ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್: ಡಾಂಗೆ ಮೆಮೋರಿಯಲ್ ಟೂರ್ನಿಗೆ ಚಾಲನೆ

ಕ್ರೀಡೆಗಳಿಂದ ಬೆಳವಣಿಗೆ: ವರಜ್ಯೋತಿ ಭಂತೆ
Last Updated 7 ಜನವರಿ 2020, 9:55 IST
ಅಕ್ಷರ ಗಾತ್ರ

ಬೀದರ್: ನಗರದ ಮಾತೋಶ್ರೀ ರಮಾಬಾಯಿ ಅಂಬೇಡ್ಕರ್‌ ಪ್ರೌಢಶಾಲೆ ಆವರಣದಲ್ಲಿ ತ್ರಿಂಬಕ ಡಾಂಗೆ ಅವರ ಜನ್ಮ ದಿನದ ಪ್ರಯುಕ್ತ ಆಯೋಜಿಸಿದ್ದ ತ್ರಿಂಬಕ್ ಡಾಂಗೆ ಮೆಮೋರಿಯಲ್ ಕ್ರಿಕೆಟ್ ಟೂರ್ನಿಗೆ ವರಜ್ಯೋತಿ ಭಂತೆ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು,‘ವಿದ್ಯಾರ್ಥಿಗಳು ಪಾಠದೊಂದಿಗೆ ಆಟಗಳಲ್ಲಿ ಭಾಗವಹಿಸಬೇಕು. ಇದರಿಂದ ಮಕ್ಕಳ ಸರ್ವತೋಮುಖ ಬೆಳವಣಿಗೆಯಾಗುವುದು’ ಎಂದು ಹೇಳಿದರು.

ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿಯ ವಿಭಾಗೀಯ ಕಾರ್ಯದರ್ಶಿ ಅನಿಲಕುಮಾರ ಬೆಲ್ದಾರ್ ಮಾತನಾಡಿ,‘ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ರಣಜಿ ಪಂದ್ಯಾವಳಿ ಆಯೋಜಿಸಲು ಪ್ರಯತ್ನಿಸಲಾಗುವುದು’ ಎಂದು ತಿಳಿಸಿದರು.

ಮುಖಂಡ ಇಲೇಶಕುಮಾರ ಸೋನಿ, ಸಂಸ್ಥೆ ಅಧ್ಯಕ್ಷೆ ಪ್ರೇಮಿಲಾ ಡಾಂಗೆ, ಪ್ರಶಾಂತ ಡಾಂಗೆ, ಪ್ರಸನ್ನ ಡಾಂಗೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT