<p><strong>ಔರಾದ್</strong>: ತಾಲ್ಲೂಕಿನಾದ್ಯಂತ ದಸರಾ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.</p>.<p>ಮಂಗಳವಾರ ಆಯುಧ ಪೂಜೆ ನಡೆಯಿತು. ಬುಧವಾರ ಎಲ್ಲರೂ ಹೊಸ ಬಟ್ಟೆ ಧರಿಸಿ ದೇವಿ ಪೂಜೆ ಜತೆಗೆ ಪರಸ್ಪರ ಬನ್ನಿ ಹಂಚಿಕೊಂಡು ಶುಭಾಶಯ ವಿನಿಮಯ ಮಾಡಿಕೊಂಡರು.</p>.<p>ಪಟ್ಟಣದ ಹೊರ ವಲಯದ ಸರ್ಕಾರಿ ಐಟಿಐ ಕಾಲೇಜಿನಲ್ಲಿ ಯಂತ್ರಗಳಿಗೆ ಪೂಜೆ ಸಲ್ಲಿಸಲಾಯಿತು. ಬಳಿಕ ಉನ್ನತಿ ಎಂಟರ್ಪ್ರೈಸಸ್ ಆಯೋಜಿಸಿದ 1 ತಿಂಗಳ ಸಂವಹನ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು.</p>.<p>ಮುಖ್ಯ ಅತಿಥಿಯಾಗಿದ್ದ ಡಾ. ಸಂಜೀವಕುಮಾರ ಜುಮ್ಮಾ ಮಾತನಾಡಿದರು. ಪ್ರಾಂಶುಪಾಲ ಓಂಪ್ರಕಾಶ ದಡ್ಡೆ, ಪತ್ರಕರ್ತ ಮನ್ಮಥಪ್ಪ ಸ್ವಾಮಿ, ಹಿರಿಯ ಪತ್ರಕರ್ತ ಶರಣಪ್ಪ ಚಿಟ್ಮೆ, ಕಿರಿಯ ತರಬೇತಿ ಅಧಿಕಾರಿ ಸಿದ್ದಪ್ಪ ಬಾವುಗೆ, ಸಂಪನ್ಮೂಲ ವ್ಯಕ್ತಿ ಜಾನ್ಸನ್ ಮಾತನಾಡಿದರು.</p>.<p>ಪ್ರಾಂಶುಪಾಲ ಶಿವಶಂಕರ ಟೋಕರೆ ಅಧ್ಯಕ್ಷತೆ ವಹಿಸಿದರು. ಆಡಳಿತಾಧಿಕಾರಿ ಮಿರ್ಜಾ ಅಸದುಲ್ಲಬೇಗ್, ತರಬೇತಿದಾರ ಅಜಮಪಾಶಾ, ಸತೀಶ್ ಗಂದಿಗೂಡೆ, ಅಶೋಕ, ಜಗನ್ನಾಥ ಗಡ್ಡೆ, ಚಂದ್ರಮೋಹನ, ಮುದಬ್ಬೀರ್, ಕಿರಣ, ಸಂಗಮೇಶ ಮರಖಲೆ, ಸತೀಶ ಬೆಳ್ಳೂರೆ, ಚಂದ್ರಕಾಂತ ಹುಲಸೂರೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಔರಾದ್</strong>: ತಾಲ್ಲೂಕಿನಾದ್ಯಂತ ದಸರಾ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.</p>.<p>ಮಂಗಳವಾರ ಆಯುಧ ಪೂಜೆ ನಡೆಯಿತು. ಬುಧವಾರ ಎಲ್ಲರೂ ಹೊಸ ಬಟ್ಟೆ ಧರಿಸಿ ದೇವಿ ಪೂಜೆ ಜತೆಗೆ ಪರಸ್ಪರ ಬನ್ನಿ ಹಂಚಿಕೊಂಡು ಶುಭಾಶಯ ವಿನಿಮಯ ಮಾಡಿಕೊಂಡರು.</p>.<p>ಪಟ್ಟಣದ ಹೊರ ವಲಯದ ಸರ್ಕಾರಿ ಐಟಿಐ ಕಾಲೇಜಿನಲ್ಲಿ ಯಂತ್ರಗಳಿಗೆ ಪೂಜೆ ಸಲ್ಲಿಸಲಾಯಿತು. ಬಳಿಕ ಉನ್ನತಿ ಎಂಟರ್ಪ್ರೈಸಸ್ ಆಯೋಜಿಸಿದ 1 ತಿಂಗಳ ಸಂವಹನ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು.</p>.<p>ಮುಖ್ಯ ಅತಿಥಿಯಾಗಿದ್ದ ಡಾ. ಸಂಜೀವಕುಮಾರ ಜುಮ್ಮಾ ಮಾತನಾಡಿದರು. ಪ್ರಾಂಶುಪಾಲ ಓಂಪ್ರಕಾಶ ದಡ್ಡೆ, ಪತ್ರಕರ್ತ ಮನ್ಮಥಪ್ಪ ಸ್ವಾಮಿ, ಹಿರಿಯ ಪತ್ರಕರ್ತ ಶರಣಪ್ಪ ಚಿಟ್ಮೆ, ಕಿರಿಯ ತರಬೇತಿ ಅಧಿಕಾರಿ ಸಿದ್ದಪ್ಪ ಬಾವುಗೆ, ಸಂಪನ್ಮೂಲ ವ್ಯಕ್ತಿ ಜಾನ್ಸನ್ ಮಾತನಾಡಿದರು.</p>.<p>ಪ್ರಾಂಶುಪಾಲ ಶಿವಶಂಕರ ಟೋಕರೆ ಅಧ್ಯಕ್ಷತೆ ವಹಿಸಿದರು. ಆಡಳಿತಾಧಿಕಾರಿ ಮಿರ್ಜಾ ಅಸದುಲ್ಲಬೇಗ್, ತರಬೇತಿದಾರ ಅಜಮಪಾಶಾ, ಸತೀಶ್ ಗಂದಿಗೂಡೆ, ಅಶೋಕ, ಜಗನ್ನಾಥ ಗಡ್ಡೆ, ಚಂದ್ರಮೋಹನ, ಮುದಬ್ಬೀರ್, ಕಿರಣ, ಸಂಗಮೇಶ ಮರಖಲೆ, ಸತೀಶ ಬೆಳ್ಳೂರೆ, ಚಂದ್ರಕಾಂತ ಹುಲಸೂರೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>