<p><strong>ಚಿಟಗುಪ್ಪ: </strong>ತಾಲ್ಲೂಕಿನ ನಿರ್ಣಾ ಗ್ರಾಮದ ಪಾಂಡುರಂಗ ಮಂದಿರ ಓಣಿ ಮಹಿಳೆಯೊಬ್ಬರಿಗೆ ಕೋವಿಡ್–19 ಸೋಂಕು ದೃಢಪಟ್ಟಿದೆ. ಅವರ ಮನೆ ಸುತ್ತ 100 ಮೀಟರ್ ನಾಕಾಬಂದಿ ಹಾಕಲಾಗಿದೆ.</p>.<p>ತಹಶೀಲ್ದಾರ್ ಜಿಯಾವುಲ್ಲಾ ಭಾನುವಾರ ರಾತ್ರಿ ಗ್ರಾಮಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಬಳಿಕ ಅಧಿಕಾರಿಗಳ ಜತೆ ಚರ್ಚಿಸಿದರು.</p>.<p>‘ಸೋಂಕಿತರ ಮನೆ ಸುತ್ತಲಿನ ಪ್ರದೇಶದ ನಾಲ್ಕು ರಸ್ತೆಗಳಿಗೆ ಬ್ಯಾರಿಕೇಡ್ ಅಳವಡಿಸಿ, ಕಟ್ಟಿಗೆಗಳಿಂದ ಕಟ್ಟಿ 100 ಮೀಟರ್ ನಿರ್ಬಂಧ ವಿಧಿಸಲಾಗಿದೆ. ಆ ಪ್ರದೇಶದ ಒಳಗಡೆ ಬರುವ ಮನೆಗಳ ನಾಗರಿಕರು ಅನಗತ್ಯವಾಗಿ ಹೊರಗಡೆ ಬರುವುದನ್ನು ನಿಷೇಧಿಸಬೇಕು’ ಎಂದು ತಿಳಿಸಿದರು.</p>.<p>ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದವರನ್ನು ಹೋಮ್ ಕ್ವಾರಂಟೈನ್ಗೆ ಒಳಪಡಿಸಲಾಗುವುದು ಎಂದರು.</p>.<p>‘ನಾಗರಿಕರಿಗೆ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ತಿಳಿಸಬೇಕು. ಅಂತರ ಕಾಯ್ದುಕೊಂಡು ವ್ಯಾಪಾರ ಮಾಡುವಂತೆ ನೋಡಿಕೊಳ್ಳಬೇಕು’ ಎಂದು ಆರೋಗ್ಯ ಇಲಾಖೆ ಸಿಬ್ಬಂದಿಗೆ ತಿಳಿಸಿದರು.</p>.<p>ವೈದ್ಯಾಧಿಕಾರಿ ಡಾ.ವೀರನಾಥ ಕನಕ್, ವೈದ್ಯ ಡಾ.ಚಂದ್ರಕಾಂತ್, ಪಿಎಸ್ಐ ಸುನೀತಾ, ಕಂದಾಯ ನಿರೀಕ್ಷಕ ಪ್ರಶಾಂತ್ ಹಾಗೂ ಆಶಾ ಕಾರ್ಯಕರ್ತೆಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಟಗುಪ್ಪ: </strong>ತಾಲ್ಲೂಕಿನ ನಿರ್ಣಾ ಗ್ರಾಮದ ಪಾಂಡುರಂಗ ಮಂದಿರ ಓಣಿ ಮಹಿಳೆಯೊಬ್ಬರಿಗೆ ಕೋವಿಡ್–19 ಸೋಂಕು ದೃಢಪಟ್ಟಿದೆ. ಅವರ ಮನೆ ಸುತ್ತ 100 ಮೀಟರ್ ನಾಕಾಬಂದಿ ಹಾಕಲಾಗಿದೆ.</p>.<p>ತಹಶೀಲ್ದಾರ್ ಜಿಯಾವುಲ್ಲಾ ಭಾನುವಾರ ರಾತ್ರಿ ಗ್ರಾಮಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಬಳಿಕ ಅಧಿಕಾರಿಗಳ ಜತೆ ಚರ್ಚಿಸಿದರು.</p>.<p>‘ಸೋಂಕಿತರ ಮನೆ ಸುತ್ತಲಿನ ಪ್ರದೇಶದ ನಾಲ್ಕು ರಸ್ತೆಗಳಿಗೆ ಬ್ಯಾರಿಕೇಡ್ ಅಳವಡಿಸಿ, ಕಟ್ಟಿಗೆಗಳಿಂದ ಕಟ್ಟಿ 100 ಮೀಟರ್ ನಿರ್ಬಂಧ ವಿಧಿಸಲಾಗಿದೆ. ಆ ಪ್ರದೇಶದ ಒಳಗಡೆ ಬರುವ ಮನೆಗಳ ನಾಗರಿಕರು ಅನಗತ್ಯವಾಗಿ ಹೊರಗಡೆ ಬರುವುದನ್ನು ನಿಷೇಧಿಸಬೇಕು’ ಎಂದು ತಿಳಿಸಿದರು.</p>.<p>ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದವರನ್ನು ಹೋಮ್ ಕ್ವಾರಂಟೈನ್ಗೆ ಒಳಪಡಿಸಲಾಗುವುದು ಎಂದರು.</p>.<p>‘ನಾಗರಿಕರಿಗೆ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ತಿಳಿಸಬೇಕು. ಅಂತರ ಕಾಯ್ದುಕೊಂಡು ವ್ಯಾಪಾರ ಮಾಡುವಂತೆ ನೋಡಿಕೊಳ್ಳಬೇಕು’ ಎಂದು ಆರೋಗ್ಯ ಇಲಾಖೆ ಸಿಬ್ಬಂದಿಗೆ ತಿಳಿಸಿದರು.</p>.<p>ವೈದ್ಯಾಧಿಕಾರಿ ಡಾ.ವೀರನಾಥ ಕನಕ್, ವೈದ್ಯ ಡಾ.ಚಂದ್ರಕಾಂತ್, ಪಿಎಸ್ಐ ಸುನೀತಾ, ಕಂದಾಯ ನಿರೀಕ್ಷಕ ಪ್ರಶಾಂತ್ ಹಾಗೂ ಆಶಾ ಕಾರ್ಯಕರ್ತೆಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>