ತಾಲ್ಲೂಕಿನ ಕಮಠಾಣದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಆರ್ಎಸ್ಎಸ್ ಶಿಬಿರ ಆಯೋಜಿಸಿ, ಪಠ್ಯೇತರ ಚಟುವಟಿಕೆಯತ್ತ ಮಕ್ಕಳನ್ನು ಸೆಳೆಯಲು ಪ್ರಯತ್ನಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಹಿಂದೆ ಬೇರೆಡೆ ಶಿಬಿರ ನಡೆಸುತ್ತಿದ್ದ ಆರ್ಎಸ್ಎಸ್ನವರು ಇದೀಗ ಸರ್ಕಾರಿ ಶಾಲೆ ಹಾಗೂ ವಸತಿ ಶಾಲೆಗಳಿಗೂ ಲಗ್ಗೆ ಇಡುತ್ತಿದ್ದಾರೆ. ಬೀದರ್ ದಕ್ಷಿಣ ಕ್ಷೇತ್ರ ವ್ಯಾಪ್ತಿಯ ವಸತಿ ಶಾಲೆಯಲ್ಲಿ ಶಿಬಿರ ಆಯೋಜಿಸಿರುವುದನ್ನು ಖಂಡಿಸಲಾಗುತ್ತದೆ ಎಂದು ಹೇಳಿದ್ದಾರೆ.