ಬೀದರ್: ಜಿಲ್ಲೆಯಲ್ಲಿ ಮಳೆಯಿಂದಾಗಿ ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರ ಒದಗಿಸಬೇಕು ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಜಿಲ್ಲಾ ಘಟಕದ ಅಧ್ಯಕ್ಷ ಮುಬಾಶಿರ್ ಶಿಂಧೆ ಒತ್ತಾಯಿಸಿದ್ದಾರೆ.
ಔರಾದ್ ತಾಲ್ಲೂಕಿನ ಜೀರ್ಗಾ (ಬಿ), ಶೆಂಬೆಳ್ಳಿ, ಹೆಡಗಾಪುರ, ಮುಸ್ತಾಪುರ ಸೇರಿದಂತೆ ವಿವಿಧೆಡೆ ಜಮೀನುಗಳಿಗೆ ನೀರು ನುಗ್ಗಿದೆ. ಉದ್ದು, ಹೆಸರು, ತೊಗರಿ, ಸೋಯಾ, ಶೇಂಗಾ, ಗೋವಿನ ಜೋಳ, ಸಜ್ಜೆ, ಹತ್ತಿ ಹಾಗೂ ತರಕಾರಿ ಬೆಳೆಗಳು ಹಾನಿಗೀಡಾಗಿವೆ ಎಂದು ತಿಳಿಸಿದ್ದಾರೆ.
ರೈತರ ಸಂಕಷ್ಟವನ್ನು ಅರಿತು ರಾಜ್ಯ ಸರ್ಕಾರ ತಕ್ಷಣ ನೆರವಿಗೆ ಧಾವಿಸಬೇಕು. ಹಾಳಾದ ರಸ್ತೆ, ಕಾಲುವೆ, ಕೃಷಿ ಹೊಂಡ, ಬದುಗಳ ಪುನರ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.