ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳು ಶಿಕ್ಷಣ ಸೇರಿ ಸಂಘ ಸಂಸ್ಥೆ, ಖಾಸಗಿ ಆಸ್ಪತ್ರೆ, ಶೋ ರೂಂ, ಮಾಲ್, ಹೊಟೇಲ್, ಅಂಗಡಿ ಮುಂಗಟ್ಟುಗಳ ಮೇಲೆ ಕಡ್ಡಾಯವಾಗಿ ಕನ್ನಡದಲ್ಲಿ ನಾಮಫಲಕ ಬರೆಸಲು ಕ್ರಮ ಕೈಗೊಳ್ಳದಿದ್ದರೆ ನವೆಂಬರ್ 1 ರಂದು ಅನ್ಯ ಭಾಷೆ ನಾಮಫಲಕ ಹಾಗೂ ಜಾಹೀರಾತು ಫಲಕಗಳಿಗೆ ಮಸಿ ಬಳಿಯಲಾಗುವುದು. ಈ ವೇಳೆ ಯಾವುದೇ ಅಹಿತಕರ ಘಟನೆ ಸಂಭವಿಸಿದರೆ ಸ್ಥಳೀಯ ಆಡಳಿತವೇ ನೇರ ಹೊಣೆಯಾಗಲಿದೆ ಎಂದು ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಸೋಮನಾಥ ಮುಧೋಳ ಎಚ್ಚರಿಕೆ ನೀಡಿದ್ದಾರೆ.