ಬಸವಕಲ್ಯಾಣ: ‘ನಗರದಲ್ಲಿ ಫೆಬ್ರುವರಿ 19 ರಂದು ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಗುವುದು’ ಎಂದು ಜಯಂತಿ ಆಚರಣಾ ಸಮಿತಿ ಅಧ್ಯಕ್ಷ ಗುಂಡುರೆಡ್ಡಿ ಕಮಲಾಪುರೆ ಹೇಳಿದರು.
ಕರ್ನಾಟಕ ಕ್ಷತ್ರಿಯ ಮರಾಠಾ ಪರಿಷತ್ತಿನ ವತಿಯಿಂದ ಇಲ್ಲಿ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದರು.
‘ಅಂದು ಮಧ್ಯಾಹ್ನ 4ಕ್ಕೆ ಸಮಾರಂಭ ನಡೆಯಲಿದೆ. ಮರಾಠಾ ಪರಿಷತ್ ಮತ್ತು ಎಲ್ಲ ಸಮುದಾಯಗಳ ಪ್ರಮುಖರು ನನ್ನನ್ನು ಜಯಂತಿ ಆಚರಣಾ ಸಮಿತಿಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ’ ಎಂದರು.
ಕರ್ನಾಟಕ ಕ್ಷತ್ರಿಯ ಮರಾಠಾ ಪರಿಷತ್ತಿನ ತಾಲ್ಲೂಕು ಘಟಕದ ಅಧ್ಯಕ್ಷ ವಿ.ಟಿ.ಶಿಂಧೆ, ಕಾರ್ಯದರ್ಶಿ ತಾತೇರಾವ್ ಪಾಟೀಲ ಮಂಗಳೂರ ಹಾಗೂ ಕೃಷ್ಣಾ ಗೋಣೆ ಮಾತನಾಡಿದರು. ವಿವಿಧ ಸಮುದಾಯಗಳ ಪ್ರಮುಖರು ಇದ್ದರು.