ರೈತರು ತೋಟಗಾರಿಕೆ ಬೆಳೆಗಳನ್ನು ಬೆಳೆಯುವಾಗ ತೋಟಗಾರಿಕೆ ತಜ್ಞರಿಗೆ ಭೇಟಿ ಮಾಡಿ ಸಲಹೆ ಪಡೆಯಬೇಕು. ಯಾವ ಸಮಯಕ್ಕೆ ಬಿತ್ತನೆ ಮಾಡಬೇಕು,ಯಾವ ಔಷಧಿ ಸಿಂಪರಣೆ ಮಾಡಬೇಕು ಎಂಬುವುದನ್ನು ತಿಳಿಸುತ್ತಾರೆ. ಮುಂದಿನ ದಿನಗಳಲ್ಲಿ ರೈತರು ಕಡ್ಡಾಯವಾಗಿ ತಜ್ಞರ ಸಲಹೆ ಪಡೆಯಬೇಕು ಎಂದು ತೋಟಗಾರಿಕೆ ವಿಜ್ಞಾನಿ ಡಾ.ಮಲ್ಲಿಕಾರ್ಜುನ ನಿಂಗದಳ್ಳಿ ಸಲಹೆ ನೀಡಿದರು.