ನರೇಗಾ ಸಹಾಯಕ ನಿರ್ದೇಶಕ ಜಯಪ್ರಕಾಶ ಚವ್ಹಾಣ ಮಾತನಾಡಿ, ‘ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಜೀವನ ಜ್ಯೋತಿ ಸುರಕ್ಷಾ ವಿಮೆ ಯೋಜನೆಯಲ್ಲಿ ಎಲ್ಲಾ ನರೇಗಾ ಕೂಲಿಕಾರರು ಕಡ್ಡಾಯವಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಸಾವು ಸಂಭವಿಸಿದಾಗ ಮೃತರ ಬಡ ಕುಟುಂಬಕ್ಕೆ ಈ ವಿಮೆ ಹಣ ತುಂಬಾ ಸಹಕಾರಿಯಾಗುತ್ತದೆ’ ಎಂದು ಸಲಹೆ ನೀಡಿದರು.