<p><strong>ಬೀದರ್: </strong>ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಇನ್ನೂ ಕಡಿಮೆಯಾಗಲಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ವಿಶ್ವಾಸ ವ್ಯಕ್ತಪಡಿಸಿದರು.</p>.<p>ಪ್ರಸ್ತುತ ಕೋವಿಡ್ ಪ್ರಕರಣಗಳು ತಗ್ಗಿವೆ ಎಂದು ಖುಷಿ ಪಡುವಂತಿಲ್ಲ. ಪ್ರಕರಣಗಳು ಶೂನ್ಯಕ್ಕೆ ಬರುವವರೆಗೆ ಎಲ್ಲರೂ ಒಗ್ಗೂಡಿ ಕರ್ತವ್ಯ ನಿರ್ವಹಿಸಬೇಕಿದೆ ಎಂದು ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಗುರುವಾರ ಜಿಲ್ಲೆಯಲ್ಲಿ 94 ಜನರಿಗೆ ಸೋಂಕು ದೃಢಪಟ್ಟಿದೆ. ಐವರು ಕೋವಿಡ್ನಿಂದ ಮೃತಪಟ್ಟಿದ್ದಾರೆ. ಹೊಸದಾಗಿ 39 ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೋವಿಡ್ನಿಂದ ಗುಣಮುಖರಾಗಿ 334 ಜನ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ ಎಂದು ಮಾಹಿತಿ ನೀಡಿದರು.</p>.<p>ಜಿಲ್ಲೆಯ ಯಾವುದೇ ಆಸ್ಪತ್ರೆಗಳಲ್ಲಿ ಬೆಡ್, ರೆಮ್ಡಿಸಿವರ್ ಕೊರತೆ ಇಲ್ಲ. ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಮತ್ತು ಜಿಲ್ಲಾ ಪಂಚಾಯಿತಿಯಿಂದ ಉತ್ತಮ ಕಾರ್ಯಗಳು ಆಗುತ್ತಿವೆ ಎಂದರು.</p>.<p>ಮೇ 24ರ ವರೆಗೆ ಲಾಕ್ಡೌನ್ ಮುಂದುವರಿಯಲಿದೆ. ಅದರ ನಂತರವೂ ಲಾಕ್ಡೌನ್ ಮುಂದುವರೆಸಬೇಕೋ ಬೇಡವೋ ಎನ್ನುವುದನ್ನು ಎರಡು-ಮೂರು ದಿನಗಳಲ್ಲಿ ತೀರ್ಮಾನಿಸಲಾಗುವುದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್ ಇದ್ದರು.</p>.<p class="Briefhead"><strong>ಮಾಸ್ಕ್ ಧರಿಸದ 1,521 ಜನರ ವಿರುದ್ಧ ಪ್ರಕರಣ</strong></p>.<p>ಬೀದರ್: ಜಿಲ್ಲೆಯಲ್ಲಿ ಗುರುವಾರ ಪೊಲೀಸರು ಮಾಸ್ಕ್ ಧರಿಸದ 1,521 ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<p>ಮಾಸ್ಕ್ ಧರಿಸದವರಿಂದ ಒಟ್ಟು ₹1,52,100 ದಂಡ ವಸೂಲಿ ಮಾಡಿದ್ದಾರೆ.</p>.<p>ಜಿಲ್ಲೆಯಲ್ಲಿ ಅನಾವಶ್ಯಕವಾಗಿ ಸಂಚರಿಸುತ್ತಿದ್ದವರ 171 ವಾಹನ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಕರ್ನಾಟಕ ಎಪಿಡಿಮಿಕ್ ಡಿಸೀಸ್ ಆ್ಯಕ್ಟ್ 2020 ಉಲ್ಲಂಘಿಸಿದ್ದಕ್ಕೆ ಸಂಬಂಧಿಸಿದಂತೆ ಏಳು ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: </strong>ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಇನ್ನೂ ಕಡಿಮೆಯಾಗಲಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ವಿಶ್ವಾಸ ವ್ಯಕ್ತಪಡಿಸಿದರು.</p>.<p>ಪ್ರಸ್ತುತ ಕೋವಿಡ್ ಪ್ರಕರಣಗಳು ತಗ್ಗಿವೆ ಎಂದು ಖುಷಿ ಪಡುವಂತಿಲ್ಲ. ಪ್ರಕರಣಗಳು ಶೂನ್ಯಕ್ಕೆ ಬರುವವರೆಗೆ ಎಲ್ಲರೂ ಒಗ್ಗೂಡಿ ಕರ್ತವ್ಯ ನಿರ್ವಹಿಸಬೇಕಿದೆ ಎಂದು ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಗುರುವಾರ ಜಿಲ್ಲೆಯಲ್ಲಿ 94 ಜನರಿಗೆ ಸೋಂಕು ದೃಢಪಟ್ಟಿದೆ. ಐವರು ಕೋವಿಡ್ನಿಂದ ಮೃತಪಟ್ಟಿದ್ದಾರೆ. ಹೊಸದಾಗಿ 39 ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೋವಿಡ್ನಿಂದ ಗುಣಮುಖರಾಗಿ 334 ಜನ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ ಎಂದು ಮಾಹಿತಿ ನೀಡಿದರು.</p>.<p>ಜಿಲ್ಲೆಯ ಯಾವುದೇ ಆಸ್ಪತ್ರೆಗಳಲ್ಲಿ ಬೆಡ್, ರೆಮ್ಡಿಸಿವರ್ ಕೊರತೆ ಇಲ್ಲ. ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಮತ್ತು ಜಿಲ್ಲಾ ಪಂಚಾಯಿತಿಯಿಂದ ಉತ್ತಮ ಕಾರ್ಯಗಳು ಆಗುತ್ತಿವೆ ಎಂದರು.</p>.<p>ಮೇ 24ರ ವರೆಗೆ ಲಾಕ್ಡೌನ್ ಮುಂದುವರಿಯಲಿದೆ. ಅದರ ನಂತರವೂ ಲಾಕ್ಡೌನ್ ಮುಂದುವರೆಸಬೇಕೋ ಬೇಡವೋ ಎನ್ನುವುದನ್ನು ಎರಡು-ಮೂರು ದಿನಗಳಲ್ಲಿ ತೀರ್ಮಾನಿಸಲಾಗುವುದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್ ಇದ್ದರು.</p>.<p class="Briefhead"><strong>ಮಾಸ್ಕ್ ಧರಿಸದ 1,521 ಜನರ ವಿರುದ್ಧ ಪ್ರಕರಣ</strong></p>.<p>ಬೀದರ್: ಜಿಲ್ಲೆಯಲ್ಲಿ ಗುರುವಾರ ಪೊಲೀಸರು ಮಾಸ್ಕ್ ಧರಿಸದ 1,521 ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<p>ಮಾಸ್ಕ್ ಧರಿಸದವರಿಂದ ಒಟ್ಟು ₹1,52,100 ದಂಡ ವಸೂಲಿ ಮಾಡಿದ್ದಾರೆ.</p>.<p>ಜಿಲ್ಲೆಯಲ್ಲಿ ಅನಾವಶ್ಯಕವಾಗಿ ಸಂಚರಿಸುತ್ತಿದ್ದವರ 171 ವಾಹನ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಕರ್ನಾಟಕ ಎಪಿಡಿಮಿಕ್ ಡಿಸೀಸ್ ಆ್ಯಕ್ಟ್ 2020 ಉಲ್ಲಂಘಿಸಿದ್ದಕ್ಕೆ ಸಂಬಂಧಿಸಿದಂತೆ ಏಳು ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>