ಒಂಬತ್ತು ಬಾರಿ ಶಾಸಕ, ಎರಡು ಬಾರಿ ಸಂಸದ, ರಾಜ್ಯಸಭೆ ಸದಸ್ಯ, ರಾಜ್ಯ ಸಚಿವ ಹಾಗೂ ಕೇಂದ್ರ ಸಚಿವರಾಗಿ ದೇಶ ಹಾಗೂ ಕರ್ನಾಟಕಕ್ಕೆ ಬಹಳಷ್ಟು ಕೊಡುಗೆಗಳನ್ನು ನೀಡಿದ್ದಾರೆ. ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ, ಕರ್ನಾಟಕ ಪಶು ವೈದ್ಯಕೀಯ ವಿಶ್ವವಿದ್ಯಾಲಯ, ಬೀದರ್-ಬೆಂಗಳೂರು ಹೊಸ ರೈಲು, ಬೀದರ್- ಹೈದರಾಬಾದ್ ಇಂಟರ್ಸಿಟಿ ರೈಲು, ಕಲಬುರ್ಗಿಯ ಇಎಸ್ಐ ಆಸ್ಪತ್ರೆ, ಐಟಿ ಪಾರ್ಕ್, ಕೇಂದ್ರೀಯ ವಿಶ್ವವಿದ್ಯಾಲಯ ಮೊದಲಾದವು ಅವರ ಕೊಡುಗೆಗಳಾಗಿವೆ ಎಂದು ತಿಳಿಸಿದ್ದಾರೆ.