<p>ಬೀದರ್: ‘ಇಂದಿನ ಯುಗದಲ್ಲಿ ಪ್ರತಿಯೊಬ್ಬರೂ ಒತ್ತಡದಲ್ಲಿದ್ದಾರೆ. ನಾವು ಎಷ್ಟೇ ಒತ್ತಡದಲ್ಲಿದ್ದರೂ ನಮ್ಮ ಸಂಸ್ಕೃತಿಯನ್ನು ಮರೆಯಬಾರದು. ಸಂಸ್ಕೃತಿಯನ್ನು ಪೋಷಿಸಿಕೊಂಡು ಹೋಗುವುದು ಪ್ರತಿಯೊಬ್ಬರ ಹೊಣೆಯಾಗಿದೆ’ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಪುಂಡಲೀಕರಾವ್ ಹೇಳಿದರು.</p>.<p>ಮುಂದಾರ ಕಲಾವಿದರ ವೇದಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ವಿದ್ಯಾನಗರ ಕಾಲೊನಿಯ ಸಮತಾ ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಕವಿಗೋಷ್ಠಿ, ಗೌರವ ಸನ್ಮಾನ ಹಾಗೂ ಜಾನಪದ ಸಂಗೀತ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ನಮ್ಮ ಮಕ್ಕಳೇ ಸಂಸ್ಕೃತಿಯ ವಾಹಕರು. ಹೀಗಾಗಿ ಮಾತೆಯರು ಮಕ್ಕಳಿಗೆ ಉತ್ತಮ ಸಂಸ್ಕಾರ ಕೊಡಬೇಕು’ ಎಂದು ಹೇಳಿದರು.</p>.<p>ಯುವ ಸಾಹಿತಿ ನಾಗೇಶ ಸ್ವಾಮಿ ಮಾತನಾಡಿದರು. ಸಾಹಿತಿ ಈಶ್ವರಯ್ಯ ಕೊಡಂಬಲ, ಮುಖ್ಯಶಿಕ್ಷಕ ಬಳಿರಾಮ್ ಅತಿಥಿಗಳಾಗಿದ್ದರು.</p>.<p>ಕವಯಿತ್ರಿ ಶ್ರೇಯಾ ಮಹೀಂದ್ರಕರ್ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿದ್ದರು. ಪ್ರಾಚಾರ್ಯ ಅಶೋಕ ಬೂದಿಹಾಳ, ಕವಿ ಶ್ರೀಕಾಂತ ಪಾಟೀಲ, ಶಾಂತಕುಮಾರ ಸ್ವಾಮಿ, ವೀರಭದ್ರಪ್ಪ ಉಪ್ಪಿನ್, ನಾರಾಯಣರಾವ್ ಕಾಂಬಳೆ ಹಾಗೂ ಅಜಿತ್ ಎನ್. ಇದ್ದರು.</p>.<p>ಸಾಹಿತಿ ಎಂ.ಜಿ.ದೇಶಪಾಂಡೆ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ರಾಮಲಿಂಗ ಬುಡ್ಡನವರ ನಾಡಗೀತೆ ಹಾಡಿದರು. ಆರ್.ಎಸ್.ಬಿರಾದಾರ ಸ್ವಾಗತಿಸಿದರು. ಯೋಗೇಂದ್ರ ಯದಲಾಪುರೆ ನಿರೂಪಿಸಿದರು. ಧನರಾಜ್ ಅಣಕಲ್ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೀದರ್: ‘ಇಂದಿನ ಯುಗದಲ್ಲಿ ಪ್ರತಿಯೊಬ್ಬರೂ ಒತ್ತಡದಲ್ಲಿದ್ದಾರೆ. ನಾವು ಎಷ್ಟೇ ಒತ್ತಡದಲ್ಲಿದ್ದರೂ ನಮ್ಮ ಸಂಸ್ಕೃತಿಯನ್ನು ಮರೆಯಬಾರದು. ಸಂಸ್ಕೃತಿಯನ್ನು ಪೋಷಿಸಿಕೊಂಡು ಹೋಗುವುದು ಪ್ರತಿಯೊಬ್ಬರ ಹೊಣೆಯಾಗಿದೆ’ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಪುಂಡಲೀಕರಾವ್ ಹೇಳಿದರು.</p>.<p>ಮುಂದಾರ ಕಲಾವಿದರ ವೇದಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ವಿದ್ಯಾನಗರ ಕಾಲೊನಿಯ ಸಮತಾ ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಕವಿಗೋಷ್ಠಿ, ಗೌರವ ಸನ್ಮಾನ ಹಾಗೂ ಜಾನಪದ ಸಂಗೀತ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ನಮ್ಮ ಮಕ್ಕಳೇ ಸಂಸ್ಕೃತಿಯ ವಾಹಕರು. ಹೀಗಾಗಿ ಮಾತೆಯರು ಮಕ್ಕಳಿಗೆ ಉತ್ತಮ ಸಂಸ್ಕಾರ ಕೊಡಬೇಕು’ ಎಂದು ಹೇಳಿದರು.</p>.<p>ಯುವ ಸಾಹಿತಿ ನಾಗೇಶ ಸ್ವಾಮಿ ಮಾತನಾಡಿದರು. ಸಾಹಿತಿ ಈಶ್ವರಯ್ಯ ಕೊಡಂಬಲ, ಮುಖ್ಯಶಿಕ್ಷಕ ಬಳಿರಾಮ್ ಅತಿಥಿಗಳಾಗಿದ್ದರು.</p>.<p>ಕವಯಿತ್ರಿ ಶ್ರೇಯಾ ಮಹೀಂದ್ರಕರ್ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿದ್ದರು. ಪ್ರಾಚಾರ್ಯ ಅಶೋಕ ಬೂದಿಹಾಳ, ಕವಿ ಶ್ರೀಕಾಂತ ಪಾಟೀಲ, ಶಾಂತಕುಮಾರ ಸ್ವಾಮಿ, ವೀರಭದ್ರಪ್ಪ ಉಪ್ಪಿನ್, ನಾರಾಯಣರಾವ್ ಕಾಂಬಳೆ ಹಾಗೂ ಅಜಿತ್ ಎನ್. ಇದ್ದರು.</p>.<p>ಸಾಹಿತಿ ಎಂ.ಜಿ.ದೇಶಪಾಂಡೆ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ರಾಮಲಿಂಗ ಬುಡ್ಡನವರ ನಾಡಗೀತೆ ಹಾಡಿದರು. ಆರ್.ಎಸ್.ಬಿರಾದಾರ ಸ್ವಾಗತಿಸಿದರು. ಯೋಗೇಂದ್ರ ಯದಲಾಪುರೆ ನಿರೂಪಿಸಿದರು. ಧನರಾಜ್ ಅಣಕಲ್ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>