<p><strong>ಬೀದರ್</strong>: ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಸೋಮವಾರ ಇಲ್ಲಿ ಕೋವಿಶೀಲ್ಡ್ ಲಸಿಕೆ ಪಡೆದರು.</p>.<p>ರಾಮಚಂದ್ರನ್ ಅವರು ಲಸಿಕೆ ಪಡೆಯುವುದಕ್ಕಾಗಿಯೇ ಬೆಳಿಗ್ಗೆ ಮಂಗಲಪೇಟ್ನ ಪೊಲೀಸ್ ಆರೋಗ್ಯ ಕೇಂದ್ರಕ್ಕೆ ಬಂದಾಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ವಿ.ಜಿ. ರೆಡ್ಡಿ ಅವರು ಕೋವಿಶೀಲ್ಡ್ ಲಸಿಕೆ ನೀಡಿದರು.</p>.<p>ಕೋವಿಶೀಲ್ಡ್ ಲಸಿಕೆ ಅತ್ಯಂತ ಸುರಕ್ಷಿತವಾಗಿದೆ. ಲಸಿಕೆ ಬಗ್ಗೆ ಯಾರೂ ಅನಗತ್ಯ ಭಯ ಪಡಬಾರದು. ಈಗಾಗಲೇ ಗುರುತಿಸಲಾದ ಎಲ್ಲ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಲಸಿಕೆ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.</p>.<p>ಮೊದಲ ಹಂತದಲ್ಲಿ ಗುರುತಿಸಲಾದ ಇಲಾಖೆಗಳ ಸಿಬ್ಬಂದಿ ಹಾಗೂ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡುವ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ಡಾ. ವಿ.ಜಿ. ರೆಡ್ಡಿ ಮಾಹಿತಿ ನೀಡಿದರು.</p>.<p>ಆರಂಭದಲ್ಲಿ ಕೇಂದ್ರದ ಸಿಬ್ಬಂದಿ ಜಿಲ್ಲಾಧಿಕಾರಿ ಅವರ ಮೊಬೈಲ್ ಸಂಖ್ಯೆ, ಆಧಾರ್ ಕಾರ್ಡ್ ಸಂಖ್ಯೆ ಸೇರಿದಂತೆ ಅಗತ್ಯ ಮಾಹಿತಿ ಪಡೆದರು.</p>.<p>ತಾಲ್ಲೂಕು ಆರೋಗ್ಯಾಧಿಕಾರಿ ಲಕ್ಷ್ಮಣ ಜಾಧವ್, ಪೊಲೀಸ್ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಅನಿಲಕುಮಾರ ಚತುರೆ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಓಂಕಾರ ಮಲ್ಲಿಗೆ ಇದ್ದರು.</p>.<p><strong>ಮೀಸಲು ಪೊಲೀಸ್ ಸಿಬ್ಬಂದಿಗೆ ಕೋವಿಡ್ ಲಸಿಕೆ:<br />ಬೀದರ್:</strong> ರಾಜ್ಯ ಮೀಸಲು ಪೊಲೀಸ್ ಪಡೆ ಸಿಬ್ಬಂದಿಗೆ ಇಲ್ಲಿಯ ನೂರು ಹಾಸಿಗೆಗಳ ಆಸ್ಪತ್ರೆಯಲ್ಲಿ ಕೋವಿಡ್ 19 ಲಸಿಕೆ ನೀಡಲಾಯಿತು.</p>.<p>ಲಸಿಕೆ ಸಂಪೂರ್ಣ ಸುರಕ್ಷಿತವಾಗಿದೆ. ಹೀಗಾಗಿ ಎಲ್ಲರೂ ಲಸಿಕೆ ಪಡೆಯಬೇಕು ಎಂದು ತಿಳಿವಳಿಕೆ ಕೊಡಲಾಯಿತು.<br />ರಾಜ್ಯ ಮೀಸಲು ಪೊಲೀಸ್ ಪಡೆಯ ಡಿವೈಎಸ್ಪಿ ಎ.ಬಿ. ಮೇಘಣ್ಣವರ್, ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮಹೇಶ ಅಡ್ಡೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಸೋಮವಾರ ಇಲ್ಲಿ ಕೋವಿಶೀಲ್ಡ್ ಲಸಿಕೆ ಪಡೆದರು.</p>.<p>ರಾಮಚಂದ್ರನ್ ಅವರು ಲಸಿಕೆ ಪಡೆಯುವುದಕ್ಕಾಗಿಯೇ ಬೆಳಿಗ್ಗೆ ಮಂಗಲಪೇಟ್ನ ಪೊಲೀಸ್ ಆರೋಗ್ಯ ಕೇಂದ್ರಕ್ಕೆ ಬಂದಾಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ವಿ.ಜಿ. ರೆಡ್ಡಿ ಅವರು ಕೋವಿಶೀಲ್ಡ್ ಲಸಿಕೆ ನೀಡಿದರು.</p>.<p>ಕೋವಿಶೀಲ್ಡ್ ಲಸಿಕೆ ಅತ್ಯಂತ ಸುರಕ್ಷಿತವಾಗಿದೆ. ಲಸಿಕೆ ಬಗ್ಗೆ ಯಾರೂ ಅನಗತ್ಯ ಭಯ ಪಡಬಾರದು. ಈಗಾಗಲೇ ಗುರುತಿಸಲಾದ ಎಲ್ಲ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಲಸಿಕೆ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.</p>.<p>ಮೊದಲ ಹಂತದಲ್ಲಿ ಗುರುತಿಸಲಾದ ಇಲಾಖೆಗಳ ಸಿಬ್ಬಂದಿ ಹಾಗೂ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡುವ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ಡಾ. ವಿ.ಜಿ. ರೆಡ್ಡಿ ಮಾಹಿತಿ ನೀಡಿದರು.</p>.<p>ಆರಂಭದಲ್ಲಿ ಕೇಂದ್ರದ ಸಿಬ್ಬಂದಿ ಜಿಲ್ಲಾಧಿಕಾರಿ ಅವರ ಮೊಬೈಲ್ ಸಂಖ್ಯೆ, ಆಧಾರ್ ಕಾರ್ಡ್ ಸಂಖ್ಯೆ ಸೇರಿದಂತೆ ಅಗತ್ಯ ಮಾಹಿತಿ ಪಡೆದರು.</p>.<p>ತಾಲ್ಲೂಕು ಆರೋಗ್ಯಾಧಿಕಾರಿ ಲಕ್ಷ್ಮಣ ಜಾಧವ್, ಪೊಲೀಸ್ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಅನಿಲಕುಮಾರ ಚತುರೆ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಓಂಕಾರ ಮಲ್ಲಿಗೆ ಇದ್ದರು.</p>.<p><strong>ಮೀಸಲು ಪೊಲೀಸ್ ಸಿಬ್ಬಂದಿಗೆ ಕೋವಿಡ್ ಲಸಿಕೆ:<br />ಬೀದರ್:</strong> ರಾಜ್ಯ ಮೀಸಲು ಪೊಲೀಸ್ ಪಡೆ ಸಿಬ್ಬಂದಿಗೆ ಇಲ್ಲಿಯ ನೂರು ಹಾಸಿಗೆಗಳ ಆಸ್ಪತ್ರೆಯಲ್ಲಿ ಕೋವಿಡ್ 19 ಲಸಿಕೆ ನೀಡಲಾಯಿತು.</p>.<p>ಲಸಿಕೆ ಸಂಪೂರ್ಣ ಸುರಕ್ಷಿತವಾಗಿದೆ. ಹೀಗಾಗಿ ಎಲ್ಲರೂ ಲಸಿಕೆ ಪಡೆಯಬೇಕು ಎಂದು ತಿಳಿವಳಿಕೆ ಕೊಡಲಾಯಿತು.<br />ರಾಜ್ಯ ಮೀಸಲು ಪೊಲೀಸ್ ಪಡೆಯ ಡಿವೈಎಸ್ಪಿ ಎ.ಬಿ. ಮೇಘಣ್ಣವರ್, ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮಹೇಶ ಅಡ್ಡೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>