ಬಸವಕಲ್ಯಾಣ: ‘ರಾಷ್ಟ್ರೀಯ ಪಕ್ಷಗಳು ಸೋಲುಂಡು ಪ್ರಾದೇಶಿಕ ಪಕ್ಷ ಜೆಡಿಎಸ್ ಅಧಿಕಾರಕ್ಕೆ ಬಂದಾಗ ಮಾತ್ರ ರಾಜ್ಯಕ್ಕೆ ಒಳ್ಳೆಯದಾಗಲು ಸಾಧ್ಯ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ಉಪ ನಾಯಕ ಬಂಡೆಪ್ಪ ಖಾಶೆಂಪೂರ್ ತಿಳಿಸಿದರು.
ಬಸವಕಲ್ಯಾಣ, ಹತ್ಯಾಳ, ಹಾರ ಕೂಡ, ಸಿರಗಾಪೂರ, ಗದಲೇಗಾಂವ್, ಮೈಸಲಗಾ ಸೇರಿದಂತೆ ವಿವಿಧ ಹಳ್ಳಿಗಳಲ್ಲಿ ಜೆಡಿಎಸ್ ಅಭ್ಯರ್ಥಿ ಸೈಯದ್ ಯಸ್ರಬ್ ಅಲಿ ಖಾದ್ರಿ ಪರ ಪ್ರಚಾರ ನಡೆಸಿ ಅವರು ಮಾತನಾಡಿದರು.
‘ರಾಜ್ಯದಿಂದ ಆಯ್ಕೆಯಾದ ಎಲ್ಲ ಬಿಜೆಪಿ ಸಂಸದರು ರಾಜ್ಯದ ಪರವಾಗಿ ಕೇಂದ್ರದಲ್ಲಿ ಧ್ವನಿ ಎತ್ತಿಲ್ಲ. ಬಸವಕಲ್ಯಾಣದಲ್ಲಿ ಸೈಯದ್, ಬೀದರ್ನಲ್ಲಿ ಬಂಡೆಪ್ಪ ಖಾಶೆಂಪೂರ್, ಬೆಂಗಳೂರಿನಲ್ಲಿ ಕುಮಾರಣ್ಣ ನಾವು ಯಾವಾಗಲೂ ನಿಮ್ಮ ಕೆಲಸ ಮಾಡಲು ತಯಾರಿದ್ದೇವೆ’ ಎಂದರು.
ಜೆಡಿಎಸ್ ಜಿಲ್ಲಾ ಅಧ್ಯಕ್ಷ ರಮೇಶ್ ಪಾಟೀಲ ಸೋಲಪುರ, ಅಭ್ಯರ್ಥಿ ಸೈಯದ್ ಯಸ್ರಬ್ ಅಲಿ ಖಾದ್ರಿ ಇದ್ದರು.