ಕಮಲನಗರ: ತಾಲ್ಲೂಕಿನ ಚ್ಯಾಂಡೇಶ್ವರ ಗ್ರಾಮದ ಮಹಾಂತೇಶ ಮಡೋಳಪ್ಪ ಮಠ (35) ಕೊರೊನಾ ಸೋಂಕಿನಿಂದಾಗಿ ಮಂಗಳವಾರ ಬೆಳಿಗ್ಗೆ ನಿಧನರಾದರು.
ಮಹಾಂತೇಶ ಅವರು ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಕಳೆದ ತಿಂಗಳು ಸಹೋದರ ಸಾವನ್ನಪ್ಪಿದ್ದ ಕಾರಣ ಚ್ಯಾಂಡೇಶ್ವರ ಗ್ರಾಮಕ್ಕೆ ಬಂದಿದ್ದರು. ಈಚೆಗೆ ಆರೋಗ್ಯ ಹದಗೆಟ್ಟ ಕಾರಣ ಅವರನ್ನು ಬೀದರ್ನ ಬ್ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಅವರಿಗೆ ತಾಯಿ, ಪತ್ನಿ, ಸಹೋದರಿ ಇದ್ದಾರೆ. ಚ್ಯಾಂಡೇಶ್ವರ ಗ್ರಾಮದ ಅವರ ಹೊಲದಲ್ಲಿ ಮಂಗಳವಾರ ಅಂತ್ಯಕ್ರಿಯೆ ಜರುಗಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.