ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಆರ್‌ಪಿಎಫ್ ಯೋಧ ಆತ್ಮಹತ್ಯೆ

Last Updated 17 ಸೆಪ್ಟೆಂಬರ್ 2020, 9:14 IST
ಅಕ್ಷರ ಗಾತ್ರ

ಬಸವಕಲ್ಯಾಣ: ತಾಲ್ಲೂಕಿನ ಗಿಲಗಿಲಿ ಗ್ರಾಮದ ಸಿಆರ್‌ಫಿಎಫ್ ಯೋಧ ಶಿವಾನಂದ ಕುಂಬಾರ (52) ಅವರು ಛತ್ತಿಸಗಡ್‌ದಲ್ಲಿನ ತಮ್ಮ ಕ್ಯಾಂಪ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಛತ್ತಿಸಗಡ್‌ನ ಸುಕಮಾ ಎಂಬಲ್ಲಿ ಇವರು ಎ.ಎಸ್.ಐ ಹುದ್ದೆಯಲ್ಲಿದ್ದರು. ಬುಧವಾರ ಬೆಳಿಗ್ಗೆ ತಮ್ಮ ಎ.ಕೆ. 47 ಗನ್‌ನಿಂದ ತಲೆಗೆ ಗುಂಡಿಟ್ಟುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಜಿಲ್ಲೆಯ ಪೊಲೀಸ್ ಮೂಲಗಳು ದೃಢಪಡಿಸಿವೆ. ಈಚೆಗೆ ಲಾಕ್‌ಡೌನ್‌ ಸಂದರ್ಭದಲ್ಲಿ ಕುಟುಂಬ ಸಮೇತ ಊರಿಗೆ ಬಂದಿದ್ದ ಇವರು ನಂತರ ಒಬ್ಬರೇ ಛತ್ತಿಸಗಡಕ್ಕೆ ತೆರಳಿದ್ದರು ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT