<p><strong>ಹುಮನಾಬಾದ್: </strong>‘ಸರ್ಕಾರದಿಂದ ಉಚಿತವಾಗಿ ಕೋವಿಡ್ ಲಸಿಕೆ ನೀಡುತ್ತಿದ್ದರೂ ಲಸಿಕೆ ಪಡೆಯದೆ ಇರುವುದು ತಪ್ಪು.ಪ್ರತಿಯೊಬ್ಬರೂ ಲಸಿಕೆ ಪಡೆಯಬೇಕು’ ಎಂದು ಹಿರಿಯ ಶ್ರೇಣಿ ನ್ಯಾಯಾಧೀಶರಾದ ಸರಸ್ವತಿ ದೇವಿ ತಿಳಿಸಿದರು.</p>.<p>ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಕೋವಿಡ್ ಲಸಿಕೆ ನೀಡಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಜಗತ್ತಿನಾದ್ಯಂತ ಸಾವಿರಾರು ರೂಪಾಯಿ ಖರ್ಚು ಮಾಡಿದರೂ ಲಸಿಕೆ ದೊರೆಯುತ್ತಿಲ್ಲ. ಇಲ್ಲಿ ಉಚಿತವಾಗಿ ನೀಡಿ ಮನೆ ಬಾಗಿಲಿಗೆ ಬಂದರೂ ನಿರಾಕರಿಸುವುದು ಸರಿಯಲ್ಲ. ಸೋಂಕು ಹರಡುವಿಕೆ ತಡೆಗೆ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಅಂತರ ಕಾಯ್ದುಕೊಳ್ಳಬೇಕು’ ಎಂದರು.</p>.<p>ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ನಾಗನಾಥ ಹುಲಸೂರೆ ಮಾತನಾಡಿ, ‘ಇಲ್ಲಿಯ ಬಾರ್ ಕೌನ್ಸಿಲ್ ವಕೀಲರಿಗೆ ಮತ್ತು ಕಾರಾಗೃಹದ ಕೈದಿಗಳಿಗೆ ಕೋವಿಡ್ ಲಸಿಕೆ ನೀಡಲಾಗಿದೆ’ ಎಂದು ತಿಳಿಸಿದರು.</p>.<p>‘45 ವರ್ಷ ಮೇಲ್ಪಟ್ಟವರು ಸ್ವ-ಇಚ್ಛೆಯಿಂದ ಲಸಿಕೆ ಪಡೆಯಬೇಕು. ಇದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗಿ ಕೊರೊನಾದಿಂದ ಸಂಭವಿಸಬಹುದಾದ ಸಾವು ನೋವು ತಡೆಯಬಹುದು. ಲಸಿಕೆ ಸುರಕ್ಷತೆ ಬಗ್ಗೆ ಅನುಮಾನ ಬೇಡ’ ಎಂದರು.</p>.<p>‘ಯುವಕರು ಪ್ರತಿ ಮನೆಯ ಹಿರಿಯರನ್ನು ಕರೆದುಕೊಂಡು ಬಂದು ಲಸಿಕೆ ಹಾಕಿಸಬೇಕು’ ಎಂದು ಸಲಹೆ ನೀಡಿದರು.</p>.<p>ಕಾರಾಗೃಹ ಮುಖ್ಯ ಅಧೀಕ್ಷಕ ಶಿವಪುತ್ರ, ಬಾರ್ ಕೌನ್ಸಿಲ್ ಕಾರ್ಯದರ್ಶಿ ಹರೀಶ ಅಗಡಿ, ಜೈಲು ಅಧಿಕಾರಿ ಬಸವರಾಜ, ಡಾ.ರೋಹಿತ ರಘೋಜಿ, ಡಾ. ಚಿಮಕೋಡೆ, ಶರಣು, ನಾಗರಾಳೆ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಮನಾಬಾದ್: </strong>‘ಸರ್ಕಾರದಿಂದ ಉಚಿತವಾಗಿ ಕೋವಿಡ್ ಲಸಿಕೆ ನೀಡುತ್ತಿದ್ದರೂ ಲಸಿಕೆ ಪಡೆಯದೆ ಇರುವುದು ತಪ್ಪು.ಪ್ರತಿಯೊಬ್ಬರೂ ಲಸಿಕೆ ಪಡೆಯಬೇಕು’ ಎಂದು ಹಿರಿಯ ಶ್ರೇಣಿ ನ್ಯಾಯಾಧೀಶರಾದ ಸರಸ್ವತಿ ದೇವಿ ತಿಳಿಸಿದರು.</p>.<p>ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಕೋವಿಡ್ ಲಸಿಕೆ ನೀಡಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಜಗತ್ತಿನಾದ್ಯಂತ ಸಾವಿರಾರು ರೂಪಾಯಿ ಖರ್ಚು ಮಾಡಿದರೂ ಲಸಿಕೆ ದೊರೆಯುತ್ತಿಲ್ಲ. ಇಲ್ಲಿ ಉಚಿತವಾಗಿ ನೀಡಿ ಮನೆ ಬಾಗಿಲಿಗೆ ಬಂದರೂ ನಿರಾಕರಿಸುವುದು ಸರಿಯಲ್ಲ. ಸೋಂಕು ಹರಡುವಿಕೆ ತಡೆಗೆ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಅಂತರ ಕಾಯ್ದುಕೊಳ್ಳಬೇಕು’ ಎಂದರು.</p>.<p>ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ನಾಗನಾಥ ಹುಲಸೂರೆ ಮಾತನಾಡಿ, ‘ಇಲ್ಲಿಯ ಬಾರ್ ಕೌನ್ಸಿಲ್ ವಕೀಲರಿಗೆ ಮತ್ತು ಕಾರಾಗೃಹದ ಕೈದಿಗಳಿಗೆ ಕೋವಿಡ್ ಲಸಿಕೆ ನೀಡಲಾಗಿದೆ’ ಎಂದು ತಿಳಿಸಿದರು.</p>.<p>‘45 ವರ್ಷ ಮೇಲ್ಪಟ್ಟವರು ಸ್ವ-ಇಚ್ಛೆಯಿಂದ ಲಸಿಕೆ ಪಡೆಯಬೇಕು. ಇದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗಿ ಕೊರೊನಾದಿಂದ ಸಂಭವಿಸಬಹುದಾದ ಸಾವು ನೋವು ತಡೆಯಬಹುದು. ಲಸಿಕೆ ಸುರಕ್ಷತೆ ಬಗ್ಗೆ ಅನುಮಾನ ಬೇಡ’ ಎಂದರು.</p>.<p>‘ಯುವಕರು ಪ್ರತಿ ಮನೆಯ ಹಿರಿಯರನ್ನು ಕರೆದುಕೊಂಡು ಬಂದು ಲಸಿಕೆ ಹಾಕಿಸಬೇಕು’ ಎಂದು ಸಲಹೆ ನೀಡಿದರು.</p>.<p>ಕಾರಾಗೃಹ ಮುಖ್ಯ ಅಧೀಕ್ಷಕ ಶಿವಪುತ್ರ, ಬಾರ್ ಕೌನ್ಸಿಲ್ ಕಾರ್ಯದರ್ಶಿ ಹರೀಶ ಅಗಡಿ, ಜೈಲು ಅಧಿಕಾರಿ ಬಸವರಾಜ, ಡಾ.ರೋಹಿತ ರಘೋಜಿ, ಡಾ. ಚಿಮಕೋಡೆ, ಶರಣು, ನಾಗರಾಳೆ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>