<p><strong>ಬೀದರ್</strong>: ಜಿಲ್ಲೆಯಲ್ಲಿ ಸೋಮವಾರ 25 ಮಂದಿಗೆ ಕೋವಿಡ್ ಸೋಂಕು ತಗುಲಿದ್ದು, ನಾಲ್ವರು ಮೃತಪಟ್ಟಿದ್ದಾರೆ.<br />ಕೋವಿಡ್ ವೈರಾಣು ಪೀಡಿತರ ಸಂಖ್ಯೆ 1,403ಕ್ಕೆ ಹಾಗೂ ಮೃತರ ಸಂಖ್ಯೆ 63ಕ್ಕೆ ತಲುಪಿದೆ.</p>.<p>ಬೀದರ್ನ 79 ವರ್ಷದ ಪುರುಷ ಉಸಿರಾಟ ತೊಂದರೆಯಿಂದಾಗಿ ಜುಲೈ 8 ರಂದು ಬ್ರಿಮ್ಸ್ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಫಲಿಸದೆ 17 ರಂದು ಕೊನೆಯುಸಿರೆಳೆದಿದ್ದರು. ಹುಮನಾಬಾದ್ನ 65 ವರ್ಷದ ಇನ್ನೊಬ್ಬ ಪುರುಷ ಉಸಿರಾಟ ಸಮಸ್ಯೆಯಿಂದಾಗಿ ಜುಲೈ 4 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಜುಲೈ 8 ರಂದು ಕೊನೆಯುಸಿರೆಳೆದಿದ್ದರು. ಬೀದರ್ನ 65 ವರ್ಷದ ಮತ್ತೊಬ್ಬರು ತೀವ್ರ ಜ್ವರ ಹಾಗೂ ಉಸಿರಾಟ ತೊಂದರೆಯಿಂದಾಗಿ 11 ರಂದು ಆಸ್ಪತ್ರೆಯಲ್ಲಿ ದಾಖಲಾಗಿ ಮರುದಿನ ಸಾವಿಗೀಡಾಗಿದ್ದರು. ಬಸವಕಲ್ಯಾಣದ 78 ವರ್ಷದ ವ್ಯಕ್ತಿ ಅಧಿಕ ರಕ್ತದೊತ್ತಡ ಹಾಗೂ ಪಾರ್ಶ್ವವಾಯುದಿಂದಾಗಿ ಜುಲೈ 4 ರಂದು ಆಸ್ಪತ್ರೆಗೆ ದಾಖಲಾಗಿ, ಜುಲೈ 5ರಂದು ಕೊನೆಯುಸಿರೆಳೆದಿದ್ದರು. ನಾಲ್ವರು ವೃದ್ಧರ ಗಂಟಲು ದ್ರವ ಮಾದರಿ ಪಡೆದು ಪ್ರಯೋಗಾಲಯಕ್ಕೆ ಕಳಿಸಲಾಗಿತ್ತು. ವರದಿ ಪಾಸಿಟಿವ್ ಬಂದಿದೆ.</p>.<p><strong>ಬರಬೇಕಿದೆ 1,004 ಮಂದಿ ವರದಿ</strong></p>.<p>ಬೀದರ್ ಜಿಲ್ಲೆಯಲ್ಲಿ ಈವರೆಗೆ 46,354 ಜನರ ಗಂಟಲು ದ್ರವ ಮಾದರಿ ಪಡೆಯಲಾಗಿದೆ. ಇವರಲ್ಲಿ 43,910 ಮಂದಿಯ ವೈದ್ಯಕೀಯ ವರದಿ ನೆಗೆಟಿವ್ ಹಾಗೂ 1,403 ಜನರ ವರದಿ ಪಾಸಿಟಿವ್ ಬಂದಿದೆ.</p>.<p>ಬೀದರ್ ತಾಲ್ಲೂಕಿನ 17, ಹುಮನಾಬಾದ್ನ ಐವರು, ಬಸವಕಲ್ಯಾಣದ ಇಬ್ಬರು ಹಾಗೂ ಜಹೀರಾಬಾದ್ನ ಒಬ್ಬರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಇದರಲ್ಲಿ 5 ಹಾಗೂ 15 ವರ್ಷದ ಇಬ್ಬರು ಬಾಲಕಿಯರು, ಮೂವರು ಮಹಿಳೆಯರು ಹಾಗೂ 20 ಪುರುಷರು ಇದ್ದಾರೆ. ನಾಲ್ವರು ವೈದ್ಯರು, ಒಬ್ಬ ವಕೀಲ, ಪತ್ನಿ ಹಾಗೂ 15 ವರ್ಷದ ಪುತ್ರನಿಗೆ ಸೋಂಕು ತಗುಲಿದೆ.</p>.<p>818 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಮವಾರ 78 ಮಂದಿ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 1,041 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷೆಯ ವರದಿ ಬರಬೇಕಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ಜಿಲ್ಲೆಯಲ್ಲಿ ಸೋಮವಾರ 25 ಮಂದಿಗೆ ಕೋವಿಡ್ ಸೋಂಕು ತಗುಲಿದ್ದು, ನಾಲ್ವರು ಮೃತಪಟ್ಟಿದ್ದಾರೆ.<br />ಕೋವಿಡ್ ವೈರಾಣು ಪೀಡಿತರ ಸಂಖ್ಯೆ 1,403ಕ್ಕೆ ಹಾಗೂ ಮೃತರ ಸಂಖ್ಯೆ 63ಕ್ಕೆ ತಲುಪಿದೆ.</p>.<p>ಬೀದರ್ನ 79 ವರ್ಷದ ಪುರುಷ ಉಸಿರಾಟ ತೊಂದರೆಯಿಂದಾಗಿ ಜುಲೈ 8 ರಂದು ಬ್ರಿಮ್ಸ್ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಫಲಿಸದೆ 17 ರಂದು ಕೊನೆಯುಸಿರೆಳೆದಿದ್ದರು. ಹುಮನಾಬಾದ್ನ 65 ವರ್ಷದ ಇನ್ನೊಬ್ಬ ಪುರುಷ ಉಸಿರಾಟ ಸಮಸ್ಯೆಯಿಂದಾಗಿ ಜುಲೈ 4 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಜುಲೈ 8 ರಂದು ಕೊನೆಯುಸಿರೆಳೆದಿದ್ದರು. ಬೀದರ್ನ 65 ವರ್ಷದ ಮತ್ತೊಬ್ಬರು ತೀವ್ರ ಜ್ವರ ಹಾಗೂ ಉಸಿರಾಟ ತೊಂದರೆಯಿಂದಾಗಿ 11 ರಂದು ಆಸ್ಪತ್ರೆಯಲ್ಲಿ ದಾಖಲಾಗಿ ಮರುದಿನ ಸಾವಿಗೀಡಾಗಿದ್ದರು. ಬಸವಕಲ್ಯಾಣದ 78 ವರ್ಷದ ವ್ಯಕ್ತಿ ಅಧಿಕ ರಕ್ತದೊತ್ತಡ ಹಾಗೂ ಪಾರ್ಶ್ವವಾಯುದಿಂದಾಗಿ ಜುಲೈ 4 ರಂದು ಆಸ್ಪತ್ರೆಗೆ ದಾಖಲಾಗಿ, ಜುಲೈ 5ರಂದು ಕೊನೆಯುಸಿರೆಳೆದಿದ್ದರು. ನಾಲ್ವರು ವೃದ್ಧರ ಗಂಟಲು ದ್ರವ ಮಾದರಿ ಪಡೆದು ಪ್ರಯೋಗಾಲಯಕ್ಕೆ ಕಳಿಸಲಾಗಿತ್ತು. ವರದಿ ಪಾಸಿಟಿವ್ ಬಂದಿದೆ.</p>.<p><strong>ಬರಬೇಕಿದೆ 1,004 ಮಂದಿ ವರದಿ</strong></p>.<p>ಬೀದರ್ ಜಿಲ್ಲೆಯಲ್ಲಿ ಈವರೆಗೆ 46,354 ಜನರ ಗಂಟಲು ದ್ರವ ಮಾದರಿ ಪಡೆಯಲಾಗಿದೆ. ಇವರಲ್ಲಿ 43,910 ಮಂದಿಯ ವೈದ್ಯಕೀಯ ವರದಿ ನೆಗೆಟಿವ್ ಹಾಗೂ 1,403 ಜನರ ವರದಿ ಪಾಸಿಟಿವ್ ಬಂದಿದೆ.</p>.<p>ಬೀದರ್ ತಾಲ್ಲೂಕಿನ 17, ಹುಮನಾಬಾದ್ನ ಐವರು, ಬಸವಕಲ್ಯಾಣದ ಇಬ್ಬರು ಹಾಗೂ ಜಹೀರಾಬಾದ್ನ ಒಬ್ಬರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಇದರಲ್ಲಿ 5 ಹಾಗೂ 15 ವರ್ಷದ ಇಬ್ಬರು ಬಾಲಕಿಯರು, ಮೂವರು ಮಹಿಳೆಯರು ಹಾಗೂ 20 ಪುರುಷರು ಇದ್ದಾರೆ. ನಾಲ್ವರು ವೈದ್ಯರು, ಒಬ್ಬ ವಕೀಲ, ಪತ್ನಿ ಹಾಗೂ 15 ವರ್ಷದ ಪುತ್ರನಿಗೆ ಸೋಂಕು ತಗುಲಿದೆ.</p>.<p>818 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಮವಾರ 78 ಮಂದಿ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 1,041 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷೆಯ ವರದಿ ಬರಬೇಕಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>