ಜನವಾಡ: ಆಲಿಕಲ್ಲು ಮಳೆಯಿಂದ ಬೆಳೆ ಹಾನಿಗೀಡಾದ ಬೀದರ್ ತಾಲ್ಲೂಕಿನ ಸುಲ್ತಾನಪುರ ಹಾಗೂ ಮಲ್ಕಾಪುರ ಗ್ರಾಮದ ಹೊಲಗಳಿಗೆ ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಶೈಲೇಂದ್ರ ಬೆಲ್ದಾಳೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಪರಿಶೀಲಿಸಿದರು.
ಜೋಳ, ಈರುಳ್ಳಿ, ಕಡಲೆ, ಕಲ್ಲಂಗಡಿ, ಹೂ ಕೋಸು ಸೇರಿದಂತೆ ವಿವಿಧ ಬೆಳೆಗಳಿಗೆ ಹಾನಿಯಾಗಿರುವ ಕುರಿತು ರೈತರು ಮಾಹಿತಿ ನೀಡಿದರು.
ಬೆಳೆ ಹಾನಿಯಾದ ರೈತರ ಹೊಲಗಳ ಸಮೀಕ್ಷೆ ನಡೆಸಿ, ಪರಿಹಾರಕ್ಕಾಗಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.
ವಿಷಯವನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತಂದು, ರೈತರಿಗೆ ಯೋಗ್ಯ ಪರಿಹಾರ ದೊರಕಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.
ಪ್ರಮುಖರಾದ ಚನ್ನಪ್ಪ ಗೌರಶೆಟ್ಟಿ, ಬಸವರಾಜ ಹಿಲಾಲಪುರ, ಶಿವು ಸುಲ್ತಾನಪುರೆ, ಸಂಗಯ್ಯ ಸ್ವಾಮಿ, ಬಸವರಾಜ ಹೆಡ್ಡಿ, ಅನಿಲ್ ಮೇಲ್ದೊಡ್ಡಿ, ಅಧಿಕಾರಿಗಳು ಇದ್ದರು.