<p><strong>ಔರಾದ್:</strong> ತಾಲ್ಲೂಕಿನ ಬೋಂತಿಯಲ್ಲಿ ದಲಿತ ಮಹಿಳೆಯ ಶವ ಸಂಸ್ಕಾರಕ್ಕೆ ಖಾಸಗಿ ಜಮೀನು ಮಾಲೀಕ ಅವಕಾಶ ನೀಡದ್ದರಿಂದ ಮಹಿಳೆಯ ಕುಟುಂಬದ ಸದಸ್ಯರು ಶನಿವಾರ ಇಲ್ಲಿನ ತಹಶೀಲ್ದಾರ್ ಕಚೇರಿ ಮುಂದೆ ಶವ ಇಟ್ಟು ಪ್ರತಿಭಟನೆ ನಡೆಸಿದರು.</p>.<p>ಬೋಂತಿಯ ಲಾಲುಬಾಯಿ ರಾಜಪ್ಪ(65) ಶುಕ್ರವಾರ ಸಂಜೆ ಮೃತಪಟ್ಟಿದ್ದರು. ಕುಟುಂಬದ ಸದಸ್ಯರು ಹಾಗೂ ಸಂಬಂಧಿಕರು ಶನಿವಾರ ಬೆಳಿಗ್ಗೆ ಖಾಸಗಿ ಜಮೀನಿನಲ್ಲಿ ಲಾಲುಬಾಯಿ ಅಂತ್ಯ ಸಂಸ್ಕಾರ ಮಾಡಲು ಮುಂದಾದಾಗ ಜಮೀನು ಮಾಲೀಕ ಆಕ್ಷೇಪ ವ್ಯಕ್ತಪಡಿಸಿ ತನ್ನ ಜಮೀನಿನಲ್ಲಿ ಶವ ಸಂಸ್ಕಾರ ಮಾಡದಂತೆ ಎಚ್ಚರಿಕೆ ನೀಡಿದರು.</p>.<p>ಶವ ಸಂಸ್ಕಾರಕ್ಕೆ ಜಾಗ ದೊರೆಯದ ಕಾರಣ ಲಾಲುಬಾಯಿ ಕುಟುಂಬದ ಸದಸ್ಯರು ಶವವನ್ನು ಗೂಡ್ಸ್ ಆಟೊದಲ್ಲಿ ಹಾಕಿಕೊಂಡು ಔರಾದ್ಗೆ ಬಂದು ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.</p>.<p>‘ಬೋಂತಿಯಲ್ಲಿ ದಲಿತರು ಮೃತಪಟ್ಟರೆ ಶವಸಂಸ್ಕಾರಕ್ಕೆ ಜಾಗ ಸಿಗುತ್ತಿಲ್ಲ. ಸರ್ಕಾರ ದಲಿತರಿಗೆ ಸ್ಮಶಾನ ಭೂಮಿ ಮಂಜೂರು ಮಾಡದ ಕಾರಣ ತೊಂದರೆ ಅನುಭವಿಸಬೇಕಾಗಿದೆ’ ಎಂದು ದಲಿತ ಮುಖಂಡ ಅಶೋಕ ದರಬಾರೆ ಹಾಗೂ ವೈಜಿನಾಥ ವಡೆಯರ್ ಆಕ್ರೋಶ ವ್ಯಕ್ತಪಡಿಸಿದರು.</p>.<p>ತಹಶೀಲ್ದಾರ್ ಎಂ. ಚಂದ್ರಶೇಖರ ಮೃತ ಮಹಿಳೆಯ ಕುಟುಂಬದವರ ಸಮಸ್ಯೆ ಆಲಿಸಿ ಬೋಂತಿಗೆ ತೆರಳಿ ಅಲ್ಲಿನ ಸರ್ಕಾರಿ ಜಮೀನಿನಲ್ಲಿ ಅಂತ್ಯ ಸಂಸ್ಕಾರ ಮಾಡಿಸಿದರು. ನಂತರ ತ್ವೇಷಮಯ ಪರಿಸ್ಥಿತಿ ತಿಳಿಗೊಂಡಿತು. ಮುಂಜಾಗ್ರತಾ ಕ್ರಮವಾಗಿ ಗ್ರಾಮದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಔರಾದ್:</strong> ತಾಲ್ಲೂಕಿನ ಬೋಂತಿಯಲ್ಲಿ ದಲಿತ ಮಹಿಳೆಯ ಶವ ಸಂಸ್ಕಾರಕ್ಕೆ ಖಾಸಗಿ ಜಮೀನು ಮಾಲೀಕ ಅವಕಾಶ ನೀಡದ್ದರಿಂದ ಮಹಿಳೆಯ ಕುಟುಂಬದ ಸದಸ್ಯರು ಶನಿವಾರ ಇಲ್ಲಿನ ತಹಶೀಲ್ದಾರ್ ಕಚೇರಿ ಮುಂದೆ ಶವ ಇಟ್ಟು ಪ್ರತಿಭಟನೆ ನಡೆಸಿದರು.</p>.<p>ಬೋಂತಿಯ ಲಾಲುಬಾಯಿ ರಾಜಪ್ಪ(65) ಶುಕ್ರವಾರ ಸಂಜೆ ಮೃತಪಟ್ಟಿದ್ದರು. ಕುಟುಂಬದ ಸದಸ್ಯರು ಹಾಗೂ ಸಂಬಂಧಿಕರು ಶನಿವಾರ ಬೆಳಿಗ್ಗೆ ಖಾಸಗಿ ಜಮೀನಿನಲ್ಲಿ ಲಾಲುಬಾಯಿ ಅಂತ್ಯ ಸಂಸ್ಕಾರ ಮಾಡಲು ಮುಂದಾದಾಗ ಜಮೀನು ಮಾಲೀಕ ಆಕ್ಷೇಪ ವ್ಯಕ್ತಪಡಿಸಿ ತನ್ನ ಜಮೀನಿನಲ್ಲಿ ಶವ ಸಂಸ್ಕಾರ ಮಾಡದಂತೆ ಎಚ್ಚರಿಕೆ ನೀಡಿದರು.</p>.<p>ಶವ ಸಂಸ್ಕಾರಕ್ಕೆ ಜಾಗ ದೊರೆಯದ ಕಾರಣ ಲಾಲುಬಾಯಿ ಕುಟುಂಬದ ಸದಸ್ಯರು ಶವವನ್ನು ಗೂಡ್ಸ್ ಆಟೊದಲ್ಲಿ ಹಾಕಿಕೊಂಡು ಔರಾದ್ಗೆ ಬಂದು ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.</p>.<p>‘ಬೋಂತಿಯಲ್ಲಿ ದಲಿತರು ಮೃತಪಟ್ಟರೆ ಶವಸಂಸ್ಕಾರಕ್ಕೆ ಜಾಗ ಸಿಗುತ್ತಿಲ್ಲ. ಸರ್ಕಾರ ದಲಿತರಿಗೆ ಸ್ಮಶಾನ ಭೂಮಿ ಮಂಜೂರು ಮಾಡದ ಕಾರಣ ತೊಂದರೆ ಅನುಭವಿಸಬೇಕಾಗಿದೆ’ ಎಂದು ದಲಿತ ಮುಖಂಡ ಅಶೋಕ ದರಬಾರೆ ಹಾಗೂ ವೈಜಿನಾಥ ವಡೆಯರ್ ಆಕ್ರೋಶ ವ್ಯಕ್ತಪಡಿಸಿದರು.</p>.<p>ತಹಶೀಲ್ದಾರ್ ಎಂ. ಚಂದ್ರಶೇಖರ ಮೃತ ಮಹಿಳೆಯ ಕುಟುಂಬದವರ ಸಮಸ್ಯೆ ಆಲಿಸಿ ಬೋಂತಿಗೆ ತೆರಳಿ ಅಲ್ಲಿನ ಸರ್ಕಾರಿ ಜಮೀನಿನಲ್ಲಿ ಅಂತ್ಯ ಸಂಸ್ಕಾರ ಮಾಡಿಸಿದರು. ನಂತರ ತ್ವೇಷಮಯ ಪರಿಸ್ಥಿತಿ ತಿಳಿಗೊಂಡಿತು. ಮುಂಜಾಗ್ರತಾ ಕ್ರಮವಾಗಿ ಗ್ರಾಮದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>