<p><strong>ಹುಲಸೂರ:</strong> ಈ ಭಾಗದಲ್ಲಿ ಆಗಸ್ಟ್ನಿಂದ ಇಲ್ಲಿಯವರೆಗೂ ಸುರಿದ ನಿರಂತರ ಮಳೆಯಿಂದಾಗಿ ಮಹಾರಾಷ್ಟ್ರದ ಧನೆಗಾಂವ ಹಾಗೂ ಉಜನಿ ಜಲಾಶಯಗಳಿಂದ ಹೆಚ್ಚುವರಿ ನೀರನ್ನು ಮಾಂಜ್ರಾ ನದಿಗೆ ಹರಿಸಿದ್ದರಿಂದ ನದಿ ದಡದ ಜಮೀನುಗಳಿಗೆ ನೀರು ನುಗ್ಗಿ ಅಪಾರ ಬೆಳೆ ಹಾನಿಯಾಗಿದೆ.</p>.<p>ಸಕಾಲದಲ್ಲಿ ಮುಂಗಾರು ಮಳೆಯಾಗಿದ್ದರಿಂದ ರೈತರು ಉತ್ತಮ ಇಳುವರಿ ನಿರೀಕ್ಷೆಯಲ್ಲಿದ್ದರು. ಆದರೆ ಅತಿವೃಷ್ಟಿ ಅವರ ನಿರೀಕ್ಷೆಗೆ ತಣ್ಣೀರೆರಚಿದೆ. ನಿರಂತರ ಮಳೆಯ ಪರಿಣಾಮದಿಂದ ಮೆಣಸಿನಕಾಯಿ, ತೊಗರಿ, ಕಬ್ಬು ಸೇರಿದಂತೆ ವಿವಿಧ ಬೆಳೆಗಳು ಹಾನಿಗೊಳಗಾಗಿವೆ.</p>.<p>‘ನೀರಿನ ರಭಸ ಹೆಚ್ಚಾದ ಪರಿಣಾಮ ನದಿ ದಡದಲ್ಲಿರುವ ಹೊಲಗಳಿಗೆ ನೀರು ನುಗ್ಗಿದ್ದರಿಂದ ಮಣ್ಣಿನೊಂದಿಗೆ ಬೆಳೆ ಕೊಚ್ಚಿಕೊಂಡು ಹೋಗಿವೆ. ಒಂದು ಎಕರೆ ಮೆಣಸಿನಕಾಯಿ, ಎರಡು ಎಕರೆ ಕಬ್ಬು, ಮೂರು ಎಕರೆ ಕಬ್ಬು, ಮಾವು, ಕರಿಬೇವು, ತರಕಾರಿ ಎಲ್ಲವೂ ನೀರು ಪಾಲಾಗಿವೆ. ಕನಿಷ್ಠ ₹4 ಲಕ್ಷ ರೂಪಾಯಿ ನಷ್ಟವಾಗಿದೆ’ ಎಂದು ನೋವು ತೋಡಿಕೊಂಡರು ರೈತ ಬಸಪ್ಪ ಚೌರೆ.</p>.<p>ಹುಲಸೂರ ಹಾಗೂ ಭಾಲ್ಕಿ ತಾಲ್ಲೂಕು ಅತಿವೃಷ್ಟಿ ಪ್ರಭಾವಿತ ತಾಲ್ಲೂಕುಗಳೆಂದು ಘೋಷಣೆ ಮಾಡಬೇಕು. ಶೀಘ್ರ ಬೆಳೆ ಹಾನಿ ಸಮೀಕ್ಷೆ ನಡೆಸಿ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ರೈತರಾದ ಸುನೀಲ ಭಜಂಗೆ ಹಾಗೂ ಕೈಲಾಸ ಪಾರಶೆಟ್ಟಿ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಲಸೂರ:</strong> ಈ ಭಾಗದಲ್ಲಿ ಆಗಸ್ಟ್ನಿಂದ ಇಲ್ಲಿಯವರೆಗೂ ಸುರಿದ ನಿರಂತರ ಮಳೆಯಿಂದಾಗಿ ಮಹಾರಾಷ್ಟ್ರದ ಧನೆಗಾಂವ ಹಾಗೂ ಉಜನಿ ಜಲಾಶಯಗಳಿಂದ ಹೆಚ್ಚುವರಿ ನೀರನ್ನು ಮಾಂಜ್ರಾ ನದಿಗೆ ಹರಿಸಿದ್ದರಿಂದ ನದಿ ದಡದ ಜಮೀನುಗಳಿಗೆ ನೀರು ನುಗ್ಗಿ ಅಪಾರ ಬೆಳೆ ಹಾನಿಯಾಗಿದೆ.</p>.<p>ಸಕಾಲದಲ್ಲಿ ಮುಂಗಾರು ಮಳೆಯಾಗಿದ್ದರಿಂದ ರೈತರು ಉತ್ತಮ ಇಳುವರಿ ನಿರೀಕ್ಷೆಯಲ್ಲಿದ್ದರು. ಆದರೆ ಅತಿವೃಷ್ಟಿ ಅವರ ನಿರೀಕ್ಷೆಗೆ ತಣ್ಣೀರೆರಚಿದೆ. ನಿರಂತರ ಮಳೆಯ ಪರಿಣಾಮದಿಂದ ಮೆಣಸಿನಕಾಯಿ, ತೊಗರಿ, ಕಬ್ಬು ಸೇರಿದಂತೆ ವಿವಿಧ ಬೆಳೆಗಳು ಹಾನಿಗೊಳಗಾಗಿವೆ.</p>.<p>‘ನೀರಿನ ರಭಸ ಹೆಚ್ಚಾದ ಪರಿಣಾಮ ನದಿ ದಡದಲ್ಲಿರುವ ಹೊಲಗಳಿಗೆ ನೀರು ನುಗ್ಗಿದ್ದರಿಂದ ಮಣ್ಣಿನೊಂದಿಗೆ ಬೆಳೆ ಕೊಚ್ಚಿಕೊಂಡು ಹೋಗಿವೆ. ಒಂದು ಎಕರೆ ಮೆಣಸಿನಕಾಯಿ, ಎರಡು ಎಕರೆ ಕಬ್ಬು, ಮೂರು ಎಕರೆ ಕಬ್ಬು, ಮಾವು, ಕರಿಬೇವು, ತರಕಾರಿ ಎಲ್ಲವೂ ನೀರು ಪಾಲಾಗಿವೆ. ಕನಿಷ್ಠ ₹4 ಲಕ್ಷ ರೂಪಾಯಿ ನಷ್ಟವಾಗಿದೆ’ ಎಂದು ನೋವು ತೋಡಿಕೊಂಡರು ರೈತ ಬಸಪ್ಪ ಚೌರೆ.</p>.<p>ಹುಲಸೂರ ಹಾಗೂ ಭಾಲ್ಕಿ ತಾಲ್ಲೂಕು ಅತಿವೃಷ್ಟಿ ಪ್ರಭಾವಿತ ತಾಲ್ಲೂಕುಗಳೆಂದು ಘೋಷಣೆ ಮಾಡಬೇಕು. ಶೀಘ್ರ ಬೆಳೆ ಹಾನಿ ಸಮೀಕ್ಷೆ ನಡೆಸಿ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ರೈತರಾದ ಸುನೀಲ ಭಜಂಗೆ ಹಾಗೂ ಕೈಲಾಸ ಪಾರಶೆಟ್ಟಿ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>