<p>ಬೀದರ್: ದಯೆ, ಕರುಣೆ ಗುಣಗಳನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು ಎಂದು ಕೌಠಾದ ಬಸವ ಯೋಗಾಶ್ರಮದ ಬೆಲ್ದಾಳ ಸಿದ್ಧರಾಮ ಶರಣರು ಸಲಹೆ ಮಾಡಿದರು.<br />ಇಲ್ಲಿಯ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಪಾವನಧಾಮ ಕೇಂದ್ರದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ನಿಮಿತ್ತ ಆಯೋಜಿಸಿದ್ದ ದಯೆ ಮತ್ತು ಕರುಣೆಗಾಗಿ ಆಧ್ಯಾತ್ಮಿಕ ಸಶಕ್ತೀಕರಣ ಹಾಗೂ ವಿಶ್ವ ದಾದಿಯರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br />ಸುಶಿಕ್ಷಿತರೇ ಕ್ರೂರಿಯಾಗುತ್ತಿದ್ದಾರೆ. ದಯೆ, ಕರುಣೆ, ಶಾಂತಿ ಮಾಯವಾಗುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು.<br />ಸದ್ಗುಣಗಳಿಂದ ಮಾತ್ರ ಉತ್ತಮ ವ್ಯಕ್ತಿತ್ವ ರೂಪುಗೊಳ್ಳಲು ಸಾಧ್ಯವಿದೆ ಎಂದು ಅಭಿಪ್ರಾಯಪಟ್ಟರು.<br />ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಪಾವನಧಾಮ ಕೇಂದ್ರದ ಸಂಚಾಲಕಿ ಪ್ರತಿಮಾ ಬಹೆನ್ಜಿ ಮಾತನಾಡಿ, ಮನುಷ್ಯರನ್ನು ವ್ಯಸನಮುಕ್ತರಾಗಿಸುವುದು, ದಯೆ, ಕರುಣೆ ಮೂಲಕ ಅವರಲ್ಲಿ ಪರಿವರ್ತನೆ ತರುವುದು ಆಧ್ಯಾತ್ಮಿಕ ಸಶಕ್ತೀಕರಣ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ತಿಳಿಸಿದರು.<br />2022-23ನೇ ಸಾಲಿನಲ್ಲಿ ರಾಷ್ಟ್ರದಾದ್ಯಂತ ಮಾದಕ ವ್ಯಸನಗಳ ದುಷ್ಪರಿಣಾಮ, ದಯೆ, ಕರುಣೆ ಜಾಗೃತಿ ಮೂಡಿಸಲು ಹಾಗೂ ಉಚಿತ ಆರೋಗ್ಯ ತಪಾಸಣೆ ಶಿಬಿರಗಳನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಹೇಳಿದರು.<br />ದೇಶದಲ್ಲಿ ಪ್ರತಿ ದಿನ 30 ಸಾವಿರ ಯುವಕರು ಕ್ಯಾನ್ಸರ್ಗೆ ಬಲಿಯಾಗುತ್ತಿದ್ದಾರೆ. ಕ್ಯಾನ್ಸರ್ಗೆ ಕಾರಣವಾಗುವ ಗುಟ್ಕಾಗಳು ಬೀದರ್ನಲ್ಲಿ ಅತಿಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುತ್ತಿವೆ. ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಹಕಾರದೊಂದಿಗೆ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕಾಗಿ ಅಭಿಯಾನ ನಡೆಸಲಾಗುವುದು ಎಂದು ತಿಳಿಸಿದರು.<br />ಎಸ್.ಎಸ್. ಸಿದ್ಧಾರೆಡ್ಡಿ ಫೌಂಡೇಷನ್ನ ಗುರಮ್ಮ ಸಿದ್ದಾರೆಡ್ಡಿ ಮಾತನಾಡಿ, ತಾಯಂದಿರು ಮಕ್ಕಳಿಗೆ ಉತ್ತಮ ಸಂಸ್ಕಾರ ಕೊಡಬೇಕು ಎಂದು ಹೇಳಿದರು.<br />ತೋರಿಕೆಯ ಜೀವನ ಬಹಳ ದಿನ ನಡೆಯುವುದಿಲ್ಲ. ನಡೆ, ನುಡಿ ಒಂದಾಗಿಸಿಕೊಳ್ಳಬೇಕು. ಫಲಾಪೇಕ್ಷೆ ಇಲ್ಲದೆ ಸೇವೆ ಸಲ್ಲಿಸುವವರಿಗೆ ದೇವರು ಖಂಡಿತ ಫಲ ಕೊಡುತ್ತಾನೆ ಎಂದು ನುಡಿದರು.<br />ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಜಿ. ಸುರೇಶ, ಪಾವನಧಾನ ಕೇಂದ್ರದ ಬಿ.ಕೆ. ಪ್ರಭಾಕರ, ಬಿ.ಕೆ. ಜ್ಯೋತಿ ಬಹೆನ್ಜಿ ಮಾತನಾಡಿದರು.<br />ದಾದಿಯರಾದ ರೇಣುಕಾ, ಸವಿತಾ, ಮಂಜುಳಾ ಹಾಗೂ ಡಾ. ಶಾಂತಲಾ ಕೌಜಲಗಿ ಅವರನ್ನು ಸನ್ಮಾನಿಸಲಾಯಿತು. ಸುಷ್ಮಾ ಆಕರ್ಷಕ ಭರತನಾಟ್ಯ ಪ್ರದರ್ಶಿಸಿದರು. ಗುರುದೇವಿ ಬಹೆನ್ಜಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೀದರ್: ದಯೆ, ಕರುಣೆ ಗುಣಗಳನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು ಎಂದು ಕೌಠಾದ ಬಸವ ಯೋಗಾಶ್ರಮದ ಬೆಲ್ದಾಳ ಸಿದ್ಧರಾಮ ಶರಣರು ಸಲಹೆ ಮಾಡಿದರು.<br />ಇಲ್ಲಿಯ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಪಾವನಧಾಮ ಕೇಂದ್ರದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ನಿಮಿತ್ತ ಆಯೋಜಿಸಿದ್ದ ದಯೆ ಮತ್ತು ಕರುಣೆಗಾಗಿ ಆಧ್ಯಾತ್ಮಿಕ ಸಶಕ್ತೀಕರಣ ಹಾಗೂ ವಿಶ್ವ ದಾದಿಯರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br />ಸುಶಿಕ್ಷಿತರೇ ಕ್ರೂರಿಯಾಗುತ್ತಿದ್ದಾರೆ. ದಯೆ, ಕರುಣೆ, ಶಾಂತಿ ಮಾಯವಾಗುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು.<br />ಸದ್ಗುಣಗಳಿಂದ ಮಾತ್ರ ಉತ್ತಮ ವ್ಯಕ್ತಿತ್ವ ರೂಪುಗೊಳ್ಳಲು ಸಾಧ್ಯವಿದೆ ಎಂದು ಅಭಿಪ್ರಾಯಪಟ್ಟರು.<br />ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಪಾವನಧಾಮ ಕೇಂದ್ರದ ಸಂಚಾಲಕಿ ಪ್ರತಿಮಾ ಬಹೆನ್ಜಿ ಮಾತನಾಡಿ, ಮನುಷ್ಯರನ್ನು ವ್ಯಸನಮುಕ್ತರಾಗಿಸುವುದು, ದಯೆ, ಕರುಣೆ ಮೂಲಕ ಅವರಲ್ಲಿ ಪರಿವರ್ತನೆ ತರುವುದು ಆಧ್ಯಾತ್ಮಿಕ ಸಶಕ್ತೀಕರಣ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ತಿಳಿಸಿದರು.<br />2022-23ನೇ ಸಾಲಿನಲ್ಲಿ ರಾಷ್ಟ್ರದಾದ್ಯಂತ ಮಾದಕ ವ್ಯಸನಗಳ ದುಷ್ಪರಿಣಾಮ, ದಯೆ, ಕರುಣೆ ಜಾಗೃತಿ ಮೂಡಿಸಲು ಹಾಗೂ ಉಚಿತ ಆರೋಗ್ಯ ತಪಾಸಣೆ ಶಿಬಿರಗಳನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಹೇಳಿದರು.<br />ದೇಶದಲ್ಲಿ ಪ್ರತಿ ದಿನ 30 ಸಾವಿರ ಯುವಕರು ಕ್ಯಾನ್ಸರ್ಗೆ ಬಲಿಯಾಗುತ್ತಿದ್ದಾರೆ. ಕ್ಯಾನ್ಸರ್ಗೆ ಕಾರಣವಾಗುವ ಗುಟ್ಕಾಗಳು ಬೀದರ್ನಲ್ಲಿ ಅತಿಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುತ್ತಿವೆ. ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಹಕಾರದೊಂದಿಗೆ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕಾಗಿ ಅಭಿಯಾನ ನಡೆಸಲಾಗುವುದು ಎಂದು ತಿಳಿಸಿದರು.<br />ಎಸ್.ಎಸ್. ಸಿದ್ಧಾರೆಡ್ಡಿ ಫೌಂಡೇಷನ್ನ ಗುರಮ್ಮ ಸಿದ್ದಾರೆಡ್ಡಿ ಮಾತನಾಡಿ, ತಾಯಂದಿರು ಮಕ್ಕಳಿಗೆ ಉತ್ತಮ ಸಂಸ್ಕಾರ ಕೊಡಬೇಕು ಎಂದು ಹೇಳಿದರು.<br />ತೋರಿಕೆಯ ಜೀವನ ಬಹಳ ದಿನ ನಡೆಯುವುದಿಲ್ಲ. ನಡೆ, ನುಡಿ ಒಂದಾಗಿಸಿಕೊಳ್ಳಬೇಕು. ಫಲಾಪೇಕ್ಷೆ ಇಲ್ಲದೆ ಸೇವೆ ಸಲ್ಲಿಸುವವರಿಗೆ ದೇವರು ಖಂಡಿತ ಫಲ ಕೊಡುತ್ತಾನೆ ಎಂದು ನುಡಿದರು.<br />ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಜಿ. ಸುರೇಶ, ಪಾವನಧಾನ ಕೇಂದ್ರದ ಬಿ.ಕೆ. ಪ್ರಭಾಕರ, ಬಿ.ಕೆ. ಜ್ಯೋತಿ ಬಹೆನ್ಜಿ ಮಾತನಾಡಿದರು.<br />ದಾದಿಯರಾದ ರೇಣುಕಾ, ಸವಿತಾ, ಮಂಜುಳಾ ಹಾಗೂ ಡಾ. ಶಾಂತಲಾ ಕೌಜಲಗಿ ಅವರನ್ನು ಸನ್ಮಾನಿಸಲಾಯಿತು. ಸುಷ್ಮಾ ಆಕರ್ಷಕ ಭರತನಾಟ್ಯ ಪ್ರದರ್ಶಿಸಿದರು. ಗುರುದೇವಿ ಬಹೆನ್ಜಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>