ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್: ಈಗ ದಿಡ್ಡಿ ಬಾಗಿಲು ಹಾಕಿದರೆ ಏನು ಪ್ರಯೋಜನ ಎಂದ ಎಚ್‌ಡಿಕೆ

Last Updated 14 ಏಪ್ರಿಲ್ 2021, 15:46 IST
ಅಕ್ಷರ ಗಾತ್ರ

ಬಸವಕಲ್ಯಾಣ (ಬೀದರ್‌ ಜಿಲ್ಲೆ): ‘ಊರೆಲ್ಲ ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿ ಏನು ಪ್ರಯೋಜನ? ಕೋವಿಡ್‌ ಹೆಚ್ಚಾಗಲು ರಾಜ್ಯ ಸರ್ಕಾರವೇ ಕಾರಣ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪ್ರತಿಪಕ್ಷಗಳ ಮುಖಂಡರ ಸಭೆ ಕರೆದಿದ್ದಾರೆ. ಕೋವಿಡ್‌ ಚಿಕಿತ್ಸೆಗೆ ಬೇಕಾಗುವ ಮೂಲಸೌಕರ್ಯ ಹೊಂದಿಸಿಟ್ಟುಕೊಳ್ಳದೆ, ನಿಯಂತ್ರಣಕ್ಕೂ ಸರಿಯಾಗಿ ವ್ಯವಸ್ಥೆ ಮಾಡಿಕೊಳ್ಳದೆ ಸಭೆ ನಡೆಸಿ ಏನು ಉಪಯೋಗ’ ಎಂದು ಪ್ರಶ್ನಿಸಿದರು.

‘ವಾರದಿಂದ ಇಲ್ಲಿಯೇ ಠಿಕಾಣಿ ಹೂಡಿ ಜೆಡಿಎಸ್ ಅಭ್ಯರ್ಥಿ ಯಸ್ರಬ್ ಅಲಿ ಪರ ಪ್ರಚಾರ ಕೈಗೊಂಡಿದ್ದೇನೆ. ಬಸವಣ್ಣನ ಕಾರ್ಯಕ್ಷೇತ್ರದಲ್ಲಿನ ಈ ಚುನಾವಣೆ 2023ರ ಚುನಾವಣೆಗೆ ದಿಕ್ಸೂಚಿ ಆಗಲಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT