ಕೂಡಲೇ ಎಲ್ಲಾ ಮಾಹಿತಿ ಸರ್ಕಾರಕ್ಕೆ ಕಳುಹಿಸಬೇಕು. ರೈತರ ಮಾಹಿತಿಯನ್ನು ಪರಿಹಾರ ತಂತ್ರಾಂಶದಲ್ಲಿ ಸೇರಿಸಿ. ಯಾವ ರೈತರು ಸರ್ಕಾರದ ಪರಿಹಾರದಿಂದ ವಂಚಿತರಾಗಬಾರದು ಎಂದುಅಧಿಕಾರಿಗಳಿಗೆ ಸೂಚಿಸಿದರು.
‘ಸರ್ಕಾರ ನಿಮ್ಮ ಜೊತೆಗಿದೆ. ಯಾವುದಕ್ಕೂ ಹೆದರುವ ಅವಶ್ಯಕತೆ ಇಲ್ಲ’ ಎಂದು ಹೇಳಿ ರೈತರಿಗೆ ಧೈರ್ಯ ತುಂಬಿದರು. ನಂತರ ತಾಲ್ಲೂಕಿನ ಸಿದ್ಧಾಪುರ ವಾಡಿ ಗ್ರಾಮದಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ ‘ಮನೆಗಳಿಗೆ ಜಲೋತ್ಸವ– ಮನೆ ಮನೆಗೆ ಗಂಗೆ’ ಕಾರ್ಯಕ್ರಮದ ಮೂಲಕ ನೀರಿನ ಸಂಪರ್ಕ ವ್ಯವಸ್ಥೆಗೆ ಚಾಲನೆ ನೀಡಿದರು.
ಮಾಜಿ ಶಾಸಕ ಪ್ರಕಾಶ ಖಂಡ್ರೆ, ಬಿಜೆಪಿ ಕಬ್ಬು ಬೆಳೆಗಾರರ ಪ್ರಕೋಷ್ಠದ ರಾಜ್ಯ ಸಂಚಾಲಕ ಡಿ.ಕೆ.ಸಿದ್ರಾಮ, ಶಿವರಾಜ ಗಂದಗೆ, ತಾಲ್ಲೂಕು ಅಧ್ಯಕ್ಷ ಪಂಡಿತ ಶಿರೋಳೆ, ತಹಶೀಲ್ದಾರ್ ಕೀರ್ತಿ ಚಾಲಾಕ್, ಜಂಟಿ ನಿರ್ದೇಶಕಿ ತಾರಾಮಣಿ ಇದ್ದರು.