<p><strong>ಬೀದರ್: </strong>‘ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆ ಅಬ್ಬರ ಹೆಚ್ಚಾದ ಕಾರಣ ತಕ್ಷಣ ಜಿಲ್ಲೆಯ ಜನಪ್ರತಿನಿಧಿಗಳ ವರ್ಚುವಲ್ ಸಭೆ ಕರೆಯಬೇಕು’ ಎಂದು ಭಾಲ್ಕಿ ಶಾಸಕ ಈಶ್ವರ ಖಂಡ್ರೆ ಆಗ್ರಹಿಸಿದ್ದಾರೆ.</p>.<p>ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಅವರಿಗೆ ಪತ್ರ ಬರೆದಿದ್ದಾರೆ.</p>.<p>‘ಕೋವಿಡ್ ದೇಶದಾದ್ಯಂತ ತೀವ್ರವಾಗಿ ಹರಡುತ್ತಿದೆ. ಕರ್ನಾಟಕದಲ್ಲೂ ಇದರ ಹಾವಳಿ ಅತಿಯಾಗಿದೆ. ಬೀದರ್ ಜಿಲ್ಲೆ ಕೂಡ ಇದಕ್ಕೆ ಹೊರತಾಗಿಲ್ಲ’ ಎಂದು ತಿಳಿಸಿದ್ದಾರೆ.</p>.<p>‘ಜಿಲ್ಲೆಯ ಸರ್ಕಾರಿ ಕೋವಿಡ್ ಆಸ್ಪತ್ರೆ ಹಾಗೂ ಸರ್ಕಾರದಿಂದ ಅನುಮೋದನೆ ಪಡೆದ ಕೋವಿಡ್ ಚಿಕಿತ್ಸಾ ಕೇಂದ್ರಗಳಲ್ಲಿ ರೆಮ್ಡಿಸಿವಿರ್ ಜೀವ ರಕ್ಷಕ ಔಷಧಿ ಕೊರತೆ ಹೆಚ್ಚಾಗಿದೆ. ಆಕ್ಸಿಜನ್ ಸಮಸ್ಯೆ ತೀವ್ರವಾಗಿದೆ. ವೆಂಟಿಲೇಟರ್ಗಳು ಲಭ್ಯವಾಗುತ್ತಿಲ್ಲ. ಕೋವಿಡ್ ಪರೀಕ್ಷೆ,ಪತ್ತೆ ಹಾಗೂ ಚಿಕಿತ್ಸೆ ಸರ್ಮಪಕವಾಗಿಲ್ಲ<br />ಎನ್ನುವ ದೂರುಗಳು ಸಾರ್ವಜನಿಕರಿಂದ ಕೇಳಿ ಬರುತ್ತಿವೆ’ ಎಂದು ಹೇಳಿದ್ದಾರೆ.</p>.<p>‘ಜನರ ನೋವಿಗೆ ತುರ್ತಾಗಿ ಸ್ಪಂದಿಸಬೇಕಾದ ಸಮಯ ಇದಾಗಿದೆ. ಈ ದಿಸೆಯಲ್ಲಿ ಕೂಡಲೇ ಕೈಗೊಳ್ಳಬೇಕಾದ ಕ್ರಮಗಳ ಕುರಿತುಚರ್ಚಿಸಿ ಕಾರ್ಯೋನ್ಮುಖರಾಗುವ ಅಗತ್ಯ ಇದೆ. ಕಾರಣ ಜಿಲ್ಲೆಯ ಎಲ್ಲವಿಧಾನಸಭಾ ಕ್ಷೇತ್ರಗಳ ಚುನಾಯಿತ ಪ್ರತಿನಿಧಿಗಳ ವರ್ಚುವಲ್ಸಭೆ ಕರೆದು ಮುಗ್ಧ ಜೀವಗಳನ್ನು ಉಳಿಸಲುಮುಂದಾಗಬೇಕು’ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: </strong>‘ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆ ಅಬ್ಬರ ಹೆಚ್ಚಾದ ಕಾರಣ ತಕ್ಷಣ ಜಿಲ್ಲೆಯ ಜನಪ್ರತಿನಿಧಿಗಳ ವರ್ಚುವಲ್ ಸಭೆ ಕರೆಯಬೇಕು’ ಎಂದು ಭಾಲ್ಕಿ ಶಾಸಕ ಈಶ್ವರ ಖಂಡ್ರೆ ಆಗ್ರಹಿಸಿದ್ದಾರೆ.</p>.<p>ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಅವರಿಗೆ ಪತ್ರ ಬರೆದಿದ್ದಾರೆ.</p>.<p>‘ಕೋವಿಡ್ ದೇಶದಾದ್ಯಂತ ತೀವ್ರವಾಗಿ ಹರಡುತ್ತಿದೆ. ಕರ್ನಾಟಕದಲ್ಲೂ ಇದರ ಹಾವಳಿ ಅತಿಯಾಗಿದೆ. ಬೀದರ್ ಜಿಲ್ಲೆ ಕೂಡ ಇದಕ್ಕೆ ಹೊರತಾಗಿಲ್ಲ’ ಎಂದು ತಿಳಿಸಿದ್ದಾರೆ.</p>.<p>‘ಜಿಲ್ಲೆಯ ಸರ್ಕಾರಿ ಕೋವಿಡ್ ಆಸ್ಪತ್ರೆ ಹಾಗೂ ಸರ್ಕಾರದಿಂದ ಅನುಮೋದನೆ ಪಡೆದ ಕೋವಿಡ್ ಚಿಕಿತ್ಸಾ ಕೇಂದ್ರಗಳಲ್ಲಿ ರೆಮ್ಡಿಸಿವಿರ್ ಜೀವ ರಕ್ಷಕ ಔಷಧಿ ಕೊರತೆ ಹೆಚ್ಚಾಗಿದೆ. ಆಕ್ಸಿಜನ್ ಸಮಸ್ಯೆ ತೀವ್ರವಾಗಿದೆ. ವೆಂಟಿಲೇಟರ್ಗಳು ಲಭ್ಯವಾಗುತ್ತಿಲ್ಲ. ಕೋವಿಡ್ ಪರೀಕ್ಷೆ,ಪತ್ತೆ ಹಾಗೂ ಚಿಕಿತ್ಸೆ ಸರ್ಮಪಕವಾಗಿಲ್ಲ<br />ಎನ್ನುವ ದೂರುಗಳು ಸಾರ್ವಜನಿಕರಿಂದ ಕೇಳಿ ಬರುತ್ತಿವೆ’ ಎಂದು ಹೇಳಿದ್ದಾರೆ.</p>.<p>‘ಜನರ ನೋವಿಗೆ ತುರ್ತಾಗಿ ಸ್ಪಂದಿಸಬೇಕಾದ ಸಮಯ ಇದಾಗಿದೆ. ಈ ದಿಸೆಯಲ್ಲಿ ಕೂಡಲೇ ಕೈಗೊಳ್ಳಬೇಕಾದ ಕ್ರಮಗಳ ಕುರಿತುಚರ್ಚಿಸಿ ಕಾರ್ಯೋನ್ಮುಖರಾಗುವ ಅಗತ್ಯ ಇದೆ. ಕಾರಣ ಜಿಲ್ಲೆಯ ಎಲ್ಲವಿಧಾನಸಭಾ ಕ್ಷೇತ್ರಗಳ ಚುನಾಯಿತ ಪ್ರತಿನಿಧಿಗಳ ವರ್ಚುವಲ್ಸಭೆ ಕರೆದು ಮುಗ್ಧ ಜೀವಗಳನ್ನು ಉಳಿಸಲುಮುಂದಾಗಬೇಕು’ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>