಪ್ರಭು ಚವಾಣ್ ಭೇಟಿ ನೀಡಿ ಆಸ್ಪತ್ರೆಯಲ್ಲಿನ ಸೌಕರ್ಯ ಪರಿಶೀಲಿಸಿ, ಸಮಸ್ಯೆಗಳನ್ನು ಆಲಿಸಿದರು.</p>.<p>‘ಆಸ್ಪತ್ರೆಯ ಮುಂಭಾಗ ಲಸಿಕೆ ನೋ ಸ್ಟಾಕ್ ಎಂಬ ಫಲಕ ಹಾಕಿದ್ದಾರೆ. ಲಸಿಕೆ ಕುರಿತು ಜನಜಾಗೃತಿ ಮಾಡಿ ಏನು ಲಾಭ’ ಎಂಬ ಸಾರ್ವಜನಿಕರ ಪ್ರಶ್ನೆಗೆ, ‘ರಾಜ್ಯದಾದ್ಯಂತ ಲಸಿಕೆ ಸಮಸ್ಯೆ ಇದೆ. ಶೀಘ್ರ ಬಗೆಹರಿಸುತ್ತೇವೆ’ ಎಂಬುದಾಗಿ ಸಚಿವರು ಪ್ರತಿಕ್ರಿಯಿಸಿದರು.</p>.<p>‘ಬೇರೆ ಕಡೆ ನಿಯೋಜಿತ ಸಿಬ್ಬಂದಿ ಯನ್ನು ಮೂಲ ಸ್ಥಳಕ್ಕೆ ಬಂದು ಸೇವೆ ಮಾಡುವಂತೆ ಕ್ರಮ ಕೈಗೊಳ್ಳಿ’ ಎಂದು ಡಿಎಚ್ಒ ಗೆ ಸೂಚಿಸಿದರು. ಆಂಬುಲೆನ್ಸ್ ಹಾಗೂ ಕೋವಿಡ್ ಕೇಂದ್ರದ ಸಮಸ್ಯೆಯನ್ನು ಒಂದು ವಾರದಲ್ಲಿ ಬಗೆಹರಿಸುವುದಾಗಿ ತಿಳಿಸಿದರು.</p>.<p>ಶಾಸಕ ಶರಣು ಸಲಗರ, ತಹಶೀಲ್ದಾರ್ ಶಿವಾನಂದ ಮೇತ್ರೆ, ಆಸ್ಪತ್ರೆಯ ವೈದ್ಯಾಧಿಕಾರಿ ಅರಿಫೋದ್ದೀನ್, ಶಶಿಕಾಂತ ಕನ್ನಡೆ, ಅಮರ, ಕಂದಾಯ ನಿರೀಕ್ಷಕ ಮೌನೇಶ್ವರ ಸ್ವಾಮಿ, ಜಿ.ಪಂ ಮಾಜಿ ಅಧ್ಯಕ್ಷ ಅನೀಲ ಬೂಸಾರೆ, ಲತಾ ಹಾರಕುಡೆ, ಸುಧೀರ ಕಾಡಾದಿ, ಅಶೋಕ ವಕಾರೆ, ಸೂರ್ಯಕಾಂತ ಚಿಲ್ಲಾಬಟ್ಟೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>