ಬೀದರ್: ಜಿಲ್ಲಾಡಳಿತ ಹಾಗೂ ಕನ್ನಡ ಸಂಸ್ಕೃತಿ ಇಲಾಖೆಯ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬಧವಾರ ದೇವರ ದಾಸಿಮಯ್ಯ ಜಯಂತಿ ಆಚರಿಸಲಾಯಿತು.
ಜಿಲ್ಲಾಧಿಕಾರಿ ಎಚ್.ಆರ್.ಮಹಾದೇವ ಅವರು ದೇವರ ದಾಸಿಮಯ್ಯ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಗಾಳಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ ವಟಗೆ, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಪುಷ್ಪಮನ ಸಲ್ಲಿಸಿದರು.
ಬ್ಯಾಂಕ್ ಖಾತೆ ವಿವರ ಸಲ್ಲಿಸಲು ಸೂಚನೆ ಮಾಜಿ ಸೈನಿಕರು ಮತ್ತು ಅವರ ಅವಲಂಬಿತರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಲಬುರಗಿಯ ಉಪ ನಿರ್ದೇಶಕರ ಕಚೇರಿಯಿಂದ ನಿಗದಿತ ನಮೂನೆಯ ಅರ್ಜಿ ಪಡೆದು ಬ್ಯಾಂಕ್ ಖಾತೆಯ ವಿವರಗಳನ್ನು ಸಂಬಂಧಿಸಿದ ಅಭಿಲೇಖಾಲಯಗಳಿಗೆ ಕಳುಹಿಸಿ ಕೊಡಬೇಕು ಎಂದು ಪ್ರಕಟಣೆ ತಿಳಿಸಿದೆ.