ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್: ಕನ್ನಡ ನಾಮಫಲಕ ಅಳವಡಿಕೆಗೆ ಕರವೇ ಗಡುವು

Last Updated 29 ಅಕ್ಟೋಬರ್ 2020, 14:43 IST
ಅಕ್ಷರ ಗಾತ್ರ

ಬೀದರ್: ಜಿಲ್ಲೆಯಲ್ಲಿ ಕನ್ನಡ ನಾಮಫಲಕ ಅಳವಡಿಕೆಗೆ ಕರ್ನಾಟಕ ರಕ್ಷಣಾ ವೇದಿಕೆ (ಕನ್ನಡ ಪರ ಸಂಘಟನೆಗಳ ಒಕ್ಕೂಟ) 48 ಗಂಟೆಗಳ ಗಡುವು ನೀಡಿದೆ.

ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳು ಶಿಕ್ಷಣ ಸೇರಿ ಸಂಘ ಸಂಸ್ಥೆ, ಖಾಸಗಿ ಆಸ್ಪತ್ರೆ, ಶೋ ರೂಂ, ಮಾಲ್, ಹೊಟೇಲ್, ಅಂಗಡಿ ಮುಂಗಟ್ಟುಗಳ ಮೇಲೆ ಕಡ್ಡಾಯವಾಗಿ ಕನ್ನಡದಲ್ಲಿ ನಾಮಫಲಕ ಬರೆಸಲು ಕ್ರಮ ಕೈಗೊಳ್ಳದಿದ್ದರೆ ನವೆಂಬರ್ 1 ರಂದು ಅನ್ಯ ಭಾಷೆ ನಾಮಫಲಕ ಹಾಗೂ ಜಾಹೀರಾತು ಫಲಕಗಳಿಗೆ ಮಸಿ ಬಳಿಯಲಾಗುವುದು. ಈ ವೇಳೆ ಯಾವುದೇ ಅಹಿತಕರ ಘಟನೆ ಸಂಭವಿಸಿದರೆ ಸ್ಥಳೀಯ ಆಡಳಿತವೇ ನೇರ ಹೊಣೆಯಾಗಲಿದೆ ಎಂದು ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಸೋಮನಾಥ ಮುಧೋಳ ಎಚ್ಚರಿಕೆ ನೀಡಿದ್ದಾರೆ.

ನಾಮಫಲಕ ಸ್ಥಳದ ಶೇ 70 ರಷ್ಟು ಭಾಗದಲ್ಲಿ ಕಡ್ಡಾಯವಾಗಿ ಕನ್ನಡದಲ್ಲಿ ದಪ್ಪ ಅಕ್ಷರಗಳಲ್ಲಿ ನಾಮಫಲಕ ಬರೆಸುವಂತೆ ಒತ್ತಾಯಿಸಿ ವೇದಿಕೆಯಿಂದ ಬೀದರ್‍ನಲ್ಲಿ ಪ್ರತಿಭಟನೆ ನಡೆಸಿ ಆಡಳಿತದ ಗಮನ ಸೆಳೆಯಲಾಗಿತ್ತು. ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವ ಭರವಸೆಯನ್ನೂ ಕೊಟ್ಟಿದ್ದರು. ಆದರೆ, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳು ಕನ್ನಡದಲ್ಲಿ ನಾಮಫಲಕ ಅಳವಡಿಸುವಂತೆ ಕಾಟಾಚಾರಕ್ಕೆ ಪತ್ರಿಕಾ ಪ್ರಕಟಣೆಯೊಂದನ್ನು ಮಾತ್ರ ಹೊರಡಿಸಿ ಕೈತೊಳೆದುಕೊಂಡಿದ್ದಾರೆ ಎಂದು ದೂರಿದ್ದಾರೆ.

ಕನ್ನಡದ ನೆಲದಲ್ಲಿ ಅನ್ಯ ಭಾಷೆ ಫಲಕಗಳೇ ರಾರಾಜಿಸುತ್ತಿರುವುದು ಕನ್ನಡಾಭಿಮಾನಿಗಳಿಗೆ ತೀವ್ರ ನೋವು ಉಂಟು ಮಾಡುತ್ತಿದೆ. ಕನ್ನಡ ನಾಮಫಲಕ ಕಡ್ಡಾಯಕ್ಕೆ ಕ್ರಮ ಕೈಗೊಳ್ಳಬೇಕಾದ ಬೀದರ್ ನಗರಸಭೆ ಆಯುಕ್ತರೇ ತಮ್ಮ ವಾಹನದ ಮೇಲೆ ‘ಸಿಎಂಸಿ ಕಮಿಷನರ್’ ಎಂದು ಆಂಗ್ಲ ಭಾಷೆಯಲ್ಲಿ ಫಲಕ ಅಳವಡಿಸಿದ್ದಾರೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಗರಸಭೆ ಆಯುಕ್ತರು ಬೀದರ್ ನಗರದಲ್ಲಿರುವ ಅನ್ಯ ಭಾಷೆ ಜಾಹೀರಾತು ಫಲಕಗಳನ್ನು ಕೂಡಲೇ ತೆರವುಗೊಳಿಸಬೇಕು. ಕನ್ನಡ ನಾಮಫಲಕ ಅಳವಡಿಕೆಗೆ ಕಟ್ಟುನಿಟ್ಟಿನ ಆದೇಶ ಹೊರಡಿಸಬೇಕು. ಕನ್ನಡದಲ್ಲಿ ನಾಮಫಲಕ ಅಳವಡಿಸದವರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ನವೆಂಬರ್ 2 ರಿಂದ ನಗರಸಭೆ ಆಯಕ್ತರ ವಿರುದ್ಧ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT