<p>ಕೊಳಾರ(ಕೆ)(ಜನವಾಡ): ವಿದ್ಯಾರ್ಥಿಗಳು ಸಕಾರಾತ್ಮಕ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಬೀದರ್ ವಿಶ್ವವಿದ್ಯಾಲಯದ ಕುಲಸಚಿವ(ಮೌಲ್ಯಮಾಪನ) ಪರಮೇಶ್ವರ ನಾಯ್ಕ ಸಲಹೆ ಮಾಡಿದರು.</p>.<p>ನೌಬಾದ್ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಬೀದರ್ ತಾಲ್ಲೂಕಿನ ಕೊಳಾರ(ಕೆ) ಗ್ರಾಮದಲ್ಲಿ ಈಚೆಗೆ ನಡೆದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಉದ್ಘಾಟಿಸಿ ಮಾತನಾಡಿದರು.</p>.<p>ಸಕಾರಾತ್ಮಕ ಚಿಂತನೆಯಿಂದ ಜೀವನದಲ್ಲಿ ಅಂದುಕೊಂಡ ಗುರಿ ತಲುಪಬಹುದು. ನಕಾರಾತ್ಮಕ ಮನೋಭಾವದಿಂದ ಏನನ್ನೂ ಸಾಧಿಸಲು ಆಗುವುದಿಲ್ಲ ಎಂದು ತಿಳಿಸಿದರು.</p>.<p>ಪ್ರಾಚಾರ್ಯೆ ಪ್ರೊ. ಜಯಶ್ರೀ ಪ್ರಭಾ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು, ಸಂಯಮ ಹಾಗೂ ಸಮಯ ಪ್ರಜ್ಞೆ ರೂಢಿಸಿಕೊಳ್ಳಬೇಕು. ಪರಿಶ್ರಮದ ಮೂಲಕ ಉಜ್ವಲ ಭವಿಷ್ಯ ಕಟ್ಟಿಕೊಳ್ಳಲು ಪ್ರಯತ್ನಿಸಬೇಕು ಎಂದು ಹೇಳಿದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಶಾಂತ ಶರಗಾರ ಮಾತನಾಡಿ, ಸದೃಢ ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಪಾತ್ರ ಬಹಳ ಮುಖ್ಯವಾಗಿದೆ ಎಂದು ನುಡಿದರು.</p>.<p>ರಾಮಸ್ವಾಮಿ ಪೆರಿಯಾರ್ ಪ್ರೌಢಶಾಲೆಯ ಮುಖ್ಯಶಿಕ್ಷಕ ಸಿದ್ರಾಮ ಹಿಂದೊಡ್ಡಿ, ಪಿಡಿಒ ಕುಮುದಾ, ಕಾಲೇಜಿನ ಎನ್ಎಸ್ಎಸ್ ಘಟಕದ ಸಂಚಾಲಕ ಸುಚಿತಾನಂದ ಮಲ್ಕಾಪುರ ಮಾತನಾಡಿದರು.</p>.<p>ಕಾಲೇಜಿನ ಎನ್ಎಸ್ಎಸ್ ಘಟಕದ ಸಲಹಾ ಸಮಿತಿ ಸದಸ್ಯ ರಾಜಕುಮಾರ ಅಲ್ಲೂರೆ, ಗಿರಿಜಾ ಮಂಗಳಗಟ್ಟೆ, ಪ್ರೊ. ಏಲಿಶಾ ದೇವಿದಾಸ, ಚನ್ನಕೇಶವಮೂರ್ತಿ, ಪ್ರೊ.ಪಲ್ಲದೆ ಮಹೇಶ್ವರಿ, ನಾಗಮ್ಮ ಬಂಗರಗಿ, ಪ್ರೊ. ಶ್ರೀಕಾಂತ ಪಾಟೀಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊಳಾರ(ಕೆ)(ಜನವಾಡ): ವಿದ್ಯಾರ್ಥಿಗಳು ಸಕಾರಾತ್ಮಕ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಬೀದರ್ ವಿಶ್ವವಿದ್ಯಾಲಯದ ಕುಲಸಚಿವ(ಮೌಲ್ಯಮಾಪನ) ಪರಮೇಶ್ವರ ನಾಯ್ಕ ಸಲಹೆ ಮಾಡಿದರು.</p>.<p>ನೌಬಾದ್ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಬೀದರ್ ತಾಲ್ಲೂಕಿನ ಕೊಳಾರ(ಕೆ) ಗ್ರಾಮದಲ್ಲಿ ಈಚೆಗೆ ನಡೆದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಉದ್ಘಾಟಿಸಿ ಮಾತನಾಡಿದರು.</p>.<p>ಸಕಾರಾತ್ಮಕ ಚಿಂತನೆಯಿಂದ ಜೀವನದಲ್ಲಿ ಅಂದುಕೊಂಡ ಗುರಿ ತಲುಪಬಹುದು. ನಕಾರಾತ್ಮಕ ಮನೋಭಾವದಿಂದ ಏನನ್ನೂ ಸಾಧಿಸಲು ಆಗುವುದಿಲ್ಲ ಎಂದು ತಿಳಿಸಿದರು.</p>.<p>ಪ್ರಾಚಾರ್ಯೆ ಪ್ರೊ. ಜಯಶ್ರೀ ಪ್ರಭಾ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು, ಸಂಯಮ ಹಾಗೂ ಸಮಯ ಪ್ರಜ್ಞೆ ರೂಢಿಸಿಕೊಳ್ಳಬೇಕು. ಪರಿಶ್ರಮದ ಮೂಲಕ ಉಜ್ವಲ ಭವಿಷ್ಯ ಕಟ್ಟಿಕೊಳ್ಳಲು ಪ್ರಯತ್ನಿಸಬೇಕು ಎಂದು ಹೇಳಿದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಶಾಂತ ಶರಗಾರ ಮಾತನಾಡಿ, ಸದೃಢ ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಪಾತ್ರ ಬಹಳ ಮುಖ್ಯವಾಗಿದೆ ಎಂದು ನುಡಿದರು.</p>.<p>ರಾಮಸ್ವಾಮಿ ಪೆರಿಯಾರ್ ಪ್ರೌಢಶಾಲೆಯ ಮುಖ್ಯಶಿಕ್ಷಕ ಸಿದ್ರಾಮ ಹಿಂದೊಡ್ಡಿ, ಪಿಡಿಒ ಕುಮುದಾ, ಕಾಲೇಜಿನ ಎನ್ಎಸ್ಎಸ್ ಘಟಕದ ಸಂಚಾಲಕ ಸುಚಿತಾನಂದ ಮಲ್ಕಾಪುರ ಮಾತನಾಡಿದರು.</p>.<p>ಕಾಲೇಜಿನ ಎನ್ಎಸ್ಎಸ್ ಘಟಕದ ಸಲಹಾ ಸಮಿತಿ ಸದಸ್ಯ ರಾಜಕುಮಾರ ಅಲ್ಲೂರೆ, ಗಿರಿಜಾ ಮಂಗಳಗಟ್ಟೆ, ಪ್ರೊ. ಏಲಿಶಾ ದೇವಿದಾಸ, ಚನ್ನಕೇಶವಮೂರ್ತಿ, ಪ್ರೊ.ಪಲ್ಲದೆ ಮಹೇಶ್ವರಿ, ನಾಗಮ್ಮ ಬಂಗರಗಿ, ಪ್ರೊ. ಶ್ರೀಕಾಂತ ಪಾಟೀಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>