<p>ಜನವಾಡ: ಬೀದರ್ ತಾಲ್ಲೂಕಿನ ಕಮಠಾಣ ಸಮೀಪದ ಕರ್ನಾಟಕ ಪಶು ವೈದ್ಯಕೀಯ ವಿಶ್ವವಿದ್ಯಾಲಯದ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಉತ್ತರ ಕರ್ನಾಟಕ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಹುಬ್ಬಳ್ಳಿ ವಿಭಾಗ ತಂಡ ಚಾಂಪಿಯನ್ ಆಗಿ ಹೊರ ಹೊಮ್ಮಿತು.</p>.<p>ಫೈನಲ್ ಪಂದ್ಯದಲ್ಲಿ ಹುಬ್ಬಳ್ಳಿ ವಿಭಾಗ ತಂಡವು ಬೆಳಗಾವಿ ವಿಭಾಗ ತಂಡವನ್ನು 8 ರನ್ಗಳಿಂದ ಮಣಿಸಿ ಟ್ರೋಫಿ ತನ್ನದಾಗಿಸಿಕೊಂಡಿತು.</p>.<p>ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಹುಬ್ಬಳ್ಳಿ ವಿಭಾಗ ತಂಡ ನಿಗದಿತ 12 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 85 ರನ್ ಪೇರಿಸಿತು. ನಂತರ ಬ್ಯಾಟಿಂಗ್ಗೆ ಇಳಿದ ಬೆಳಗಾವಿ ವಿಭಾಗ ತಂಡ 7 ವಿಕೆಟ್ ನಷ್ಟಕ್ಕೆ 77 ರನ್ ಗಳಿಸಿ ಸೋಲು ಅನುಭವಿಸಿತು.</p>.<p>ಟೂರ್ನಿಯಲ್ಲಿ ಹುಬ್ಬಳ್ಳಿ, ಬೆಳಗಾವಿ, ಧಾರವಾಡ, ಹೊಸಪೇಟೆ ಹಾಗೂ ರಾಯಚೂರು ವಿಭಾಗಗಳ ತಂಡಗಳು ಪಾಲ್ಗೊಂಡಿದ್ದವು.</p>.<p>ಸಮಾರೋಪ ಸಮಾರಂಭದಲ್ಲಿ ವಿಜೇತ ತಂಡಕ್ಕೆ ಟ್ರೋಫಿ ಪ್ರದಾನ ಮಾಡಲಾಯಿತು.<br />ಬೀದರ್ನ ಕಚ್ ಕಾಡವಾ ಪಟಿದಾರ್ ಸಂಸ್ಥಾನ ಸಮಾಜ ಯುವಕ ಮಂಡಲ (ಗುಜರಾತಿ ಸಮಾಜ) ಟೂರ್ನಿ ಆಯೋಜಿಸಿತ್ತು. ಮಂಡಲ ಅಧ್ಯಕ್ಷ ನಿಲೇಶ್ ಪಟೇಲ್, ಕಾರ್ಯದರ್ಶಿ ನರೇಶ್ ಪಟೇಲ್, ಟೂರ್ನಿಯ ರೂವಾರಿ ಗಳಾದ ಜಯೇಶ್ ಪಟೇಲ್, ಭಾವೇಶ್ ಪಟೇಲ್, ಹರೀಶ್ ಪಟೇಲ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಜನವಾಡ: ಬೀದರ್ ತಾಲ್ಲೂಕಿನ ಕಮಠಾಣ ಸಮೀಪದ ಕರ್ನಾಟಕ ಪಶು ವೈದ್ಯಕೀಯ ವಿಶ್ವವಿದ್ಯಾಲಯದ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಉತ್ತರ ಕರ್ನಾಟಕ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಹುಬ್ಬಳ್ಳಿ ವಿಭಾಗ ತಂಡ ಚಾಂಪಿಯನ್ ಆಗಿ ಹೊರ ಹೊಮ್ಮಿತು.</p>.<p>ಫೈನಲ್ ಪಂದ್ಯದಲ್ಲಿ ಹುಬ್ಬಳ್ಳಿ ವಿಭಾಗ ತಂಡವು ಬೆಳಗಾವಿ ವಿಭಾಗ ತಂಡವನ್ನು 8 ರನ್ಗಳಿಂದ ಮಣಿಸಿ ಟ್ರೋಫಿ ತನ್ನದಾಗಿಸಿಕೊಂಡಿತು.</p>.<p>ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಹುಬ್ಬಳ್ಳಿ ವಿಭಾಗ ತಂಡ ನಿಗದಿತ 12 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 85 ರನ್ ಪೇರಿಸಿತು. ನಂತರ ಬ್ಯಾಟಿಂಗ್ಗೆ ಇಳಿದ ಬೆಳಗಾವಿ ವಿಭಾಗ ತಂಡ 7 ವಿಕೆಟ್ ನಷ್ಟಕ್ಕೆ 77 ರನ್ ಗಳಿಸಿ ಸೋಲು ಅನುಭವಿಸಿತು.</p>.<p>ಟೂರ್ನಿಯಲ್ಲಿ ಹುಬ್ಬಳ್ಳಿ, ಬೆಳಗಾವಿ, ಧಾರವಾಡ, ಹೊಸಪೇಟೆ ಹಾಗೂ ರಾಯಚೂರು ವಿಭಾಗಗಳ ತಂಡಗಳು ಪಾಲ್ಗೊಂಡಿದ್ದವು.</p>.<p>ಸಮಾರೋಪ ಸಮಾರಂಭದಲ್ಲಿ ವಿಜೇತ ತಂಡಕ್ಕೆ ಟ್ರೋಫಿ ಪ್ರದಾನ ಮಾಡಲಾಯಿತು.<br />ಬೀದರ್ನ ಕಚ್ ಕಾಡವಾ ಪಟಿದಾರ್ ಸಂಸ್ಥಾನ ಸಮಾಜ ಯುವಕ ಮಂಡಲ (ಗುಜರಾತಿ ಸಮಾಜ) ಟೂರ್ನಿ ಆಯೋಜಿಸಿತ್ತು. ಮಂಡಲ ಅಧ್ಯಕ್ಷ ನಿಲೇಶ್ ಪಟೇಲ್, ಕಾರ್ಯದರ್ಶಿ ನರೇಶ್ ಪಟೇಲ್, ಟೂರ್ನಿಯ ರೂವಾರಿ ಗಳಾದ ಜಯೇಶ್ ಪಟೇಲ್, ಭಾವೇಶ್ ಪಟೇಲ್, ಹರೀಶ್ ಪಟೇಲ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>